ಮುಕ್ತ, ನ್ಯಾಯ ಸಮ್ಮತ ಚುನಾವಣೆಗೆ ಸಿದ್ಧತೆ


Team Udayavani, Nov 23, 2019, 3:00 AM IST

mukta-nyay

ಮೈಸೂರು: ಹುಣಸೂರು ಉಪ ಚುನಾವಣೆಯನ್ನು ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿರುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಅಭಿರಾಮ್‌ ಜಿ. ಶಂಕರ್‌ ತಿಳಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಮೂರು ಪ್ರಮುಖ ಪಕ್ಷಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದೇವೆ.

ಚೆಕ್‌ಪೋಸ್ಟ್‌ಗಳ ಸಂಖ್ಯೆ ಹೆಚ್ಚಿಸಿದ್ದು, ಈ ಹಿಂದೆ ಮನುಗನಹಳ್ಳಿ, ವೀರನಹೊಸಹಳ್ಳಿ (ಉಮ್ಮತ್ತೂರು), ಚಿಲ್ಕುಂದ, ಗಾವಡಗೆರೆ (ಚಿಕ್ಕಾಡಗನಹಳ್ಳಿ), ಮುತ್ತುರಾಯನ ಹೊಸಹಳ್ಳಿ, ದೊಡ್ಡೆಕೊಪ್ಪಲು ಗ್ರಾಮಗಳಲ್ಲಿ ಚೆಕ್‌ಪೋಸ್ಟ್‌ ತೆರೆಯಲಾಗಿತ್ತು. ಈಗ ಅವುಗಳ ಜತೆಗೆ ಅಸ್ವಾಳು, ಶಾಂತಿಪುರ ಮತ್ತು ಶಿರೇನಹಳ್ಳಿಗಳಲ್ಲೂ ಚೆಕ್‌ಪೋಸ್ಟ್‌ ತೆರೆಯಲಾಗಿದೆ.

ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟು: ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ದಿನದಿಂದ ಈವರೆಗೆ 6,35,300 ರೂ. ಹಣ ಜಪ್ತಿ ಮಾಡಲಾಗಿದ್ದು, ಇದರಲ್ಲಿ 4ಲಕ್ಷ ರೂ.ಗಳು ಮದುವೆಗಾಗಿ ಬ್ಯಾಂಕ್‌ನಿಂದ ಡ್ರಾ ಮಾಡಿಕೊಂಡು ಬಂದಿದ್ದು, ತಿಳಿದ ನಂತರ ಹಣ ವಾಪಸ್‌ ಮಾಡಲಾಗಿದೆ. ಇನ್ನು ನಿಗದಿತ ಮಾರ್ಗಕ್ಕೆ ಬದಲಾಗಿ ಮೈಸೂರು ಮಾರ್ಗದಲ್ಲಿ ಕೇರಳಕ್ಕೆ ನಾಲ್ಕು ಟ್ಯಾಂಕರ್‌ಗಳಲ್ಲಿ ಸಾಗಿಸುತ್ತಿದ್ದ 77 ಲಕ್ಷ ರೂ. ಮೌಲ್ಯದ ಮದ್ಯ ಮತ್ತು ಸಾಗಣೆಗೆ ಬಳಸಿದ್ದ ನಾಲ್ಕು ಟ್ಯಾಂಕರ್‌ಗಳನ್ನು ಮುಟ್ಟುಗೋಲು ಹಾಕಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸೀರೆ ದಾಸ್ತಾನು ಮಾಡಿರುವ ಬಗ್ಗೆ ಕಾಂಗ್ರೆಸ್‌ನಿಂದ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಉಪಚುನಾವಣೆ ನಡೆಯುತ್ತಿರುವ ಹುಣಸೂರು ಕ್ಷೇತ್ರದ ಹೊರತಾಗಿ ಮೈಸೂರು ನಗರದಲ್ಲಿ ಸೀರೆ ವಶಪಡಿಸಿಕೊಂಡಿದ್ದು, ಮತ್ತು ಆಗ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿಲ್ಲದ ಕಾರಣ, ತಕ್ಷಣಕ್ಕೆ ಸೀರೆ ದಾಸ್ತಾನು ಮಾಡಲಾಗಿದ್ದ ಗೋದಾಮಿನ ಮಾಲಿಕರ ಮೇಲೆ ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.

ಒಣ ದಿನ ಘೋಷಣೆ: ಚುನಾವಣೆ ಆಯೋಗದ ನಿರ್ದೇಶನದಂತೆ ಮತದಾನ ಮುಕ್ತಾಯವಾಗುವ 48 ಗಂಟೆಗಳ ಮುಂಚಿನಿಂದ ಮತದಾನ ಮುಕ್ತಾಯದ ದಿನದವರೆಗೆ ಹಾಗೂ ಮತ ಎಣಿಕೆಯ ದಿನದಂದು ಒಣ ದಿವಸಗಳೆಂದು ಘೋಷಣೆ ಮಾಡಲಾಗುವುದು. ಆ ದಿನಗಳಲ್ಲಿ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ಪರವಾನಗಿ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಲಾಗುವುದು. ಜತೆಗೆ ಪರವಾನಗಿ ಪಡೆಯದ ಆವರಣದಲ್ಲಿ ಮದ್ಯ ಶೇಖರಣೆಯನ್ನು ನಿಷೇಧಿಸಿದೆ.

ಮತದಾರರ ಸೇರ್ಪಡೆ: ನೀತಿ ಸಂಹಿತೆ ಜಾರಿಗೆ ಬರುವ ದಿನದವರೆಗೆ ಮತದಾರರ ಪಟ್ಟಿಗೆ ಹೆಚ್ಚುವರಿಯಾಗಿ 434 ಪುರುಷ, 618 ಮಹಿಳೆಯರು, ಇಬ್ಬರು ಇತರೆ ಸೇರಿದಂತೆ 1054 ಜನರನ್ನು ಸೇರ್ಪಡೆಮಾಡಲಾಗಿದ್ದು, ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 227974 ಆಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಿಷ್ಯಂತ್‌ ಮಾತನಾಡಿ, ಈ ಹಿಂದೆ ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದವರ ಮೇಲೆ ನಿಗಾ ಇಡಲಾಗಿದ್ದು, ಚುನಾವಣಾ ಅಕ್ರಮಗಳಲ್ಲಿ ಭಾಗಿಯಾಗಿದ್ದ 186 ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡಿ, ಅವರ ಮೇಲೆ ನಿಗಾ ಇರಿಸಲಾಗಿದೆ. 24 ಮತ್ತು 25ರಂದು ಸಿಐಎಸ್‌ಎಫ್ನ ನಾಲ್ಕು ಕಂಪನಿಗಳು ಆಗಮಿಸಲಿದ್ದು, ಪ್ರಮುಖ ಚೆಕ್‌ಪೋಸ್ಟ್‌ಗಳಲ್ಲಿ ನಿಯೋಜನೆ, ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ ಮಾಡಿಸಲಾಗುವುದು ಎಂದರು.

ಚುನಾವಣಾ ವೀಕ್ಷಕ ಅಮರ್‌ ಖುಷ ಮಾತನಾಡಿ, ಎಲ್ಲ ರಾಜಕೀಯ ಪಕ್ಷಗಳವರೊಂದಿಗೆ ಸಭೆ ನಡೆಸಿದ್ದು, ಸೂಕ್ಷ್ಮ ಪ್ರದೇಶಗಳ ಮತಗಟ್ಟೆಗಳ ಮೇಲೆ ನಿಗಾ ಇಟ್ಟಿದ್ದೇವೆ. ಚುನಾವಣಾ ಅಕ್ರಮಗಳ ಬಗ್ಗೆ ನಮಗೆ ಬರುತ್ತಿರುವ ದೂರುಗಳ ಸಂಖ್ಯೆ ಕಡಿಮೆ ಇದೆ. ಸಾರ್ವಜನಿಕರು ಚುನಾವಣಾ ಅಕ್ರಮಗಳು ಕಂಡುಬಂದರೆ ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದು ಚುನಾವಣಾ ಆಯೋಗದ ಸಿ ವಿಜಿಲ್‌ ಆ್ಯಪ್‌ ಡೌನ್‌ಲೋಡ್‌ ಮಾಡಿಕೊಂಡು ಅಲ್ಲಿಗೆ ಅಪ್‌ಲೋಡ್‌ ಮಾಡಬಹುದಾಗಿದೆ. ಜೊತೆಗೆ ನಮ್ಮನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ ಎಂದು ತಿಳಿಸಿದರು.

ರಜೆ ಘೋಷಣೆ: ಮತದಾನ ದಿನವಾದ ಡಿ.5ರಂದು ಹುಣಸೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಮತದಾರರಿಗೆ ಮತದಾನ ಮಾಡಲು ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ, ನೌಕರರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ.

ದೂರು ನೀಡಲು ಸಂಪರ್ಕಿಸಿ: ಸಾಮಾನ್ಯ ವೀಕ್ಷಕ ಅಮರ್‌ ಖುಷ, ಮೊ. 7259813556 ಹಾಗೂ ವೆಚ್ಚ ವೀಕ್ಷಕ ಉಪಿಂದರ್‌ಬಿರ್‌ ಸಿಂಗ್‌,ಮೊ. 7899831135.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.