ದಸರಾ ಗಜಪಯಣಕ್ಕೆ ಭರದ ಸಿದ್ಧತೆ


Team Udayavani, Sep 1, 2018, 5:24 PM IST

mys-1.jpg

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾದ ಗಜಪಯಣಕ್ಕೆ ವೀರನಹೊಸಳ್ಳಿಯಲ್ಲಿ ಭಾನುವಾರ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಸಿದ್ಧತೆಗಳು ಬರದಿಂದ ಸಾಗಿದೆ. ನಾಗರಹೊಳೆ ಮುಖ್ಯ ರಸ್ತೆಯ ಎರಡು ಬದಿ ಗಿಡಗಂಟಿಗಳನ್ನು ತೆರವುಗೊಳಿಸಲಾಗುತ್ತಿದೆ. ಕಾರ್ಯಕ್ರಮ ನಡೆಯುವ ವೇದಿಕೆ ಹಾಗೂ ಗಜ ಪಯಣ ನಾಗರಹೊಳೆ ಉದ್ಯಾನವನದ ಹೆಬ್ಟಾಗಿಲಿನ ಬಳಿ ಸ್ಥಳವನ್ನು ಸಿದ್ಧಗೊಳಿಸಲಾಗುತ್ತಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಹೆಬ್ಟಾಗಿಲು ವೀರನಹೊಸಳ್ಳಿ ಗೇಟ್‌ನಿಂದ ಸುಮಾರು ಅರ್ಧ ಕಿ.ಮೀ. ದೂರದ ಜಂಗಲ್‌ ಇನ್‌ ರೆಸಾರ್ಟ್‌ ಪಕ್ಕದ ಖಾಸಗಿಯವರ ಭೂಮಿಯಲ್ಲಿ ವಿಶಾಲವಾದ ಪೆಂಡಾಲ್‌ ನಿರ್ಮಿಸಲಾಗುತ್ತಿದೆ. ಈಗಾಗಲೇ ಭೂಮಿಯನ್ನು ಸಮತಟ್ಟು ಮಾಡಲಾಗಿದೆ.
 
ವಾಹನಗಳ ಪಾರ್ಕಿಂಗ್‌ಗೆ ಪ್ರತ್ಯೇಕ ಜಾಗ ಸಿದ್ಧಗೊಳಿಸಲಾಗುತ್ತಿದೆ. ಮುಖ್ಯ ರಸ್ತೆಯಲ್ಲಿ ಗಜಗಳ ಪಯಣಕ್ಕೆ ಭರದ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ರಸ್ತೆ ಬದಿ ತೆರವು: ವೀರನಹೊಸಳ್ಳಿ ಗೇಟ್‌ನಿಂದ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಮೂರನೇ ಬ್ಲಾಕ್‌ವರೆಗಿನ ಸುಮಾರು 3.ಕಿ.ಮೀ. ವರೆಗಿನ ಎರಡು ಬದಿಯ ಬೆಳೆದು ನಿಂತಿರುವ ಗಿಡಗಂಟಿಗಳನ್ನು ತೆರವುಗೊಳಿಸಲಾಗುತ್ತಿದೆ. ರಸ್ತೆಯ ಮೋರಿಗಳಿಗೆ ಸುಣ್ಣ-ಬಣ್ಣ ಬಳಿಯಲಾಗುತ್ತಿದೆ.

ಇದಕ್ಕಾಗಿ ಜೆಸಿಬಿ ಯಂತ್ರಗಳು, ನೂರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಎಲ್ಲವೂ ದಸರಾ ಸಮಿತಿದ ಅಧ್ಯಕ್ಷ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್‌ ಮಾರ್ಗದರ್ಶನದಲ್ಲಿ ಗಜಪಯಣದ ಉಸ್ತುವಾರಿ ಗಳಾದ ಡಿಸಿಎಫ್‌ ಸಿದ್ದರಾಮಪ್ಪ ಚಳಕಾಪುರೆ, ಆರ್‌ ಎಫ್‌ಒ ಅನನ್ಯಕುಮಾರ್‌ ನೇತೃತ್ವದಲ್ಲಿ ಎಲ್ಲವೂ ನಡೆಯುತ್ತಿದೆ.

ಎಸ್‌ಪಿಎಸಿ ಸ್ಥಳ ಪರಿಶೀಲನೆ: ಗಜ ಪಯಣದ ಸಿದ್ಧತೆಗಳನ್ನು ಉಪ ವಿಭಾಗಾಧಿಕಾರಿ ಕೆ.ನಿತೀಶ್‌, ಎಸ್‌ಪಿ ಅಮಿತ್‌ಸಿಂಗ್‌, ಹುಲಿಯೋಜನೆ ಕ್ಷೇತ್ರ ನಿರ್ದೇಶಕ ಆರ್‌.ರವಿಶಂಕರ್‌, ಎಸಿಎಫ್‌ ಪ್ರಸನ್ನ ಕುಮಾರ್‌, ಡಿವೈಎಸ್‌ಪಿ ಭಾಸ್ಕರ ರೈ, ಎಸ್‌ಐ ಪುಟ್ಟಸ್ವಾಮಿ, ತಾಪಂ ಇಒ ಕೃಷ್ಣಕುಮಾರ್‌, ತಹಶೀಲ್ದಾರ್‌ ಮೋಹನ್‌, ಲೋಕೋಪಯೋಗಿ ಇಲಾಖೆ ಎಇಇ ಕೃಷ್ಣ, ಪರಿಶಿಷ್ಟ ಪಂಗಡದ ಕಲ್ಯಾಣಾಧಿಕಾರಿ ಹೊನ್ನೇಗೌಡ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಮಾರ್ಗದರ್ಶನ ಮಾಡಿದರು.

ಸೆ.3ಕ್ಕೆ ದಸರಾ ಗಜಪಡೆ ಅರಮನೆ ಪ್ರವೇಶ
ಮೈಸೂರು:
ಮೈಸೂರು ಅರಮನೆ ಮಂಡಳಿವತಿಯಿಂದ ಸೆ.3ರಂದು ಬೆಳಗ್ಗೆ 11ಗಂಟೆಗೆ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ನಾಡಹಬ್ಬ 2018ರ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಯ ಮೊದಲ ತಂಡದ ಅಂಬಾರಿ ಆನೆ ಅರ್ಜುನ ನೇತೃತ್ವದ ಆರು ಆನೆಗಳಿಗೆ ಸ್ವಾಗತ ನೀಡಲಾಗುವುದು. 

ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಟಿ. ದೇವೇಗೌಡ ಅವರ ಘನ ಉಪಸ್ಥಿತಿಯಲ್ಲಿ ಗಜಪಡೆಗೆ ಸ್ವಾಗತ ನೀಡಲಾಗುವುದು. ಶಾಸಕ ಎಸ್‌.ಎ.ರಾಮದಾಸ್‌ ಅಧ್ಯಕ್ಷತೆ ವಹಿಸುವರು. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್‌, ಸಂಸದರಾದ ಪ್ರತಾಪ್‌ ಸಿಂಹ, ಧ್ರುವನಾರಾಯಣ, ಮೈಸೂರು ಮಹಾನಗರಪಾಲಿಕೆ ಮೇಯರ್‌ ಬಿ.ಭಾಗ್ಯವತಿ, ಉಪಮೇಯರ್‌ ಇಂದಿರಾ, ಜಿಪಂ ಅಧ್ಯಕ್ಷೆ ನಯಿಮಾಸುಲ್ತಾನ, ಶಾಸಕರಾದ ಅಡಗೂರು ಎಚ್‌.ವಿಶ್ವನಾಥ್‌, ತನ್ವೀರ್‌ ಸೇಠ್ಠ, ಕೆ.ಮಹದೇವ್‌, ಎಲ್‌.ನಾಗೇಂದ್ರ, ಡಾ.ಯತೀಂದ್ರ, ಅಶ್ವಿ‌ನ್‌ ಕುಮಾರ್‌, ಹರ್ಷವರ್ಧನ್‌, ಅನಿಲ್‌ ಚಿಕ್ಕಮಾದು, ವಿಧಾನ ಪರಿಷತ್‌ ಸದಸ್ಯರಾದ ಸಂದೇಶ್‌ ನಾಗರಾಜು, ಮರಿತಿಬ್ಬೇಗೌಡ, ಕೆ.ಟಿ. ಶ್ರೀಕಂಠೇಗೌಡ, ಆರ್‌.ಧರ್ಮಸೇನ, ಕೆ.ವಿ. ನಾರಾಯಣಸ್ವಾಮಿ, ಜಿಪಂ ಉಪಾಧ್ಯಕ್ಷ ಜಿ.ನಟರಾಜ್‌, ಮೈಸೂರು ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ತಾಪಂ ಉಪಾಧ್ಯಕ್ಷ ಎನ್‌ .ಬಿ.ಮಂಜು ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.