ದಸರಾ ವೈಭವ ಆರಂಭ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ರಾಷ್ಟ್ರಪತಿ


Team Udayavani, Sep 26, 2022, 10:19 AM IST

ದಸರಾ ವೈಭವ ಆರಂಭ: ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಿದ ರಾಷ್ಟ್ರಪತಿ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಸಂಭ್ರಮ ಆರಂಭವಾಗಿದ್ದು, ಚಾಮುಂಡಿ ಬೆಟ್ಟದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಲನೆ ನೀಡಿದರು.

ಇದೇ ಮೊದಲ ಬಾರಿಗೆ ದಸರಾ ಉದ್ಘಾಟನೆಗೆ ರಾಷ್ಟ್ರಪತಿ ಆಗಮಿಸಿದ್ದು, ಬೆಳಿಗ್ಗೆ 9.45 ರಿಂದ‌10.05ರ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕ, ವೈಭವಯುತವಾದ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಂತೆಯೇ ಮೊದಲು ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ತೆರಳಿದ ರಾಷ್ಟ್ರಪತಿಗಳು ತಾಯಿಯ ದರ್ಶನ ಪಡೆದರು. ದೇವಸ್ಥಾನವನ್ನು ವೀಕ್ಷಿಸಿದರು. ದೇವಸ್ಥಾನದ ಕುರಿತು ಮಾಹಿತಿ ಪಡೆದುಕೊಂಡರು. ಬಳಿಕ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆಯೇ ಪೊಲೀಸ್ ಬ್ಯಾಂಡ್ ವತಿಯಿಂದ ರಾಷ್ಟ್ರಗೀತೆ ಮೊಳಗಿತು. ಸಭೆಯಲ್ಲಿ ಸೂಜಿ ಬಿದ್ದರೂ ಸದ್ದಾಗುವಷ್ಟು ಶಾಂತತೆ ಇತ್ತು. ಹೆಚ್ಚಿನ ಸಂಖ್ಯೆಯಲ್ಲಿ ಚಿಣ್ಣರು ಆಗಮಿಸಿದ್ದರೂ ಕೂಡ ಶಾಂತಚಿತ್ತರಾಗಿ ಕುಳಿತು ಕಾರ್ಯಕ್ರಮವನ್ನು ತದೇಕಚಿತ್ತರಾಗಿ ವೀಕ್ಷಿಸಿ ಭಾರತದ ಪ್ರಥಮ ಪ್ರಜೆಯನ್ನು ಕಣ್ತುಂಬಿಸಿಕೊಂಡು ಪುಳಕಿತರಾದರು.

ಚಾಮುಂಡೇಶ್ವರಿ ಉತ್ಸವ ಮೂರ್ತಿ ಸಿಂಗಾರಗೊಂಡಿತ್ತು. ಹಚ್ಚ ಹಸಿರು ಜರತಾರಿ ಸೀರೆ ತೊಡಿಸಿ ದೇವಿಗೆ ಸಿಂಗರಿಸಲಾಗಿತ್ತು. ಬಂಗಾರದ ಒಡವೆಗಳು, ತಾಳಿ, ವಿವಿಧ ಬಗೆಯ ಹೂವುಗಳಿಂದ ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಅಲಂಕಾರಿಸಲಾಗಿತ್ತು. ಬೆಳ್ಳಿ ಪಲ್ಲಕ್ಕಿಯಲ್ಲಿ ಮಹಿಷ ಮರ್ದಿನಿ‌ ಅವತಾರದ ದೇವಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾಗೆ ವಿದ್ಯುಕ್ತ ಚಾಲನೆ ದೊರೆಯಿತು.

ವೇದಿಕೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಉಪಸ್ಥಿತರಿದ್ದರು.

ವೇದಿಕೆಯ ಮುಂಭಾಗದಲ್ಲಿ ಶಾಸಕರುಗಳಾದ ಜಿ ಟಿ ದೇವೇಗೌಡ ಎಲ್.ನಾಗೇಂದ್ರ, , ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯರಾದ ಹೆಚ್.ವಿಶ್ವನಾಥ್, ಸಿ.ಎನ್.ಮಂಜೇಗೌಡ , ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮತ್ತಿತರರು ಉಪಸ್ಥಿತರಿದ್ದರು.

ಬಿಗಿ ಭದ್ರತೆ: ಕಾರ್ಯಕ್ರಮದ ಅಂಗವಾಗಿ ಚಾಮುಂಡಿಬೆಟ್ಟ ಹಾಗೂ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳಲ್ಲೂ ಬಿಗಿ ಪೊಲೀಸ್‌ ಭದ್ರತೆಗಾಗಿ ನಿಯೋಜಿಸಲಾಗಿದೆ. ಭಾನುವಾರ ರಾತ್ರಿಯಿಂದಲೇ ಪೊಲೀಸರು ಚಾಮುಂಡಿ ಬೆಟ್ಟದಲ್ಲಿ ಬೀಡು ಬಿಟ್ಟಿದ್ದಾರೆ. ಅಲ್ಲದೇ, ಭಾನುವಾರ ಬೆಳಗ್ಗಿನಿಂದಲೇ ಚಾಮುಂಡಿ ಬೆಟ್ಟಕ್ಕೆ ಬರುವ ಎಲ್ಲಾ ವಾಹನಗಳನ್ನು ತಪಾಸಣೆ ಮಾಡುವುದರೊಂದಿಗೆ ದಾರಿಯುದ್ದಕ್ಕೂ ಹಾಗೂ ದೇಗುಲದ ಸುತ್ತಲೂ ಲೋಹ ಶೋಧಕ, ಬಾಂಬ್‌ ಪತ್ತೆದಳು, ಶ್ವಾನ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು

ದೇಗುಲದಲ್ಲಿ ವಿಶೇಷ ಪೂಜೆ: ನವರಾತ್ರಿಯ ಆರಂಭದ ದಿನವಾದ ಇಂದು ಮುಂಜಾನೆ 4.30ರಿಂದಲೇ ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರಧಾನ ಆಗಮಿಕ ಡಾ. ಎನ್‌.ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾದವು. ಬೆಳಗಿನಿಂದಲೇ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿ ವಿವಿಧ ಪೂಜಾ ಕಾರ್ಯಗಳು ನಡೆಯುತ್ತವೆ. ಒಂಭತ್ತು ದಿನವೂ ವಿವಿಧ ಪೂಜಾ ಕಾರ್ಯಗಳು ಜರುಗಲಿದ್ದು, ಪ್ರತಿ ದಿನ ಸಂಜೆ 5 ರಿಂದ 6ರವರೆಗೆ ಮಹಾಬಲೇಶ್ವರ ದೇವಾಲಯ ಮುಂಭಾಗ ಇರುವ ದರ್ಬಾರ್‌ ಮಂಟಪದಲ್ಲಿ ಚಾಮುಂಡೇಶ್ವರಿ ದೇವಿಗೆ ದರ್ಬಾರ್‌ ಉತ್ಸವ ನೆರವೇರಲಿದೆ.

ಟಾಪ್ ನ್ಯೂಸ್

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.