ಹುಣಸೂರಿನಲ್ಲಿ ನಡೆಯುತ್ತಿರುವ ಮತಾಂತರ ತಡೆಯಿರಿ


Team Udayavani, Mar 5, 2020, 3:00 AM IST

hunasurinalli

ಹುಣಸೂರು: ಕೊಡಗಿನ ಹೆಬ್ಬಾಗಿಲು ಹುಣಸೂರು ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತಾಂತರವಾಗುತ್ತಿರುವುದು ಆಘಾತಕಾರಿ ಸಂಗತಿಯಾಗಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು, ಮತಾಂತರ ತಡೆಯಲು ಸಂಘಟಿತರಾಗಿ ಹೋರಾಟ ನಡೆಸಬೇಕೆಂದು ಸಂಸದ ಪ್ರತಾಪ್‌ ಸಿಂಹ ಕಾರ್ಯಕರ್ತರಿಗೆ ಮನವಿ ಮಾಡಿದರು.

ನಗರದ ಬ್ರಾಹ್ಮಣರ ಬಡಾವಣೆಯ ರಾಘವೇಂದ್ರಸ್ವಾಮಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನೂತನ ತಾಲೂಕು ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷ ಹಳ್ಳದಕೊಪ್ಪಲು ನಾಗಣ್ಣಗೌಡ ಅವರಿಗೆ ಪಕ್ಷದ ಬಾವುಟ ಹಸ್ತಾಂತರಿಸಿ ಅವರು ಮಾತನಾಡಿದರು.

ಮತಾಂತರ ತಡೆಗಟ್ಟಿ: ಪಕ್ಷದ ಕಾರ್ಯಕರ್ತರು, ವಿವಿಧ ಘಟಕಗಳ ಸದಸ್ಯರು ಪದಾಧಿಕಾರಿಗಳು ಇಲ್ಲಿ ನಡೆಯುತ್ತಿರುವ ಮತಾಂತರವನ್ನು ತಡೆಗಟ್ಟಲು ಮೊದಲು ಸಂಘಟಿತರಾಗಿ ಹೋರಾಟ ನಡೆಸಬೇಕು. ಯಾವುದೇ ಗೊಂದಲಕ್ಕೊಳಗಾಗದೆ, ಗಲಾಟೆ ಮಾಡಿಕೊಳ್ಳದೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ, ಸಮಸ್ಯೆಗಳು ಕಂಡು ಬಂದಲ್ಲಿ ಪಕ್ಷದ ಹಿರಿಯರನ್ನು ಸಂಪರ್ಕಿಸಬೇಕೆಂದು ಎಂದು ತಿಳಿಸಿದರು.

ಹಿಂದಿನ ಅಧ್ಯಕ್ಷ, ವಕೀಲರೂ ಆದ ಯೋಗಾನಂದಕುಮಾರ್‌ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರಿಂದ ಹಂತ ಹಂತವಾಗಿ ಪಕ್ಷ ಬಲವರ್ಧನೆ ಕಂಡಿದೆ. ಮುಂದೆ ಗ್ರಾಮ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆಗಳು ಬರಲಿದ್ದು, ನೂತನ ಅಧ್ಯಕ್ಷರು ಕಾರ್ಯಕರ್ತರು ಹಾಗೂ ಪಕ್ಷದ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬಂದವರು-ಬರುವವರನ್ನು ಗೌರವವಾಗಿ ನಡೆಸಿಕೊಂಡು ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಸಲಹೆ ನೀಡಿದರು.

ನೂತನ ಅಧ್ಯಕ್ಷ ಹಳ್ಳದಕೊಪ್ಪಲು ನಾಗಣ್ಣಗೌಡ ಮಾತನಾಡಿ, ತಮ್ಮ ರಾಜಕೀಯ ಗುರು ಮಾಜಿ ಶಾಸಕ ದಿ.ಪಾಪಣ್ಣ ಅವರ ಕಾಲದಿಂದ ಜಾತ್ಯತೀತ ತತ್ವವನ್ನು ಅಳವಡಿಸಿಕೊಂಡು ಬಂದಿದ್ದು, ಇಂದು ರಾಜಕೀಯ ಕ್ಷೇತ್ರ ಕಲುಷಿತಗೊಂಡಿದೆ. ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಮೇಳೈಸುತ್ತಿದೆ. ತಳ ಹಂತದ ಕಾರ್ಯಕರ್ತರನ್ನು ಗುರುತಿಸಿ ಸ್ಥಾನಮಾನ ನೀಡುವುದು ಬಿಜೆಪಿಯಲ್ಲಿ ಮಾತ್ರ. ಹೀಗಾಗಿ ತಾವು ಸಹ ತಳ ಹಂತದ ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು.

ಮಾಜಿ ಸಚಿವ ಸಿ.ಎಚ್‌.ವಿಜಯಶಂಕರ್‌, ಜಿಲ್ಲಾಧ್ಯಕ್ಷ ಮಹೇಂದ್ರ, ಸಂಘಟನಾ ಕಾರ್ಯದರ್ಶಿ ಸುರೇಶ್‌ಬಾಬು, ಗ್ರಾಮಾಂತರ ಉಪಾಧ್ಯಕ್ಷ ಜಾಬಗೆರೆ ರಮೇಶ್‌ಕುಮಾರ್‌, ಜಿಪಂ ಮಾಜಿ ಸದಸ್ಯ ಸಿ.ಟಿ.ರಾಜಣ್ಣ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್‌, ಜಿಲ್ಲಾ ಕಾರ್ಯದರ್ಶಿ ಹನಗೋಡು ಮಂಜುನಾಥ್‌, ಜಿಪಂ ಮಾಜಿ ಸದಸ್ಯರಾದ ಕುನ್ನೇಗೌಡ, ಪರಮೇಶ್‌, ಮುಖಂಡರಾದ ರಾಜೇಂದ್ರ, ವೀರೇಶರಾವ್‌ ಬೋಬಡೆ, ಸತ್ಯಪ್ಪ, ಮಹಿಳಾ ಘಟಕದ ಅಧ್ಯಕ್ಷೆ ವೆಂಕಟಮ್ಮ, ರವಿಕುಮಾರ್‌, ಅರಗು ಮಂಜುನಾಥ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.