ಎಲ್ ಕೆಜಿಯಿಂದ ಪಿಜಿವರೆಗೆ ಒಂದೇ ಕಡೆ ಶಿಕ್ಷಣಕ್ಕೆ ಆದ್ಯತೆ: ಶಾಸಕ ಮಂಜುನಾಥ್

ಮೂಲಸೌಕರ್ಯ ಕಲ್ಪಿಸಲು ಪೋಷಕರ ನೆರವು ಅತ್ಯಗತ್ಯ

Team Udayavani, Sep 4, 2022, 10:26 PM IST

1-asdda

ಹುಣಸೂರು : ತಾಲೂಕಿನಲ್ಲಿ ಶೈಕ್ಷಣಿಕ ಪ್ರಗತಿ ಸಾಧನೆಯ ಹಾದಿಯಲ್ಲಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾದ ಕಾರ್ಯಕ್ರಮ, ಕೆ.ಜಿ-ಪಿ.ಜಿ.ವರೆಗೆ ನಗರದಲ್ಲಿ ಅವಕಾಶ ಕಲ್ಪಿಸಿದ್ದು ಶಾಲಾ-ಕಾಲೇಜುಗಳ ಮತ್ತಷ್ಟು ಪ್ರಗತಿಗೆ ಪೋಷಕರ ಸಹಕಾರ ಅತ್ಯಗತ್ಯವೆಂದು ಶಾಸಕ ಎಚ್.ಪಿ.ಮಂಜುನಾಥ್ ಅಭಿಪ್ರಾಯಪಟ್ಟರು.

ಹುಣಸೂರಿನ ಮಹಿಳಾ ಸರಕಾರಿ ಪದವಿ ಕಾಲೇಜಿನಲ್ಲಿ ಆಯೋಜಿಸಿದ್ದ ಪೋಷಕರ ಸಭೆಯಲ್ಲಿ ಮಾತನಾಡಿದ ಅವರು ತಾವು ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಇದರಿಂದ ತಾಲೂಕಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ. ಪೋಷಕರು ತಮ್ಮ ಮಕ್ಕಳನ್ನು ಕಾಲೇಜಿಗೆ ಕಳುಹಿಸಿದರಷ್ಟೆ ಸಾಲದು, ಆಗಾಗ್ಗೆ ಭೇಟಿ ಇತ್ತು ಮಕ್ಕಳ ಪ್ರಗತಿಯನ್ನು ಗಮನಿಸಿರಿ.

ಕೆ.ಜಿ-ಪಿ.ಜಿ.ವರೆಗೆ ಅವಕಾಶ
ಇಲ್ಲಿನ ಮಹಿಳಾ ಕಾಲೇಜು ಕ್ಯಾಂಪಸ್‌ನಲ್ಲಿ ಐದು ಕೋಟಿ ವೆಚ್ಚದ ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದೆ. ಮತ್ತೊಂದು ದುಸ್ಥಿತಿ ಕಟ್ಟಡವನ್ನು ಕೆಡವಿ ಒಂದು ಕೋಟಿ ವೆಚ್ಚದ ಮತ್ತೊಂದು ಕಟ್ಟಡ ನಿರ್ಮಿಸಲಾಗುವುದು. ಕಾಲೇಜಿನಲ್ಲಿ ಉತ್ತಮ ಪ್ರಾಧ್ಯಾಪಕರಿದ್ದಾರೆ. ಖಾಸಗಿ ಕಾಲೇಜು ಮೀರಿಸುವಂತೆ ಅತ್ಯುತ್ತಮ ಫಲಿತಾಂಶ ಬಂದಿದೆ. ಕ್ರೀಡೆ ಸೇರಿದಂತೆ ಎಲ್ಲ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದು, ಪೋಷಕರು ಅತ್ಯುತ್ತಮ ಆಯ್ಕೆ ಮಾಡಿಕೊಂಡಿದ್ದೀರೆAದು ಸಂಸತ ವ್ಯಕ್ತಪಡಿಸಿ. ತಾಲೂಕಿನಲ್ಲಿ ಎಲ್.ಕೆ.ಜಿ.ಯಿಂದ ಸ್ನಾತಕೋತ್ತರ ವಿಭಾಗ, ಪಿಎಚ್‌ಡಿವರೆಗೂ ಅವಕಾಶವಿದ್ದು, ಈಗಾಗಲೆ ದೇವರಾಜ ಅರಸು ಕಾಲೇಜು ನ್ಯಾಕ್ ಮಾನ್ಯತೆಗೆ ಒಳಗಾಗಿದ್ದು, ಇದೀಗ ಈ ಕಾಲೇಜು ನ್ಯಾಕ್ ಮಾನ್ಯತೆಗೆ ಒಳಪಡಬೇಕಿದ್ದು, ಪೋಷಕರ ಸಹಕಾರ, ಕೊಡುಗೆ ನೀಡುವಂತೆ ಕೋರಿದರು.

ಪ್ರಾಚಾರ್ಯ ಜ್ಞಾನಪ್ರಕಾಶ್ ಕಾಲೇಜಿನ ನಿಯಮಗಳು ಹಾಗೂ ಪೋಷಕರ ಪಾತ್ರದ ಬಗ್ಗೆ, ಸಹಾಯಕಪ್ರಾಧ್ಯಾಪಕ ಶ್ರೀನಿವಾಸ್ ನೂತನ ಶಿಕ್ಷಣ ನೀತಿ ಕುರಿತು ಮಾಹಿತಿ ನೀಡಿದರು. ಸಿಡಿಸಿ ಉಪಾಧ್ಯಕ್ಷ ಹನಗೋಡುನಟರಾಜ್, ಸಂಚಾಲಕ ಪುಟ್ಟಶೆಟ್ಟಿ, ಪೋಷಕರ ಸಮಿತಿ ಸಂಚಾಲಕ ನಂಜುAಡಸ್ವಾಮಿ ಮಾತನಾಡಿದರು. ಸಿಡಿಸಿ ಸದಸ್ಯರಾದ ನಾಗರಾಜ್, ನಿಂಗರಾಜಪ್ಪ, ನಂದಿನಿ, ಅನುಷಾ, ಚಿನ್ನವೀರಯ್ಯ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ಪೋಷಕರು ಬಾಗವಹಿಸಿದ್ದರು.

ಬಸ್ ಸೌಲಭ್ಯ ಕಲ್ಪಿಸಿ
ಕಾಲೇಜಿಗೆ ಮಕ್ಕಳು ಬರಲು ರಾಮಪಟ್ಟಣ, ಬಲ್ಲೇನಹಳ್ಳಿ, ಕೂಡ್ಲೂರು, ವೀರನಹೊಸಹಳ್ಳಿ ಸೇರಿದಂತೆ ಅನೇಕ ಹಳ್ಳಿಗಳಿಂದ ಸಕಾಲದಲ್ಲಿ ಬಸ್‌ಗಳಿಲ್ಲದೆ ಮಕ್ಕಳಿಗೆ ತೊಂದರೆಯಾಗಿದ್ದು ಸಕಾಲದಲ್ಲಿ ಬಸ್ ಬಿಡುವಂತೆ ಪೋಷಕರು ಶಾಸಕರಲ್ಲಿ ಮನವಿ ಮಾಡಿದರೆ, ವಿದ್ಯಾರ್ಥಿನಿ ಸ್ವಾತಿ ರಾಜ್ಯ ಶಾಸ್ತç ವಿಭಾಗಕ್ಕೆ ಅಧ್ಯಾಪಕರ ಕೊರತೆ ಇದೆ ಎಂದರೆ, ಪ್ರತಿಭಾ, ಸಲಿನಾ ಮತ್ತಿತರರು ಕನ್ನಡ, ಹಿಂದಿ, ಉರ್ದು ಭಾಷೆಗೆ ಪ್ರಾಧ್ಯಾಪಕರಿಲ್ಲದೆ ಮೊದಲ ಸೆಮ್ ಪೂರೈಸಿದ್ದೇವೆ. ಈಗಲಾದರೂ ಅತಿಥಿ ಶಿಕ್ಷಕರನ್ನು ನೇಮಿಸಿರೆಂದರೆ, ವಿದ್ಯಾರ್ಥಿನಿ ಅನುಷಾ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕಾಲೇಜು ಆವರಣದಲ್ಲಿ ಕ್ಯಾಂಟೀನ್ ಸ್ಥಾಪಿಸಬೇಕೆಂಬ ಕೋರಿಕೆಗೆ ಬಸ್ ಸಮಸ್ಯೆ ನೀಗಿಸಲು, ಅಗತ್ಯ ಅಧ್ಯಾಪಕರನ್ನು ನೇಮಿಸಲು ಕ್ರಮವಹಿಸಲಾಗುವುದು, ಪರೀಕ್ಷಾ ಸಂದರ್ಭದಲ್ಲಿ ವೈಯಕ್ತಿಕವಾಗಿ ಕ್ಯಾಂಟಿನ್ ಸೌಲಭ್ಯ ಕಲ್ಪಿಸುವೆನೆಂದು ಭರವಸೆ ಇತ್ತರು.

ಹುಣಸೂರಿನ ಮಹಾರಾಣಿ ಕಾಲೇಜ್
ಸಭೆಯಲ್ಲಿ ಅನೇಕ ಪೋಷಕರು ಹುಣಸೂರು ಮಹಿಳಾ ಕಾಲೇಜು ಮೈಸೂರಿನ ಮಹಾರಾಣಿ ಕಾಲೇಜಿಗೇನೂ ಕಡಿಮೆ ಇಲ್ಲ, ಇಲ್ಲಿ ಎಲ್ಲವೂ ಅಚ್ಚುಕಟ್ಟಾಗಿದೆ. ಹೀಗಾಗಿ ಹುಣಸೂರಿನ ಮಹಾರಾಣಿ ಕಾಲೇಜ್ ಎಂಬ ಬಣ್ಣನೆಗೆ ಸಭೆಯಲ್ಲಿ ಹರ್ಷೋದ್ಗಾರ ಕೇಳಿಬಂತು. ಮಾತನಾಡಿದ ಹಲವಾರು ಪೋಷಕರು ಶಾಸಕರು ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.