ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಚರ್ಚೆಯಲ್ಲಿ ಪರ-ವಿರೋಧ


Team Udayavani, Jun 23, 2019, 3:00 AM IST

rashtriya

ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಕುರಿತು ರಾಷ್ಟ್ರೀಯ ಶಿಕ್ಷಣ ಚರ್ಚಾ ವೇದಿಕೆ ಏರ್ಪಡಿಸಿದ್ದ ಚರ್ಚೆಯಲ್ಲಿ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಯಿತು. ಮಾನಸ ಗಂಗೋತ್ರಿಯ ಗಾಂಧಿಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜವಾದಿ ಪ. ಮಲ್ಲೇಶ್‌, ಸದ್ಯ ನಮ್ಮೆಲ್ಲರ ಮುಂದೆ ರಾಷ್ಟ್ರೀಯ ಶಿಕ್ಷಣ ನೀತಿ- 2019ರ ಕರಡು ಪ್ರಕಟವಾಗಿದೆ.

ಕೇಂದ್ರ ಸರ್ಕಾರ ಈ ಕರಡನ್ನು ಸಾರ್ವಜನಿಕರ ಅಭಿಪ್ರಾಯ ಕ್ರೋಢೀಕರಿಸಲು ಮಂಡಿಸಿದೆ. ಸಮಗ್ರವಾಗಿ ಈ ಕರಡನ್ನು ಪರಿಶೀಲಿಸಿ ಅದರ ಗುಣದೋಷ ಗುರುತಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಒಂದು ರಾಷ್ಟ್ರದ, ಜನಾಂಗದ ಭವಿಷ್ಯವನ್ನು ರೂಪಿಸುವ, ಬದುಕಿನ ಮಾರ್ಗವನ್ನು ಕಂಡುಕೊಳ್ಳುವ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಮೇಲ್ನೋಟಕ್ಕೆ ಆರ್‌ಎಸ್‌ಎಸ್‌ನ ಪ್ರತಿಪಾದಿಸುವ ಹಲವು ಅಂಶಗಳನ್ನು ಈ ಕರಡು ಒಳಗೊಂಡಿದೆ ಎಂದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಪ್ರೊ.ಸಿದ್ದೇಗೌಡ, ರಾಷ್ಟ್ರೀಯ ಶಿಕ್ಷಣ ನೀತಿ ಕರಡಿನಲ್ಲಿ ಯಾವುದೇ ಹಿಡನ್‌ ಅಜೆಂಡಾ ಇಲ್ಲ. ಭಾಷೆ ಬಗ್ಗೆ ಮಡಿವಂತಿಕೆ ಬೇಡ. ಮೇಲ್ನೋಟಕ್ಕೆ ಆರ್‌ಎಸ್‌ಎಸ್‌ನ ಹಲವು ಅಂಶಗಳನ್ನು ಒಳಗೊಂಡಿದೆ ಎಂದು ಕಂಡರೂ ವೈಜ್ಞಾನಿಕವಾಗಿ ಎಲ್ಲಾ ಅಂಶಗಳನ್ನು ಹೇಳಲಾಗಿದೆ ಎಂದರು.

ಪತ್ರಕರ್ತ ಕೃಷ್ಣಪ್ರಸಾದ್‌ ಮಾತನಾಡಿ, ಅಂಗನವಾಡಿಯಿಂದ ಪಿಎಚ್‌.ಡಿ ಪದವಿಯವರೆಗಿನ ಶಿಕ್ಷಣ ವ್ಯವಸ್ಥೆ ಸುಧಾರಿಸಬೇಕಿದೆ. ಶಿಕ್ಷಣ ನೀತಿ ಕರಡಿನಲ್ಲಿ ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಉನ್ನತ ಶಿಕ್ಷಣದ ಬಗ್ಗೆಯೂ ಹೆಚ್ಚು ಚರ್ಚೆ ಮಾಡುತ್ತಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಣ ರಿಯಲ್‌ ಎಸ್ಟೇಟ್‌ ವ್ಯಾಪಾರದಂತಾಗಿದೆ. ಪ್ರಾಚೀನ ಭಾಷೆಗಳಾದ ಪಾಲಿ, ಪ್ರಾಕೃತ, ಫ‌‌ರ್ಷಿಯನ್‌ ಮತ್ತು ಸಂಸ್ಕೃತ ಭಾಷೆಗಳ ಬಗ್ಗೆ ಹೆಚ್ಚು ಒತ್ತು ನೀಡಿದ್ದಾರೆ ಎಂದರು.

ತುಮಕೂರು ವಿವಿ ಕುಲಪತಿ ಪ್ರೊ. ಸಿದ್ದೇಗೌಡ ಮಾತನಾಡಿ, ಈ ಕರಡಿನಲ್ಲಿ ಯಾವುದೇ ಹಿಡನ್‌ ಅಜೆಂಡಾ ಇಲ್ಲ. ಜಾಗತಿಕವಾಗಿ ನಮ್ಮ ಕೌಶಲ್ಯಗಳು ಹೇಗಿರಬೇಕೆಂಬ ಅಂಶಗಳನ್ನು ಕರಡಿನಲ್ಲಿ ಸೇರಿಸಲಾಗಿದೆ. ಇದು ಹೊಸ ಬದಲಾವಣೆ ತರುವಲ್ಲಿ ಸಹಕಾರಿಯಾಗಲಿದೆ. ವೈಜ್ಞಾನಿಕವಾಗಿ ಎಲ್ಲಾ ವಿಚಾರಗಳನ್ನು ಕರಡಿನಲ್ಲಿ ಚರ್ಚಿಸಲಾಗಿದೆ. ಆದರೆ, ಈಗಾಗಲೇ ಒಂದು ಶಿಕ್ಷಣಕ್ಕೆ ಹೊಂದಿರುವ ನಮ್ಮನ್ನು ಅದು ಹೇಗೆ ಬದಲಾವಣೆಗೆ ಆಗುವಂತೆ ಮಾಡುತ್ತದೆ ಎಂಬುದು ಸವಾಲಿನ ವಿಚಾರ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಡೀನ್‌ ಜಗದೀಶ್‌, ಪ್ರೊ.ಉಮಾಪತಿ ಮಾತನಾಡಿದರು. ಪ್ರೊ. ಬಸವರಾಜು, ಪ್ರೊ. ಕಾಳಚನ್ನೇಗೌಡ, ಪ್ರೊ.ಪಂಡಿತಾರಾಧ್ಯ, ಕನ್ನಡಪರ ಹೋರಾಟಗಾರ ಸ.ರ.ಸುದರ್ಶನ, ಸಾಹಿತಿ ಬಸವರಾಜು, ಸುಬ್ರಹ್ಮಣ್ಯ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಕರಡಿನಲ್ಲಿ ಗಾಂಧಿ, ಅಂಬೇಡ್ಕರ್‌ರನ್ನು ನೆನಪಿಸಿಕೊಂಡಂತೆ ನೆಹರು ಅವರ ಹೆಸರು ಪ್ರಸ್ತಾಪಿಸುವುದಿಲ್ಲ. ಇಡೀ ಕರಡಿನಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಪದದ ಬಳಕೆ ಇಲ್ಲ ಎಂದರು.
-ಕೃಷ್ಣಪ್ರಸಾದ್‌, ಹಿರಿಯ ಪತ್ರಕರ್ತ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.