ಭೂಮಿ ಸಂರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಿ


Team Udayavani, Jul 8, 2018, 3:34 PM IST

m3-bhoomi.jpg

ಮೈಸೂರು: ಅನ್ನಕೊಡುವ ಭೂಮಿಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ವರ್ಗಾಯಿಸಿ ನೆಮ್ಮದಿಯಾಗಿ ಬದುಕಲು ನಾವೆಲ್ಲರೂ ಕೈ ಜೋಡಿಸಬೇಕು ಎಂದು ಶಾಸಕ ಎಲ್‌.ನಾಗೇಂದ್ರ ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಜಿಲ್ಲಾ ಪತ್ರಕರ್ತರ ಸಂಘ, ರಾಜೀವ್‌ ಸ್ನೇಹ ಬಳಗ ಮತ್ತು ಕ್ಷೇತ್ರ ಪ್ರಚಾರ ನಿರ್ದೇಶನಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಭೂಮಿತಾಯಿಯನ್ನು ರಕ್ಷಿಸಿ -ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಪರಿಸರ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪರಿಸರ ಉಳಿಸಿ: ಭೂಮಿಯಲ್ಲಿ ಬದುಕುತ್ತಿರುವ ಪ್ರತಿಯೊಬ್ಬರಿಗೂ ಈ ಪರಿಸರವನ್ನು ವಿವೇಚನೆಯಿಂದ ಬಳಸಿಕೊಳ್ಳುವ ಜೊತೆಗೆ ಮುಂದಿನ ಪೀಳಿಗೆಗೆ ಯೋಗ್ಯ ಪರಿಸರ ಉಳಿಸುವುದು ಮಹತ್ತರ ಜವಾಬ್ದಾರಿ. ಪ್ರಕೃತಿಯ ಮಡಿಲಲ್ಲಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಆ ನಿಟ್ಟಿನಲ್ಲಿ ವಿವಿಧ ಯೋಜನೆಗಳಲ್ಲಿ ಪರಿಸರ ಸಂರಕ್ಷಣೆ ಅರಿವು ಮೂಡಿಸುತ್ತಿದ್ದಾರೆ ಎಂದು ತಿಳಿಸಿದರು. 

ಮನೆಯಲಿ ಹಸಿರಿರಲಿ: ವಿಧಾನ ಪರಿಷತ್‌ ಮಾಜಿ ಸದಸ್ಯ ಡಿ.ಮಾದೇಗೌಡ ಮಾತನಾಡಿ, ಹಚ್ಚ ಹಸಿರು ವಾತಾವರಣ-ಸುಖೀ ಜೀವನದ ಸೋಪಾನ ಎನ್ನುವ ಧ್ಯೇಯವಾಕ್ಯದಂತೆ ಪ್ರತಿಯೊಬ್ಬರೂ ತಮ್ಮ ಮನೆಗಳ ಆವರಣದಲ್ಲಿ ಗಿಡ ನೆಡಬೇಕು. ಪ್ರತಿ ಮನೆ ಹಸಿರಿನಿಂದ ಇರುವುದರಿಂದ ಶುದ್ಧ ಗಾಳಿ ಸೇವನೆ ಮಾಡಿ, ಭೂಮಿತಾಯಿಯನ್ನು ರಕ್ಷಿಸಿಕೊಂಡು ಪ್ರತಿಯೊಬ್ಬರೂ ಸಸ್ಯಾರಾಧನೆ ಮಾಡುವುದಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅನನ್ಯವಾದುದು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಗೃತಿ ಮಾಹಿತಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಎ.ಶ್ರೀಹರಿ ಮಾತನಾಡಿ, ಪರಿಶುದ್ಧ ಗಾಳಿ ಪಡೆಯಲು ಒಬ್ಬ ವ್ಯಕ್ತಿ ಏಳು ಮರಗಳನ್ನು ಬೆಳೆಸಬೇಕು. ಪರಿಸರದ ಹೊಣೆ ಅರಿತು ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ 700 ಸ್ವತ್ಛತಾ ಕಾರ್ಯಕ್ರಮಗಳು, 300 ಪರಿಸರ ಜಾಗೃತಿ ಮಾಹಿತಿ ಹಾಗೂ ಜಾಥಾ ಕಾರ್ಯಕ್ರಮ, 200 ಶಾಲೆಗಳಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನಡೆಸಲಾಗಿದೆ ಎಂದು ವಿವರಿಸಿದರು.

ಜಿಲ್ಲಾ ಸಹಕಾರ ಒಕ್ಕೂಟದ‌ ಅಧ್ಯಕ್ಷ ಎಚ್‌.ವಿ.ರಾಜೀವ್‌ ಮಾತನಾಡಿ, ಪ್ರಕೃತಿಯೊಂದಿಗೆ ನಿಕಟ ಸಂಬಂಧ ಹೊಂದಿ,  ನಮ್ಮ ಮನೆ, ನಮ್ಮ ಪರಿಸರ, ನಮ್ಮ ಸುತ್ತಮುತ್ತಲಿನ ವಾತಾವರಣದ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸುವಂತೆ ಡಾ.ವೀರೇಂದ್ರ ಹೆಗ್ಗಡೆಯವರು ಮಾಡಿದ್ದಾರೆ. ನಾಳಿನ ಮಕ್ಕಳ ಉಳಿವಿಗಾಗಿ ಪ್ರತಿಯೊಬ್ಬರು ಗಿಡ ಮರಗಳನ್ನು ಉಳಿಸಿ-ಬೆಳಸಬೇಕು ಎಂದರು.

ಜಾಗೃತಿಜಾಥಾ: ಇದೇ ವೇಳೆ ಭೂಮಿತಾಯಿಯನ್ನು ರಕ್ಷಿಸಿ-ಮುಂದಿನ ಪೀಳಿಗೆಗೆ ವರ್ಗಾಯಿಸಿ ಎಂಬ ಪರಿಸರ ಜಾಥಾ ಕಾರ್ಯಕ್ರಮವನ್ನು ಹೆಬ್ಟಾಳದ ಅನ್ನಪೂರ್ಣೇಶ್ವರಿ ದೇವಸ್ಥಾನದಿಂದ ಅಭಿಷೇಕ್‌ ವೃತ್ತದವರೆಗೆ ಜಾಗೃತಿ ಜಾಥಾ ನಡೆಸಲಾಯಿತು. 

ಕಾರ್ಯಕ್ರಮದಲ್ಲಿ ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜಾಚಾರ್‌, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ವಿಜಯಕುಮಾರ್‌ ನಾಗನಾಳ, ಪಾಲಿಕೆ ಸದಸ್ಯ ಚೆಲುವೇಗೌಡ ಮೊದಲಾದವರು ಹಾಜರಿದ್ದರು.  

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Suraj Revanna ಸತ್ಯ ಹೆಚ್ಚು ದಿನ ಮುಚ್ಚಿಡಲು ಸಾಧ್ಯವಿಲ್ಲ

Untitled-1

BJP-JDS 19 ಸಂಸದರಿದ್ರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಾಮ: ಎಂ.ಲಕ್ಷ್ಮಣ್‌

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Army Air Defence: ಸಿಯಾಚಿನ್‌ನಲ್ಲಿ ಕರ್ತವ್ಯ ನಿರ್ವಹಿಸಲಿರುವ ಮೈಸೂರು ಮಹಿಳೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Mysore: ಕೆಆರ್‌ ಎಸ್‌ ಗೆ ಡಿಸಿಎಂ ಡಿಕೆ ಶಿವಕುಮಾರ್‌ ಭೇಟಿ, ಅಧಿಕಾರಿಗಳ ಜತೆ ಸಮಾಲೋಚನೆ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

Hunsur ಬುಡಸಹಿತ ಉರುಳಿ ಬಿದ್ದ ತೆಂಗಿನ ಮರ; ಮನೆ ಛಾವಣಿಗೆ ಹಾನಿ,ಸ್ಕೂಟರ್‌ ಜಖಂ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.