
ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jun 6, 2023, 2:41 PM IST

ಮೈಸೂರು: ವಿದ್ಯುತ್ ದರ ಏರಿಕೆ ಖಂಡಿಸಿ ನಗರ ಮತ್ತು ಗ್ರಾಮಾಂತರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಸೋಮ ವಾರ ಶಾಸಕ ಟಿ.ಎಸ್. ಶ್ರೀವತ್ಸ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ. ಜಾರ್ಜ್ಗೆ ಧಿಕ್ಕಾರ ಕೂಗಿದರು. 200 ಯೂನಿಟ್ ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ 80 ಯೂನಿಟ್ ಕೊಟ್ಟಿದ್ದಾರೆ. ಈ ಮೋಸವನ್ನು ನಿಲ್ಲಿಸುವಂತೆ ಆಗ್ರಹಿಸಿದರು.
ಗೋಹತ್ಯೆ ನಿಷೇಧ ಕಾಯ್ದೆ ಮುಂದುರಿಸಬೇಕು. ಹಾಲಿನ ಪ್ರೋತ್ಸಾಹ ಧನ ಕಡಿತಕ್ಕೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.
ವಿದ್ಯುತ್ ದರ ಹೆಚ್ಚಿಸದಿರುವಂತೆ ಭಿತ್ತಿಪತ್ರ ಪ್ರದರ್ಶಿಸಿಸಿ ಗಮನಸೆಳೆದರು. ಶಾಸಕ ಶ್ರೀವತ್ಸ ಮಾತನಾಡಿ, ಚುನಾವಣೆ ಪೂರ್ವದಲ್ಲಿ ಬಜರಂಗದಳ ನಿಷೇಧಿಸುವುದಾಗಿ ಘೋಷಿಸಿದರು. ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳು ವಿಶೇಷವಾಗಿ ಪೂಜೆ ಮಾಡುವ ಗೋ ರಕ್ಷಣೆ ಕಾಯಿದೆ ಹಿಂಪಡೆಯುವ ಮಾತುಗಳನ್ನಾಡುತ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿಯಲ್ಲಿ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ವಾಗ್ಧಾನ ನೀಡಿದ್ದರು. ಚುನಾವಣಾ ಭಾಷಣ ದಲ್ಲಿ ಸಿದ್ದರಾಮಯ್ಯ ಅವರು ನಂಗೂ, ನಿಂಗೂ ಫ್ರೀ ಎನ್ನುತ್ತಿದ್ದರು. ಈಗ ನಿಯಮ ತರುತ್ತಿ ದ್ದಾರೆ. ಇದು ಹೇಳುವುದೊಂದು ಮಾಡುವುದೊಂದು ಎಂಬಂತಾಗಿದೆ ಎಂದು ಟೀಕಿಸಿದರು.
ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಮಾತ ನಾಡಿ, ಜನಾದೇಶ ಕೊಟ್ಟ ಮತದಾರರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದೆ. ವ್ಯಾಪಾರಸ್ಥರು ಗ್ರಾಹಕರಿಗೆ ಟೋಪಿ ಹಾಕುವಂತೆ ಜನರಿಗೆ ಟೋಪಿ ಹಾಕಿದೆ. ದೇಶದ ಇತರ ರಾಜ್ಯಗಳಲ್ಲಿರುವ ಕಾಂಗ್ರೆಸ್ ಸರ್ಕಾರಗಳು ಗ್ಯಾರಂಟಿ ಭರವಸೆಯನ್ನು ಈಡೇರಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಲ್. ನಾಗೇಂದ್ರ, ಮುಖಂಡರಾದ ಕವೀಶ್ ಗೌಡ, ಬಿಜೆಪಿ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಗಿರಿಧರ್, ಜಯಪ್ರಕಾಶ್ (ಜೆಪಿ) ಮುಂತಾದವರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

Cauvery; ತಮಿಳುನಾಡಿಗೆ ಮತ್ತೆ ನೀರು ಹರಿಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ: ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

Mysuru Dasara: ಅರಮನೆಗೆ ಬಂದಿಳಿದ ಗಜಪಡೆಯ 2ನೇ ತಂಡ

Mysore; ರಾಯಣ್ಣನ ಹೆಸರಲ್ಲಿ 110 ಎಕರೆಯಲ್ಲಿ ಸೈನಿಕ ಶಾಲೆ: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ

Muslim ಮಹಿಳೆಯರ ಪರವಾಗಾಗಿ ಏಕೆ ನಿಲ್ಲಲಿಲ್ಲ?: ವಿಪಕ್ಷಗಳ ವಿರುದ್ಧ ಪ್ರಧಾನಿ ಕಿಡಿ

Ujjain ; ಅತ್ಯಾಚಾರಕ್ಕೊಳಗಾಗಿ ಬೀದಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ನಡೆದ 12ರ ಬಾಲೆ !!

BYJU’s Lay Off: ಆತಂಕದಲ್ಲಿ ಬೈಜೂಸ್ ಉದ್ಯೋಗಿಗಳು…3,500 ನೌಕರರ ಕಡಿತಕ್ಕೆ ಸಿದ್ಧತೆ

India-Canada ಸಂಬಂಧ ಹದಗೆಡಿಸಲು ನಿಜ್ಜರ್ ಪ್ರಕರಣದಲ್ಲಿ ಪಾಕಿಸ್ಥಾನದ ISI ಸಂಚು

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !