ಕಾರ್ಖಾನೆ ವಿರುದ್ಧ ಅರೆ ಬೆತ್ತಲೆ ಪ್ರತಿಭಟನೆ


Team Udayavani, Dec 3, 2020, 7:05 PM IST

mysuru-tdy-1

ನಂಜನಗೂಡು: ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಇದೇ ಘಟಕದಲ್ಲಿ ಉದ್ಯೋಗ ಅಥವಾ ಭೂಮಿ ವಾಪಸ್‌ ಎಂಬ ಬೇಡಿಕೆಯೊಂದಿಗೆ ಆರಂಭಿಸಿರುವ ಅಹೋರಾತ್ರಿ ಹೋರಾಟ ಹತ್ತನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ಅರೆ ಬೆತ್ತಲೆಯ ಪ್ರತಿಭಟನೆಯಾಗಿ ಮಾರ್ಪಟ್ಟಿತ್ತು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಜನಾಂದೋಲನ ಮಹಾಮೈತ್ರಿ ದಲಿತ ಸಂಘಟನೆ, ಸ್ವರಾಜ್‌ ಇಂಡಿಯಾ ಸಹಯೋಗದೊಂದಿಗೆ ಬುಧವಾರ ನಡೆದ ಧರಣಿಯಲ್ಲಿ ಅಖೀಲ ಭಾರತ ಯುವಜನ ಮಹಿಳಾ ಸಂಘ, ಅಖೀಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘ ಮತ್ತಿತರರ ಸಂಘಟನೆಗಳು ಪಾಲ್ಗೊಂಡರು ಸಾಥ್‌ ನೀಡಿದವು.

ಅಹೋರಾತ್ರಿ ಪ್ರತಿಭಟನೆಯನ್ನು ಅರೆ ಬೆತ್ತಲೆಯಾಗಿ ರೈತರು ಮುನ್ನಡೆಸಿದರು. ತಾಲೂಕಿನ ಅಡಕನಹಳ್ಳಿ ಹುಂಡಿಯ ಕೈಗಾರಿಕಾವಲಯದಏಷಿಯನ್‌ಪೇಂಟ್ಸ್‌ಕಾರ್ಖಾನೆ ಎದುರು ನಡೆಸುತ್ತಿರುವ ಧರಣಿಯನ್ನುದ್ದೇಶಿಸಿ ಮಾತನಾಡಿದರಾಜ್ಯ ರೈತ ಸಂಘದ ನಾಯಕ ಅಶ್ವತ್ಥ್ ನಾರಾಯ ಅರಸು,ಜಿಲ್ಲಾಧ್ಯಕ್ಷ ಹೊಸೂರು ಕುಮಾರ್‌, ಯುವಜನ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ಉಮಾದೇವಿ, ಮಹಿಳಾ ಸಾಂಸ್ಕೃತಿಕ ಸಂಘದ ಅಧ್ಯಕ್ಷೆ ಸಂಧ್ಯಾ, ಮುದ್ದು ಕೃಷ್ಣ ಮತ್ತಿತರರು ಮಾತನಾಡಿ,ಇದೇಘಟಕದಲ್ಲಿಉದ್ಯೋಗ ನೀಡಿ ಇಲ್ಲವೇ ಭೂಮಿ ವಾಪಸ್‌ ಆಗುವವರಿಗೂ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದುಎಚ್ಚರಿಕೆ ನೀಡಿದರು.

ತಾಳ್ಮೆ ಪರೀಕ್ಷಿಸಬೇಡಿ:ಹೋರಾಟಗಾರರ ತಾಳ್ಮೆಯನ್ನು ಪರೀಕ್ಷಿಸಬೇಡಿ. ಸರ್ಕಾರದ ನಿರ್ಲಕ್ಷ್ಯ ಧೋರಣೆ ಹೀಗೆ ಮುಂದುವರಿದರೆ ಹೋರಾಟದಸ್ವರೂಪವೇಬದಲಾಗುತ್ತದೆ. ಇದಕ್ಕೆ ಅವಕಾಶ ನೀಡಬೇಡಿ ಎಂದು ತಿಳಿಸಿದರು.ಈವೇಳೆರೈತಮುಖಂಡರಾದಹೊಸಕೋಟೆ ಬಸವರಾಜು, ಶಿರಮಳ್ಳಿಸಿದ್ದಪ್ಪ, ಬೊಕ್ಕಳ್ಳಿ ನಂಜುಂಡಸ್ವಾಮಿ, ಹೆಜ್ಜಿಗೆಪ್ರಕಾಶ, ಪ್ರಸನ್ನಗೌಡ, ಪ್ರಮೋದ, ಆಕಾಶ,ಸಚಿನ್‌, ಚಂದ್ರಕಲಾ, ಆಶಿಯಾಬೇಗಂ, ತಿ.ನರಸೀಪುರದ ಶಿವನಂಜು, ಬನ್ನೂರಿನಹುಚ್ಚೇಗೌಡ, ತಾಲೂಕು ವಸತಿ ನಿಲಯಗಳ ಸಂಘಟನೆಯ ಚಂದ್ರಮ್ಮ, ಸಿದ್ದಯ್ಯ ಮತ್ತಿತರರು ಉಪಸ್ಥಿತರಿದ್ದರು.

ಬಂದ್‌ಗೆ ಮೈಸೂರು ಉದ್ಯಮ ಸಂಘಗಳ ಒಕ್ಕೂಟ ಬೆಂಬಲ ಇಲ್ಲ :

ಮೈಸೂರು: ಕನ್ನಡ ಪರ ಸಂಘಟನೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲ ನೀಡದಿರಲು ಮೈಸೂರು ಉದ್ಯಮ ಸಂಘಗಳ ಒಕ್ಕೂಟವು ನಿರ್ಧಾರಿಸಿದೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳುಮಾತನಾಡಿ, ಈಗಾಗಲೇ ಕೊರೊನಾ ಹೊಡೆತದಿಂದ ನೆಲಕಚ್ಚಿರುವ ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಉದ್ದಿಮಗಳು ಈಗ ತಾನೆ ಚಿಗುರೊಡೆಯುತ್ತಿವೆ.ಚೇತರಿಸಿಕೊಳ್ಳುವ ಸಮಯದಲ್ಲಿ ಬಂದ್‌ಗೆ ಕರೆನೀಡಿರುವುದು ಸರಿಯಲ್ಲ. ಕನ್ನಡ ನಾಡು ನುಡಿ, ಭಾಷೆಮತ್ತು ಜಲಕ್ಕೆ ಸಂಬಂಧಿಸಿದಂತೆ ಹೋರಾಟಕ್ಕೆ ಬದ್ಧವಾಗಿದ್ದೇವೆ. ಬಂದ್‌ ಉದ್ದೇಶವನ್ನು ಬೆಂಬಲಿಸುತ್ತೇವೆ. ಆದರೆ, ಸಂಕಷ್ಟ ಪರಿಸ್ಥಿತಿಯಲ್ಲಿ ಬಂದ್‌ ನಡೆಸುತ್ತಿರುವುದಕ್ಕೆ ನಮ್ಮ

ವಿರೋಧವಿದೆ.ಹೀಗಾಗಿಮೈಸೂರಿನಲ್ಲಿ ಟ್ಯಾಕ್ಸಿಟ್ರಾವೆಲ್ಸ್, ಹೋಟೆಲ್‌, ಬಸ್‌, ಪೆಟ್ರೋಲ್‌ ಬಂಕ್‌, ಮಾರುಕಟ್ಟೆ ಸೇರಿದಂತೆ ಹಲವು ಸೇವೆ ಎಂದಿನಂತೆ ಮುಂದುವರಿಸುವುದಾಗಿ ತಿಳಿಸಿದರು.

ಮೈಸೂರು ಟ್ರಾವೆಲ್ಸ್ ಅಸೋಸಿಯೇಷೆನ್‌, ಮೈಸೂರು ಹೋಟೆಲ್‌ ಮಾಲೀಕರ ಸಂಘ, ಜಿಲ್ಲಾ ಪ್ರವಾಸಿ ವಾಹನ ಚಾಲಕ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ಅನುಮೋದಿತ ಪ್ರವಾಸಿ ಮಾರ್ಗದರ್ಶಿಗಳ ಸಂಘ, ಜಿಲ್ಲಾ ಮತ್ತು ನಗರ ಮ್ಯಾಕ್ಸಿಕ್ಯಾಬ್‌ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ಮೈಸೂರು ರೀಜನ್‌ಪೆಟ್ರೋಲಿಯಂ ಡೀಲರ್ಸ್‌ ಅಸೋಸಿಯೇಷನ್‌, ದೇವರಾಜ್‌ ಅರಸ್‌ ರಸ್ತೆ ಟ್ರೇಡರ್ಸ್‌ ಅಸೋಸಿಯೇಷನ್‌, ವರ್ತಕರ ಸಂಘ, ಮೈಸೂರು ಟೈಕ್ಸ್‌ ಟೈಲ್ಸ್‌ ಮತ್ತು ಗಾರ್ಮೆಂಟ್‌ ಮರ್ಚೆಂಟ್‌ ಅಸೋಸಿಯೇಷನ್‌, ಜಿಲ್ಲಾ ಡಿಸ್ಟ್ರಿಬ್ಯೂಟರ್‌ ಅಸೋಸಿಯೇಷನ್‌, ಕಲ್ಯಾಣ ಮಂಟಪ ಮಾಲೀಕರ ಸಂಘಮತ್ತು ಮೈಸೂರು ಮಹಾನಗರಪಾಲಿಕೆಮಂಡಿಮಾರುಕಟ್ಟೆಬಾಡಿಗೆದಾರರ ಸಂಘದ ಪ್ರತಿನಿಧಿಗಳು ತಿಳಿಸಿದ್ದಾರೆ.

ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್‌ ಗೌರವಾಧ್ಯಕ್ಷ ಬಿ.ಎಸ್‌.ಪ್ರಶಾಂತ್‌, ಜಿಲ್ಲಾ ಪ್ರವಾಸಿ ವಾಹನ ಚಾಲಕ ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ನಾಗರಾಜ್‌, ಮೈಸೂರು ಅನುಮೋದಿತ ಪ್ರವಾಸಿ ಮಾರ್ಗದರ್ಶಿಗಳ ಸಂಘದ ಅಶೋಕ್‌, ಜಿಲ್ಲಾಮತ್ತು ನಗರ ಮ್ಯಾಕ್ಸಿಕ್ಯಾಬ್‌ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ರವಿ, ದೇವರಾಜ್‌ ಅರಸ್‌ ರಸ್ತೆ ಟ್ರೇಡರ್ಸ್‌ ಅಸೋಸಿಯೇಷನ್‌ ವೀರಭದ್ರಪ್ಪ, ಕಲ್ಯಾಣ ಮಂಟಪ ಮಾಲೀಕರ ಸಂಘದ ಕೆ. ಶರತ್‌. ಸತ್ಯನಾರಾಯಣ,ಮೈಸೂರು ಮಹಾನಗರ ಪಾಲಿಕೆ ಮಂಡಿ ಮಾರುಕಟ್ಟೆ ಬಾಡಿಗೆದಾರರ ಸಂಘದ ಮಹದೇವು ಇದ್ದರು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.