ಕೊಡಗಿನಲ್ಲಿ  ಹೊಸ ರೈಲು ಮಾರ್ಗ ಯೋಜನೆ ವಿರೋಧಿಸಿ ಪ್ರತಿಭಟನೆ


Team Udayavani, Feb 19, 2018, 6:15 AM IST

18FEBRUARY-MYS-KODAGU-(14).jpg

ಮೈಸೂರು:  ಕೊಡಗು ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ ನಿರ್ಮಾಣ ಯೋಜನೆಯನ್ನು ವಿರೋಧಿಸಿ ಕೊಡಗು ರೈಲು ಮಾರ್ಗ ವಿರೋಧಿ ಹೋರಾಟ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ರವಿವಾರ ನಗರದಲ್ಲಿ ಬಹೃತ್‌ ಪ್ರತಿಭಟನಾ ರ್ಯಾಲಿ ಹಾಗೂ ಪ್ರತಿಭಟನಾ ಸಭೆ ನಡೆಸಲಾಯಿತು. 

ನಗರದ ಇಟ್ಟಿಗೆಗೂಡಿನ ಡಿ. ದೇವರಾಜು ಅರಸು ಕುಸ್ತಿ ಅಖಾಡದ ಆವರಣದಿಂದ ಆರಂಭಿಸಿ ಪ್ರಮುಖ ರಸ್ತೆಗಳಲ್ಲಿ ಕಪ್ಪು ಬಟ್ಟೆ ಧರಿಸಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಕೊಡಗು ಜಿಲ್ಲೆ ಮೂಲಕ ಕೇರಳಕ್ಕೆ ಸಂಪರ್ಕ ಕಲ್ಪಿಸಲು ನಿರ್ಮಿಸಲುದ್ದೇಶಿಸಲಾಗಿರುವ ಹೊಸ ರೈಲು ಮಾರ್ಗ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಅಗಲೀಕರಣ ಪ್ರಸ್ತಾವವನ್ನು ಕೈಬಿಡುವಂತೆ ಆಗ್ರಹಿಸಿ ವಿವಿಧ ಘೋಷಣೆಗಳನ್ನು ಕೂಗಿದರು. 

ಕೊಡಗು ಜಿಲ್ಲೆಯಲ್ಲಿ ರೈಲು ಹಳಿ ನಿರ್ಮಿಸಿ ಜೀವನದಿ ಕಾವೇರಿ ಬತ್ತಿ ಹೋಗುವಂತೆ ಮಾಡುವುದಕ್ಕೆ ಬಿಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದರಲ್ಲದೆ, ಯಾವುದೇ ಒತ್ತಡಕ್ಕೂ ಜಗ್ಗದೆ, ನಮ್ಮ ಅಸ್ತಿತ್ವ ಉಳಿಸಿಕೊಳ್ಳುವುದಕ್ಕೆ ಪ್ರಾಣ ತ್ಯಾಗಕ್ಕೂ ಸಿದ್ಧ ಎಂಬ ಸಂದೇಶ ಸಾರಿದರು. ರಾಜಕೀಯೇತರವಾಗಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಮುಖಂಡರು, ಹೊಟೇಲ್‌ ಉದ್ಯಮಿಗಳು, ಟ್ರಾವೆಲ್ಸ್‌ ಏಜೆಂಟ್ಸ್‌ ಅಸೋಸಿಯೇಷನ್‌ ಪದಾಧಿಕಾರಿಗಳು ಭಾಗವಹಿಸಿ ಬೆಂಬಲ ಸೂಚಿಸಿದರು. 

ಇವರೊಂದಿಗೆ ಕೊಡಗಿನಲ್ಲಿ ವಾಸಿಸುವ ಮಲೆಯಾಳಿ ಸಂಘದ ಕಾರ್ಯಕರ್ತರು, ಇಸ್ಲಾಂ ಸಂಘಟನೆಯ ಸದಸ್ಯರು, ಕೇರಳದ ಕಣ್ಣೂರಿನ ಪರಿಸರವಾದಿಗಳ ಸಹಿತ ಕೊಡಗಿನ 20ಕ್ಕೂ ಹೆಚ್ಚು ಸಂಘಟನೆಗಳು, ವಿವಿಧ ಸಮುದಾಯಗಳ ಸಂಘಟನೆಗಳು, ಆದಿವಾಸಿ ಸಂಘಟನೆಗಳ ಸಹಿತ ಸಾವಿರಾರು ಪರಿಸರ ಪ್ರೇಮಿಗಳು, ಹಿರಿಯ ನಾಗರಿಕರು, ಯುವಕರು, ವಿದ್ಯಾರ್ಥಿಗಳು, ಮಕ್ಕಳು, ಮಹಿಳೆಯರು ಭಾಗವಹಿಸಿದ್ದರು. 

ಮೆರವಣಿಗೆಯಲ್ಲಿ 50ಕ್ಕೂ ಹೆಚ್ಚು ಮಂದಿ ಬೈಕ್‌ ಸವಾರರು, ಕಾವೇರಿ ನದಿಯ ಮೇಲಾಗುತ್ತಿರುವ ದೌರ್ಜನ್ಯಗಳ ಬಗ್ಗೆ ಮಾಹಿತಿ ನೀಡುವ ಆರೇಳು ಸ್ತಬ್ಧಚಿತ್ರಗಳು, ಆದಿವಾಸಿಗಳ ಸಾಂಸ್ಕೃತಿಕ ತಂಡದ ಸದಸ್ಯರು ಸಾರ್ವಜನಿಕರ ಗಮನ ಸೆಳೆದರು. 

ಆ ಬಳಿಕ ನಡೆದ ಪ್ರತಿಭಟನಾ ಸಭೆಯಲ್ಲಿ ಉದ್ದೇಶಿತ ಕೊಡಗು ರೈಲು ಮಾರ್ಗ, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಯನ್ನು ಶಾಶ್ವತವಾಗಿ ತಡೆಹಿಡಿಯುವ ಕುರಿತು ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯನ್ನು ಒತ್ತಾಯಿ ಸಲು ತೀರ್ಮಾನಿಸಲಾಯಿತು.

ಸಭೆಯ ನಿರ್ಣಯಗಳು
ಕೊಡಗು ರೈಲ್ವೇ ಮಾರ್ಗ ವಿರೋಧಿ ಹೋರಾಟ ವೇದಿಕೆಯಿಂದ ನಡೆಸಲಾದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಅದರಂತೆ ಕಾವೇರಿ ನದಿ ಹಾಗೂ ಕೊಡಗು ಜಿಲ್ಲೆಗೆ ಮಾರಕವಾಗುವ ಯೋಜನೆಗಳ ವಿರುದ್ಧ ಹಾಗೂ ರೈಲು ಮಾರ್ಗ ಮತ್ತು ಬಹುಪಥ ರಸ್ತೆ ನಿರ್ಮಾಣ ಕಾರ್ಯವನ್ನು ವಿರೋಧಿಸುತ್ತೇವೆ, ಕೊಡಗು ಜಿಲ್ಲೆಯನ್ನು ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಒಂದಾಗಿರುತ್ತೇವೆ, ಕೊಡಗು ಜಿಲ್ಲೆ ವಿಶೇಷವಾದ ಭೌಗೋಳಿಕ ಪ್ರದೇಶ ಹಾಗೂ ಉತ್ತಮ ಪರಿಸರವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಮತ್ತು ಇಲ್ಲಿನ ಮೂಲ ನಿವಾಸಿಗಳ ಜೀವನ ಪದ್ಧತಿಗೆ ಅನುಗುಣವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಕೃಷಿಯೇತರ ಚಟುವಟಿಕೆಗೆ ಭೂ ಪರಿವರ್ತನೆ ಮಾಡುವುದಕ್ಕೆ ಕಡಿವಾಣ ಹಾಕಬೇಕು ಹಾಗೂ ಕಾವೇರಿ ನದಿ, ಅದರ ಉಪ ನದಿಗಳನ್ನು ಉಳಿಸುವಲ್ಲಿ ಪೂರ್ಣ ಮಲೆನಾಡು ಪ್ರದೇಶವನ್ನು ಸಂರಕ್ಷಿಸಲು ಪ್ರಬಲ ಹೋರಾಟ ನಡೆಸಬೇಕೆಂಬ ಬಗ್ಗೆ ತೀರ್ಮಾನಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.