ತ.ನಾಡು ಸರ್ಕಾರದ ವಿರುದ್ಧ ಪ್ರತಿಭಟನೆ
Team Udayavani, Mar 25, 2022, 2:47 PM IST
ಮೈಸೂರು: ಕರ್ನಾಟಕದ ಮೇಕೆದಾಟು ಕುಡಿಯುವ ನೀರು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ವಿಧಾನಸಭೆಯಲ್ಲಿ ನಿರ್ಣಯ ಕೈಗೊಂಡಿರುವುದನ್ನು ವಿರೋಧಿಸಿ ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದಿಂದ ಪ್ರತಿಭಟನೆ ನಡೆಯಿತು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಗುರುವಾರ ಪ್ರತಿಭಟನೆ ನಡೆಸಿದ ಅವರು, ಕಾವೇರಿ ನದಿಯ 60ರಿಂದ 70 ಟಿಎಂಸಿ ನೀರು ವ್ಯರ್ಥವಾಗಿ ಸಮುದ್ರ ಸೇರುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಮೇಕೆದಾಟು ಕುಡಿಯುವ ನೀರು ಯೋಜನೆಗೆ ಮುಂದಾಗಿದೆ. ಆದರೆ ತಮಿಳುನಾಡು ಸರ್ಕಾರ ಕರ್ನಾಟಕದ ಯೋಜನೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸುವ ಮೂಲಕ ಕ್ಯಾತೆ ತೆಗೆಯುತ್ತಿದೆ ಎಂದು ತ.ನಾಡು ಮುಖ್ಯಮಂತ್ರಿ ಭಾವಚಿತ್ರಕ್ಕೆ ಮಸಿ ಬಳಿದು ಆಕ್ರೋಶ ಹೊರಹಾಕಿದರು.
ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಶೀಘ್ರವೇ ಯೋಜನೆ ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದರು. ಸಂಘದ ಅಧ್ಯಕ್ಷ ಬಿ.ಎ.ಶಿವಶಂಕರ್, ಉಪಾಧ್ಯಕ್ಷ ಹರದನಹಳ್ಳಿ ಬಸವರಾಜು, ಸೋಗಳ್ಳಿ ತಂಗು, ಜಯಕುಮಾರ್, ವೀರನಹಳ್ಳಿ ಕುಮಾರ್, ಶಿವಕುಮಾರ್, ಗುರುಕಿರಣ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ