ಶಾಸಕ ಮಂಜುನಾಥ್ ವಿರುದ್ದ ಗಣೇಶ್‌ಕುಮಾರಸ್ವಾಮಿ ಅಭಿಮಾನಿಗಳಿಂದ ಪ್ರತಿಭಟನೆ


Team Udayavani, Mar 24, 2023, 10:29 PM IST

1-wwqewqeqee

ಹುಣಸೂರು: ಇತ್ತೀಚೆಗೆ ನಗರೋತ್ಥಾನ ಯೋಜನೆಯ ಅನುಷ್ಟಾನದ ವೇಳೆ ಶಿಷ್ಟಾಚಾರ ಪ್ರಶ್ನಿಸಿದ ನಗರಸಭೆ ಸದಸ್ಯ, ಹುಡಾ ಅಧ್ಯಕ್ಷ ಗಣೇಶ್‌ಕುಮಾರಸ್ವಾಮಿ ವಿರುದ್ದ ಶಾಸಕ ಮಂಜುನಾಥರು ನಿಂದಿಸಿದ್ದಾರೆಂದು ಆರೋಪಿಸಿ ಗಣೇಶ್‌ಕುಮಾರಸ್ವಾಮಿ ಅಭಿಮಾನಿಗಳು ಹಾಗೂ ಕೆಲ ಕುರುಬಸಮುದಾಯದ ಮುಖಂಡರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಶುಕ್ರವಾರದಂದು ನಗರದ ಸಂವಿಧಾನ ಸರ್ಕಲ್‌ನಿಂದ ಹೊರಟ ಪ್ರತಿಭಟನಾಕಾರರು ಎಸ್.ಜೆ.ರಸ್ತೆ. ಜೆ.ಎಲ್.ಬಿ.ರಸ್ತೆ. ಬಜಾರ್ ರಸ್ತೆ ಮಾರ್ಗವಾಗಿ ಸಾಗಿ ಬಂದು ಕೆಲ ಹೊತ್ತು ಸರ್ಕಲ್‌ನಲ್ಲಿ ಧರಣಿ ನಡೆಸಿದರು. ಮೆರವಣಿಗೆಯುದ್ದಕ್ಕೂ ಶಾಸಕ ಮಂಜುನಾಥರ ವಿರುದ್ದ ಧಿಕ್ಕಾರ ಮೊಳಗಿಸಿದರು.
ಧರಣಿಯಲ್ಲಿ ಮಾತನಾಡಿದ ಗಣೇಶ್‌ಕುಮಾರಸ್ವಾಮಿ ಬಳಗದ ಅಧ್ಯಕ್ಷ ರವಿಕುಮಾರ್, ಪುರಸಭೆ ಮಾಜಿ ಸದಸ್ಯ ಆನಂದ್, ಮೂಕನಹಳ್ಳಿವಾಸು, ತಾ.ಪಂ.ಮಾಜಿ ಸದಸ್ಯ ಗಣಪತಿ, ಪ್ರಭಾಕರ್‌ಹೆಗ್ಗಡೆ ಮತ್ತಿತರರು ಮಾತನಾಡಿ ಜನಪ್ರತಿನಿಧಿಯಾಗಿರುವ ಶಾಸಕರು ಇತ್ತೀಚೆಗೆ ಕಲ್ಕುಣಿಕೆ ವೃತ್ತದಲ್ಲಿ ನಗರೋತ್ಥಾನ ಯೋಜನೆ ಕಾಮಗಾರಿಗೆ ಚಾಲನೆ ನೀಡುವ ವೇಳೆ ಶಿಷ್ಟಾಚಾರವನ್ನೂ ಪಾಲಿಸದ್ದನ್ನು ಪ್ರಶ್ನಿಸಲು ಹೋದ ಗಣೇಶ ಕುಮಾರಸ್ವಾಮಿ ಮತ್ತು ಬೆಂಬಲಿಗರ ವಿರುದ್ದ ತಮ್ಮ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಕ್ಷಮೆ ಕೇಳುವಂತೆ ಆಗ್ರಹಿಸಿದ್ದರೂ ಕ್ಷಮೆಯಾಚಿಸಿಲ್ಲ. ಇನ್ನು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ನಗರಸಭೆ ಅಧಿಕಾರಿಗಳನ್ನು ಬೆದರಿಸಿ ಸರ್ವಾಧಿಕಾರಿಯಂತೆ ನಡೆದು ಕೊಂಡಿದ್ದಾರೆ. ಹೀಗಾಗಿ ಶಾಸಕರ ವಿರುದ್ದ ಕ್ರಮ ಕೈಗೊಳ್ಳಲು ಸರಕಾರಕ್ಕೆ ಶಿಪಾರಸ್ಸು ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕುರುಬ ಸಮಾಜದ ಮಖಂಡರಾದ ಬಿಜೆಪಿ ಮುಖಂಡರಾದ ರವಿಕುಮಾರ್, ರಾಕೇಶ್, ನಗರಸಭೆ ನಾಮ ನಿರ್ದೇಶಿತ ಸದಸ್ಯ ರಮೇಶ್, ಮುಖಂಡರಾದ ನಾಗರಾಜಪ್ಪ, ಶ್ರೀನಿವಾಸ್, ಜವರೇಗೌಡ, ಚಂದ್ರೇಗೌಡ, ಸೋಮಣ್ಣ, ಮುದ್ದುರಾಮ್, ಹರಿ, ಗುಡ್ಡಪ್ಪ, ಸೂರೇಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು. ನಂತರ ತಾಲೂಕು ಕಚೇರಿಗೆ ತೆರಳಿ ಉಪ ತಹಶೀಲ್ದಾರ್ ಶಕಿಲಾಬಾನುರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

mysore

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

kerala

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ ಅತ್ಯಾಚಾರ! ಕೇರಳದಲ್ಲಿ ನಡೆದ ಘಟನೆ

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Nagarhole National Park; ನಾಗರ ಹೊಳೆಯಲ್ಲಿ ವನ್ಯಪ್ರಾಣಿಗಳ ಸ್ವಚ್ಛಂದ ವಿಹಾರ

Nagarhole National Park; ನಾಗರ ಹೊಳೆಯಲ್ಲಿ ವನ್ಯಪ್ರಾಣಿಗಳ ಸ್ವಚ್ಛಂದ ವಿಹಾರ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

Hunsur;ಪ್ರೀತಿಯ ನಾಯಿ ತಿಥಿ ಮಾಡಿ ಪ್ರೀತಿ ತೋರಿದ ಜನ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

1-sasd

Hunsur: ಗೂಡ್ಸ್ ವಾಹನ ಢಿಕ್ಕಿಯಾಗಿ ಬೈಕ್‌ ಸವಾರ ಮೃತ್ಯು

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

ಶೂಟಿಂಗ್ ಮುಗಿಸಿದ ‘ಟಗರು ಪಲ್ಯ’: ಪೋಸ್ಟ್ ಪ್ರೊಡಕ್ಷನ್ ನತ್ತ ಡಾಲಿ ನಿರ್ಮಾಣದ ಚಿತ್ರ

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

mysore

ಕುರುಬೂರು ಅಪಘಾತ ಪ್ರಕರಣ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ