ಕೆರೆಗಳ ಮರು ಹರಾಜಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Jan 15, 2020, 3:00 AM IST

keragala

ಪಿರಿಯಾಪಟ್ಟಣ: ಕೆರೆಗಳ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಶಿವಮ್ಮ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಜರುಗಿದೆ.

ತಾಲೂಕಿನ ಚಿಕ್ಕನೇರಳೆ ಗ್ರಾಪಂಗೆ ಒಳಪಡುವ ಕೆರೆಗಳ ಹರಾಜು ಮಾಡದಂತೆ ಮಂಟಿ ಬಿಳಗುಲಿ ಗ್ರಾಮಸ್ಥರಿಂದ 2 ತಿಂಗಳ ಹಿಂದೆ ತಕರಾರು ಅರ್ಜಿ ಸಲ್ಲಿಸಿದರೂ ನಮಗೆ ಯಾವುದೇ ಮಾಹಿತಿ ನೀಡದೆ ಕಾನೂನು ಉಲ್ಲಂ ಸಿ ಹರಾಜು ಪ್ರಕ್ರಿಯೆ ನಡೆದಿದೆ ಎಂದು ಆಪಾದಿಸಿದ್ದಾರೆ.

10 ವರ್ಷಗಳಿಂದಲೂ ಹಸುವಿನ ಕಾವಲು ಗ್ರಾಮದ ದೊಡ್ಡಕೆರೆ ಹಾಗೂ ಬಾಲಗೆರೆ ಕೆರೆಗಳನ್ನು ಹರಾಜು ಮಾಡದೆ ಹಾಗೆಯೇ ಮುಂದುವರಿಸಿಕೊಂಡು ಹೋಗುತ್ತಿರುವ ವ್ಯಕ್ತಿಗೆ ಮಂಟಿ ಬೆಳಗುಲಿ ಗ್ರಾಮಕ್ಕೆ ಒಳಪಡುವ ಕೆರೆಗಳನ್ನು ಗ್ರಾಮಸ್ಥರಿಗೆ ಯಾವುದೇ ಮಾಹಿತಿ ನೀಡದೇ ಅವರಿಗೆ ಕಡಿಮೆ ಬೆಲೆಯಲ್ಲಿ ಹರಾಜು ಆಗುವಂತೆ ಮಾಡಿದ್ದಾರೆ ಎಂದು ಮಂಟಿ ಬಿಳಗುಲಿ ಗ್ರಾಮದ ಮುಖಂಡ ರವೀಂದ್ರ ಹಾಗೂ ಹಸುವಿನ ಕಾವಲು ಗ್ರಾಮದ ಗೋವಿಂದರಾಜು ದೂರಿದ್ದಾರೆ.

ಹರಾಜು ಪ್ರಕ್ರಿಯೆಯಲ್ಲಿ ಸರ್ಕಾರದ ನಿಯಮ ಪಾಲಿಸದೆ ಗ್ರಾಮದಲ್ಲಿ ತಮಟೆ ಮೂಲಕ ಪ್ರಚಾರ ಮಾಡದೆ ಮತ್ತು ಪತ್ರಿಕೆಗಳಲ್ಲಿ ಪ್ರಕಟಣೆ ನೀಡದೆ ಗ್ರಾಮಸ್ಥರಿಗೆ ಹಾಗೂ ಈ ಹಿಂದೆ ಕೆರೆಯ ಹರಾಜು ಮಾಡಿಕೊಂಡಿದ್ದ ಮಾಲೀಕರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಮುಖಂಡ ಜಗದೀಶ್‌ ದೂರಿದರು.

ಪಂಚಾಯಿತಿಯ ಸೂಚನಾ ಫ‌ಲಕದಲ್ಲಿ ಹರಾಜು ಮಾಡುವ ದಿನಾಂಕವನ್ನು ಪ್ರಕಟಿಸದೆ ಹರಾಜು ಮಾಡಿದ್ದಾರೆ ಎಂದು ಕಿರಣ್‌ ಕಿಡಿಕಾರಿದರು. ಪಂಚಾಯಿತಿ ಉಪಾಧ್ಯಕ್ಷೆ ಶಿವಮ್ಮ ಮಾತನಾಡಿ, ಮೇಲಧಿಕಾರಿಗಳು ಈ ಹರಾಜಿನಲ್ಲಿ ಆಗಿರುವ ಲೋಪದೋಷಗಳನ್ನು ಪರಿಶೀಲಿಸಿ ತನಿಖೆ ನಡೆಸಿ, ಮರು ಹರಾಜಿಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಿಡಿಒ ಎಚ್‌.ನಾರಾಯಣ್‌, ಸಾರ್ವಜನಿಕರ ಹಿತದೃಷ್ಟಿಯಿಂದ ಕೆರೆಯ ಸಂಪನ್ಮೂಲಗಳನ್ನು ವೃದ್ಧಿಗೊಳಿಸಲು ಕಾನೂನಾತ್ಮಕವಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಪ್ರತಿಭಟನೆಯಲ್ಲಿ ತಾಪಂ ಮಾಜಿ ಉಪಾಧ್ಯಕ್ಷ ಪುಟ್ಟಸ್ವಾಮಿ, ಅಮಾನುಲ್ಲಾ ಖಾನ್‌, ಫಾಸಿಲ್‌, ಜ್ಯೋತಿಕುಮಾರ್‌, ಗೋವಿಂದರಾಜ್‌ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.