ದಾಖಲೆ ಸಮೇತ ಸಾಬೀತು ಪಡಿಸಿ


Team Udayavani, Jul 10, 2020, 5:54 AM IST

ecord

ಮೈಸೂರು: 15 ವರ್ಷಗಳಿಂದ ಈಚೆಗೆ ನಗರದಲ್ಲಿ ಪಾಲಿಕೆ ಸದಸ್ಯರು, ಮೇಯರ್‌ಗಳು ಹಾಗೂ ವಕ್ಫ್ ಕಮಿಟಿ ಅಧ್ಯಕ್ಷರಾಗಿದ್ದವರು ತಾವು ಕಟ್ಟಿರುವ ಮನೆ, ವಾಣಿಜ್ಯ ಕಟ್ಟಡಗಳು ಪಾಲಿಕೆ ನಿಯಮಗಳ ಪ್ರಕಾರವೇ ಇದೆ, ಯಾವುದೇ ಅಕ್ರಮ  ಮಾಡಿಲ್ಲ ಎಂದು ದಾಖಲೆ ಸಮೇತ ಸಾಬೀತು ಪಡಿಸಿದರೆ ನಾನು ಪಾಲಿಕೆ ಸದಸ್ಯರು ಮತ್ತು ಮೇಯರ್‌ ವಾದ ಒಪ್ಪುತ್ತೇನೆ ಎಂದು ಸಂಸದ ಪ್ರತಾಪ್‌ ಸಿಂಹ ಮಹಾನಗರ ಪಾಲಿಕೆ ಸದಸ್ಯರಿಗೆ ಸವಾಲು ಹಾಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಪಾಲಿಕೆ ನಿಯಮಗಳ ಅನುಸಾರವೇ ನಾವು ಕಟ್ಟಡಗಳನ್ನು ಕಟ್ಟಿದ್ದೇವೆ, ಅಕ್ರಮ ಮಾಡಿಲ್ಲ, ಸಿಆರ್‌ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರೆ, ನಾನೇ ಖುದ್ದು ಸ್ಥಳ ಪರಿಶೀಲಿಸುತ್ತೇನೆ.  ತಪ್ಪು ಮಾಡಿರುವವರು ಸಾರ್ವಜನಿಕವಾಗಿ ತಪ್ಪೊಪ್ಪಿಕೊಳ್ಳಲಿ. ರಾಜೀನಾಮೆ ಕೊಡುವುದು ಬೇಡ. ಮುಂದಕ್ಕೆ ಯಾರ ಬಳಿಯೂ ಹಣ ವಸೂಲಿ ಮಾಡಬಾರದು ಎಂದು ಎಚ್ಚರಿಸಿದರು.

ತೊಂದರೆ ನೀಡಬೇಡಿ: ಮಹಾಪೌರರು,  ನಗರಪಾಲಿಕೆ ಸದಸ್ಯರು ವಿನಾಕಾರಣ ಅಧಿಕಾರಿಗಳನ್ನು ಕರೆದುಕೊಂಡು ಕಟ್ಟಡ ಕಟ್ಟುತ್ತಿರುವ ಸ್ಥಳಗಳಿಗೆ ಹೋಗಬಾರದು. ಅಧಿಕಾರಿಗಳು ಬೇಕಾದರೆ ತಾವೇ ಖುದ್ದಾಗಿ ಹೋಗಿ ಪರಿಶೀಲಿಸಲಿ. ಆದರೆ ಈ ವಿಚಾರದಲ್ಲಿ ಸದಸ್ಯರ ಮಾತು  ಕೇಳುವುದು ಬೇಡ. ಯಾರಾದರೂ ತೊಂದರೆ ಕೊಡುತ್ತಿದ್ದಾರೆ ಎಂದರೆ ಜನರು ನನಗೆ, ಪಾಲಿಕೆ ಆಯುಕ್ತರಿಗೆ ದೂರು ನೀಡಬಹುದು. ಪಾಲಿಕೆ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ ಎಷ್ಟು ಕಂದಾಯ ಸಂಗ್ರಹವಾಗಬೇಕು, ಎಷ್ಟು  ಸಂಗ್ರಹವಾಗಿದೆ ಹಾಗೂ ತಮ್ಮ ವಾರ್ಡ್‌ಗಳಿಗೆ ಬಿಡುಗಡೆಯಾಗಿರುವ ಹಣವನ್ನು ಹೇಗೆ ಬಳಸಿದ್ದಾರೆ ಎಂಬುದನ್ನು ದಾಖಲೆ ಸಮೇತ ತೋರಿಸಲಿ ಎಂದು ಸವಾಲು ಹಾಕಿದರು.

ಲೆಕ್ಕ ಕೊಡಿ: ನಾಲ್ಕು ವರ್ಷಗಳಲ್ಲಿ 800 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಅದನ್ನೆಲ್ಲಾ ಯಾವುದಕ್ಕೆ ಬಳಸಿದ್ದಾರೆ ಎಂದು ಲೆಕ್ಕ ನೀಡಲಿ. ಮಾಡಿದ ಕೆಲಸಗಳನ್ನೇ ಮತ್ತೆ ಮತ್ತೆ ಮಾಡುತ್ತಾರೆ. ಇದರ ಬಗ್ಗೆ ಕೌನ್ಸಿಲ್‌ ಸಭೆಗೆ ಬಂದು ಮಾತನಾಡಿ  ಎನ್ನುತ್ತಾರೆ. ಅಲ್ಲಿ ಹೋದರೆ ಗಲಾಟೆ ಬಿಟ್ಟರೆ ಮತ್ತೇನೂ ಇರುವುದಿಲ್ಲ ಎಂದು ದೂರಿದರು.

ಸಹಾಯವಾಣಿ: ನಗರಪಾಲಿಕೆಯಿಂದ ಒಂದು ಸಹಾಯವಾಣಿ ಆರಂಭಿಸೋಣ. ನಗರದ ಜನರು ವಸತಿ, ವಾಣಿಜ್ಯ ಕಟ್ಟಡಗಳು ನಿರ್ಮಿಸುವಾಗ ವಕ್ಫ್ ಕಮಿಟಿ ಅಥವಾ ಪಾಲಿಕೆ ಸದಸ್ಯರು ಬಂದು ಹಣ ವಸೂಲಿ ಮಾಡಿದರೆ  ಆ ಸಹಾಯವಾಣಿಗೆ ದೂರು ನೀಡಲಿ. ಆಗ ಎಷ್ಟು ದೂರುಗಳು ಬರುತ್ತವೆ ನೋಡಿದರೆ ಇವರು ಮಾಡಿರುವ ತಪ್ಪು ಎಲ್ಲರಿಗೂ ತಿಳಿಯುತ್ತದೆ ಎಂದು ಚಾಟಿ ಬೀಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.