ದೆಹಲಿ ನಾಯಕರ ಮುಂದೆ ರಾಜ್ಯದ ನಾಯಕತ್ವ ಬದಲಾವಣೆ ವಿಚಾರವೇ ಇಲ್ಲ: ಅಶೋಕ್
Team Udayavani, Nov 30, 2020, 1:23 PM IST
ಮೈಸೂರು: ನಾಯಕತ್ವ ಬದಲಾವಣೆ ವಿಚಾರವು ರಾಜ್ಯದಲ್ಲಿ ಮಾತ್ರ ಗಿರಿಗಿಟ್ಲೆ ಹೊಡೆಯುತ್ತಿದೆ. ದೆಹಲಿ ನಾಯಕರ ಮುಂದೆ ನಾಯಕತ್ವ ಬದಲಾವಣೆ ವಿಚಾರವೇ ಇಲ್ಲ ಎಂದು ಸಚಿವ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಯಾವುದೇ ತಪ್ಪು ಮಾಡದೆ ಅವರನ್ನು ಬದಲಾಯಿಸುವುದು ಸರಿಯಲ್ಲ. ಈ ಬಗ್ಗೆ ಕೇಂದ್ರದ ಐವರು ನಾಯಕರನ್ನು ಭೇಟಿ ಮಾಡಿದ್ದೇನೆ. ಅವರು ಈ ವಿಚಾರರವನ್ನು ನಿರಾಕರಿಸಿದ್ದಾರೆ ಎಂದರು.
ಒಕ್ಕಲಿಗರ ನಿಗಮ ಪ್ರಾಧಿಕಾರ ರಚನೆ ವಿಚಾರ ಗಾಳಿಯಲ್ಲಿ ಹೊಡೆದ ಗುಂಡಲ್ಲ, ನಿಜವಾದ ಗುಂಡು. ನಾನು ಈ ಬಗ್ಗೆ ಸಿಎಂ ಅವರ ಜತೆ ಚರ್ಚೆ ಮಾಡಿದ್ದೇನೆ. ಯಡಿಯೂರಪ್ಪ ಅವಧಿಯಲ್ಲೇ ಒಕ್ಕಲಿಗರ ಪ್ರಾಧಿಕಾರ ಆಗಲಿದೆ. ಈ ಸಂಬಂಧ ಸಮಾಜದ ಮುಖಂಡರು, ಸ್ವಾಮೀಜಿಗಳು, ಸಂಘ ಸಂಸ್ಥೆಯವರು ನನ್ನ ಜತೆ ಮಾತನಾಡಿದ್ದಾರೆ. ಈ ವಿಚಾರಕ್ಕೆ ನಾನು ಬದ್ದನಾಗಿದ್ದೇನೆ ಎಂದರು.
ಇದನ್ನೂ ಓದಿ:ಡಿಸಿ ರೋಹಿಣಿ ಸಿಂಧೂರಿ- ಶಾಸಕರ ಮುನಿಸಿಗೆ ಬಲಿಯಾದ ಜನಸ್ಪಂದನ ಕಾರ್ಯಕ್ರಮ!
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ಮುನಿರತ್ನ, ಎಂಟಿಬಿ ನಾಗರಾಜ್, ಶಂಕರ ಸೇರಿ ಹಲವರು ತ್ಯಾಗ ಮಾಡಿದ್ದಾರೆ. ಅದರಿಂದ ನಮ್ಮ ಸರ್ಕಾರ ಬಂದಿದೆ. ಅವರನ್ನು ಮಂತ್ರಿ ಮಾಡಬೇಕಾಗಿರುವುದು ನಮ್ಮ ಕರ್ತವ್ಯ. ಈ ಬಗ್ಗೆ ಯಡಿಯೂರಪ್ಪ ತೀರ್ಮಾನ ಮಾಡುತ್ತಾರೆ. ನಾವೂ ಸಹ ಹೈಕಮಾಂಡ್ ನಿರ್ದೇಶನಕ್ಕೆ ಕಾಯುತ್ತಿದ್ದೇವೆ ಎಂದು ಅಶೋಕ್ ಹೇಳಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶೇ. 62ರಷ್ಟು ಮಂದಿಗೆ ಲಸಿಕೆ ವಿತರಣೆ: ಡಾ| ಸುಧಾಕರ್
ಕೃಷಿ ಕಾಯ್ದೆ ವಾಪಸ್ಸು ಪಡೆಯದಿದ್ದರೆ ದ್ವಿತೀಯ ಸ್ವಾತಂತ್ರ್ಯಚಳುವಳಿ: ಕೋಡಿಹಳ್ಳಿ ಚಂದ್ರಶೇಖರ್
ತುರ್ತು ಪ್ರತಿಕ್ರಿಯಾ ವಾಹನಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ
ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ಸೆರೆಹಿಡಿದು ಬ್ಲ್ಯಾಕ್ಮೇಲ್ :ಪತ್ನಿಯಿಂದ ಠಾಣೆಗೆ ದೂರು
ಅಮಿತ್ ಶಾ ಭೇಟಿಗೆ ಸಮಯ ಕೇಳಿದ 15ಕ್ಕೂ ಹೆಚ್ಚು ಅತೃಪ್ತ ಶಾಸಕರು