ವಿವಿಧೆಡೆ ರಾಜ್ಕುಮಾರ್ ಜಯಂತಿ
Team Udayavani, Apr 25, 2020, 1:21 PM IST
ನಗರದ ರಾಜ್ ಕುಮಾರ್ ಪಾರ್ಕ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವರನಟ ಡಾ.ರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಲಾಯಿತು.
ಮೈಸೂರು: ವರನಟ ಡಾ.ರಾಜ್ಕುಮಾರ್ ಅವರ ಹುಟ್ಟುಹಬ್ಬವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಯಿಂದ ಸರಳವಾಗಿ ಆಚರಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಡಾ.ರಾಜ್ ಕುಮಾರ್ ಜಯಂತಿಯನ್ನು ನಗರದ ರಾಜ್ ಕುಮಾರ್ ಪಾರ್ಕ್ನಲ್ಲಿರುವ ವರನಟ ಡಾ.ರಾಜ್ ಪ್ರತಿಮೆಗೆ ಪುಷ್ಪಾರ್ಚನೆಗೈದು ಗೌರವ ಅರ್ಪಿಸಿದರು. ವರನಟನ ಪ್ರತಿಮೆಗೆ ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಪುಷ್ಪಾರ್ಚನೆ ಮಾಡಿದರು. ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕ ಎಚ್.ಚನ್ನಪ್ಪ ಪಾಲ್ಗೊಂಡಿದ್ದರು.
ಮಯೂರ ಕನ್ನಡ ಯುವಕರ ಬಳಗದಿಂದ ಡಾ.ರಾಜಕುಮಾರ್ ಪ್ರತಿಮೆಗೆ ಬಳಿ ಮಾಲಾರ್ಪಣೆ ಮಾಡಿದರು. ನಂತರ ಸಾರ್ವಜನಿಕರಿಗೆ ಮಾಸ್ಕ್, ಸ್ಯಾನಿಟೈಸರ್, ಆಹಾರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿದರು. ಸಮಾಜ ಸೇವಕ ಡಾ.ಕೆ.ರಘುರಾಂ ವಾಜಪೇಯಿ, ಮಯೂರ ಕನ್ನಡ ಯುವಕರ ಸಂಘದ ಅಧ್ಯಕ್ಷ ಜಿ.ಶ್ರೀನಾಥ್ ಬಾಬು, ಕೆ.ಆರ್.ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀನಿವಾಸ್, ಮಯೂರ ಕನ್ನಡ ಯುವಕರ ಬಳಗದ ಸಂಚಾಲಕ ಜಿ.ರಾಘವೇಂದ್ರ, ಕಿರಣ್, ವಿಶ್ವ , ಕಿಶೋರ್ ಕುಮಾರ್, ಸುಚೀಂದ್ರ, ಚಕ್ರ ಪಾಣಿ ಮತ್ತಿತರರು ಉಪಸ್ಥಿತರಿದ್ದರು.
ಸಮರ್ಪಣಾ ಶೈಕ್ಷಣಿಕ, ದಾನದತ್ತಿ ಸಂಸ್ಥೆ: ಸಮರ್ಪಣಾ ಶೈಕ್ಷಣಿಕ ಮತ್ತು ದಾನದತ್ತಿ ಸಂಸ್ಥೆಯಿಂದ ಡಾ.ರಾಜ್ ಹುಟ್ಟುಹಬ್ಬ ಆಚರಿಸಲಾಯಿತು. ಗಾಯಕ ರಮೇಶ್ ಕುಮಾರ್, ಕನಕ ಯುವ ಸೇನೆಯ ಗೌರವ ಅಧ್ಯಕ್ಷ ಎಂ. ರವಿಕುಮಾರ್, ಸಮರ್ಪಣಾ ಟ್ರಸ್ಟ್ನ ಗೌರವ ಖಜಾಂಚಿ ರಾಜೇಂದ್ರಪ್ರಸಾದ್ ಹೊನ್ನಲಗೆರೆ, ಟ್ರಸ್ಟ್ನ ಗೌರವ ಕಾರ್ಯದರ್ಶಿ ಎಂ.ಎಸ್.ಬಾಲಸುಬ್ರಹ್ಮಣ್ಯಂ, ಟ್ರಸ್ಟ್ನ ಸದಸ್ಯ ಹೆಚ್.ಎ.ರಾಜಗೋಪಾಲ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ