ಬಹುರೂಪಿಗೆ ಸಜ್ಜಾಗುತ್ತಿದೆ ರಂಗಾಯಣ


Team Udayavani, Dec 6, 2022, 4:18 PM IST

ಬಹುರೂಪಿಗೆ ಸಜ್ಜಾಗುತ್ತಿದೆ ರಂಗಾಯಣ

ಮೈಸೂರು: ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ರಂಗಾಯಣ ಸಜ್ಜುಗೊಳ್ಳುತ್ತಿದೆ. ವೇದಿಕೆಗಳ ವಿನ್ಯಾಸ, ಆವರಣ ಸ್ವಚ್ಛತಾ ಕಾರ್ಯ, ನಾಟಕಗಳ ತಾಲೀಮು, ಮಳಿಗೆಗಳ ನಿರ್ಮಾಣ, ಚಿತ್ರಕಲಾ ಶಿಬಿರ ಸೇರಿದಂತೆ ಎಲ್ಲಾ ಸಿದ್ಧತೆಗಳು ಗರಿಗೆದರಿವೆ.

ಡಿ.8ರಿಂದ 15ರವರೆಗೆ ನಡೆಯುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವದಲ್ಲಿ ಒಂದು ವಾರ ಕಾಲ ರಂಗಾಸಕ್ತರಿಗೆ “ಕಲಾರಸ’ ಉಣಬಡಿಸಲುರಂಗಾಯಣದ ಅಂಗಳ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ.

ಭಾರತೀಯತೆ ಪರಿಕಲ್ಪನೆ ಅಡಿಯಲ್ಲಿ ನಾಟಕಗಳು ಸೇರಿದಂತೆ ಜಾನಪದ ಕಲಾಪ್ರದರ್ಶನ, ರಾಷ್ಟ್ರೀಯ ಚಲನಚಿತ್ರೋತ್ಸವ, ರಾಷ್ಟ್ರೀಯ ವಿಚಾರಸಂಕಿರಣ, ಪುಸ್ತಕ ಪ್ರದರ್ಶನ, ಕರಕುಶಲ ವಸ್ತುಪ್ರದರ್ಶನ, ದೇಸಿ ಆಹಾರ ಮೇಳ ಮತ್ತು ಪ್ರಾತ್ಯಕ್ಷಿಕೆಗಳು, ಚಿತ್ರಕಲಾ ಶಿಬಿರಒಳಗೊಂಡಂತೆ ರಂಗೋತ್ಸವ ರೂಪಿಸಲಾಗಿದೆ. ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಹಾಗೂ ಪುಸ್ತಕ ಮಾರಾಟದ ಮಳಿಗೆಗಳ ನಿರ್ಮಾಣ ಕಾರ್ಯ ನಡೆದಿದ್ದರೆ, ರಂಗ ವಿನ್ಯಾಸಕ ದ್ವಾರಕನಾಥ್‌ ನೇತೃತ್ವದಲ್ಲಿ ಹತ್ತಾರು ಕಲಾವಿದರು “ಭಾರತೀಯತೆ’ಪರಿಕಲ್ಪನೆ ಅಡಿಯಲ್ಲಿ ಪೋಸ್ಟರ್‌ ಹಾಗೂ ಭಿತ್ತಿಚಿತ್ರಗಳನ್ನು ತಯಾರು ಮಾಡುತ್ತಿದ್ದಾರೆ. ಜತೆಗೆ ಕಾರ್ಯಕ್ರಮನಡೆಯಲಿರುವ ವೇದಿಕೆಗಳನ್ನು ಸಿದ್ಧ ಮಾಡುತ್ತಿದ್ದಾರೆ.ಈಕಲಾವಿದರು ಸಿದ್ಧ ಮಾಡುತ್ತಿರುವ ಪೋಸ್ಟರ್‌ ಹಾಗೂಭಿತ್ತಿಚಿತ್ರಗನ್ನು ರಂಗಾಯಣದ ಅಂಗಳದ ಎಲ್ಲ ಕಡೆ ಅಳವಡಿಸಲಾಗುತ್ತದೆ.

60 ಮಳಿಗೆಗಳಿಗೆ ಸಿದ್ಧತೆ: ಕರಕುಶಲ, ಆಹಾರ, ತಿನಿಸು, ಪುಸ್ತಕ ಪ್ರದರ್ಶನ ಮತ್ತು ಮಾರಾಟಕ್ಕಾಗಿ 60 ಮಳಿಗೆಗಳು ತಲೆ ಎತ್ತುತ್ತಿವೆ. ದೇಶದ ನಾನಾ ಭಾಗಗಳಿಂದ ಕುಶಲಕರ್ಮಿಗಳು ರಂಗೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಈ ಪೈಕಿ ಕರಕುಶಲ ಮತ್ತು ಬಟ್ಟೆಗಾಗಿ 15 ಮಳಿಗೆ, ದೇಸಿ ಆಹಾರಕ್ಕಾಗಿ 15ಕ್ಕೂ ಹೆಚ್ಚಿನ ಮಳಿಗೆಗಳನ್ನು ಸಿದ್ಧಪಡಿಸಲಾಗಿದೆ. ಸಹಜ ಕೃಷಿ ಆಹಾರಗಳು, ಮೈಸೂರು ಶೈಲಿ, ಕೊಡಗು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ವಿಶೇಷ ಬಗೆ ಬಗೆಯ ಆಹಾರ ಪದಾರ್ಥಗಳ ಘಮಲು ಹಂಚಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಶೇಷವಾಗಿ ಉತ್ತರ ಕನ್ನಡ ತಿನಿಸು ತೊಡದೇವು, ದಾವಣಗೆರೆ ಬೆಣ್ಣೆ ದೊಸೆ, ಗೋಕಾಕ್‌ ಕರದಂಟು, ಹಾಲು ಬಾಯಿ ಇರಲಿದೆ. ಪುಸ್ತಕ ಪ್ರದರ್ಶನಕ್ಕೆ 15 ಮಳಿಗೆ ಸಿದ್ಧತೆ ಮಾಡಲಾಗುತ್ತಿದೆ.

ಕಲಾವಿದರು, ಗಣ್ಯರಿಗೆ ಉಳಿಯಲು ವ್ಯವಸ್ಥೆ: ಪ್ರತಿದಿನ ಉತ್ಸವಕ್ಕೆ ಆಗಮಿಸುವ 200ರಿಂದ 250 ಕಲಾವಿದರು, ಗಣ್ಯರಿಗಾಗಿ ನಗರದ ಖಾಸಗಿ ಹೋಟೆಲ್‌ಗಳು ಹಾಗೂ ಸರ್ಕಾರಿ ಗೆಸ್ಟ್‌ಹೌಸ್‌ಗಳನ್ನು ಕಾಯ್ದಿರಿಸಲಾಗಿದೆ. ಗೆಸ್ಟ್‌ಹೌಸ್‌ಗಳಿಂದ ರಂಗಾಯಣಕ್ಕೆ ಕರೆತರಲು ಬಸ್‌ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ.

ನಾಟಕದ ಟಿಕೆಟ್‌ಗಳ ಭರ್ಜರಿ ಮಾರಾಟ: ಬಹುರೂಪಿ ರಾಷ್ಟ್ರೀಯ ರಂಗೋತ್ಸವದ ನಾಟಕಗಳ ಟಿಕೆಟ್‌ ಮಾರಾಟ ಆರಂಭವಾಗಿದ್ದು, ರಂಗಾಸಕ್ತರಿಂದ ಭರ್ಜರಿ ರೆಸ್ಪಾನ್ಸ್‌ ಸಿಕ್ಕಿದೆ. ವಿಶೇಷವಾಗಿ ಭೂಮಿಗೀತ ರಂಗವೇದಿಕೆಯಲ್ಲಿ

ಡಿ.9 ರಂದು ಸಂಜೆ 6.30ಕ್ಕೆ ನಡೆಯಲಿರುವ “ಟಿಪ್ಪು ನಿಜ ಕನಸುಗಳು’ ನಾಟಕದ ಎಲ್ಲ ಟಿಕೆಟ್‌ಗಳು ಖಾಲಿಯಾಗಿವೆ. ಉಳಿದಂತೆ ಸಂಸ್ಕೃತಭಾಷೆಯ ಕರ್ಣಭಾರಂ, ಕನ್ನಡದ ಲೀಲಾವತಿ,ಚಿದಂಬರ ರಹಸ್ಯ, ಕರಿಮಾಯಿ, ತುಳು ಭಾಷೆಯ ಕಾಪ ನಾಟಕಗಳ ಟಿಕೆಟ್‌ಗೂ ಬೇಡಿಕೆ ಹೆಚ್ಚಾಗಿದೆ.

ಈ ಬಾರಿಯ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ರಂಗಾಯಣದ ಅಂಗಳದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಕರಕುಶಲ, ಆಹಾರ, ತಿನಿಸು, ಪುಸ್ತಕಪ್ರದರ್ಶನ ಮತ್ತು ಮಾರಾಟಕ್ಕಾಗಿ ರಂಗಾಯಣದ ಅಂಗಳದಲ್ಲಿ ವ್ಯವಸ್ಥಿತ 60 ಮಳಿಗೆಗಳು ತಲೆ ಎತ್ತುತ್ತಿವೆ. ಬಹುರೂಪಿ ಕುರಿತು ರಂಗ ವಿನ್ಯಾಸಕ ದ್ವಾರಕನಾಥ್‌ ನೇತೃತ್ವದಲ್ಲಿ ಹತ್ತಾರು ಕಲಾವಿದರು ಪೋಸ್ಟರ್‌, ಭಿತ್ತಿಚಿತ್ರಗಳನ್ನು ತಯಾರಿಸುತ್ತಿದ್ದಾರೆ.– ಅಡ್ಡಂಡ ಸಿ.ಕಾರ್ಯಪ್ಪ, ರಂಗಾಯಣ ನಿರ್ದೇಶಕ

-ಸತೀಶ್‌ ದೇಪುರ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.