ಮೈಸೂರಲ್ಲಿ ಹಣವಂತರಿಗಿಂತ ಹೃದಯವಂತರಿದ್ದಾರೆ


Team Udayavani, Jun 1, 2021, 12:34 PM IST

ಮೈಸೂರಲ್ಲಿ ಹಣವಂತರಿಗಿಂತ ಹೃದಯವಂತರಿದ್ದಾರೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹಣವಂತರಿಗಿಂತ ಹೃದಯವಂತರಿದ್ದಾರೆ ಎಂದು ನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್‌ ಮೆಚ್ಚುಗೆ ವ್ಯಕ್ತಪಡಿಸಿದರು.

ಲಾಗೈಡ್‌ ಕನ್ನಡ ಕಾನೂನು ಮಾಸಪತ್ರಿಕೆ ಬಳಗದ ವತಿಯಿಂದ ಸೋಮವಾರ ನಗರದಖಾಸಗಿಹೋಟೆಲ್‌ ನಲ್ಲಿ ಆಯೋಜಿಸಿದ್ದ ಮೈಸೂರು ಜಿಲ್ಲಾ ವಕೀಲರಿಗೆ ದಿನಸಿ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ಕೋವಿಡ್‌ ಸಂಕಷ್ಟದ ಸಮಯದಲ್ಲಿ ಸಂಘ-ಸಂಸ್ಥೆ ಗಳವರು ಅಧಿಕಾರಿಗಳ ಜೊತೆಗೆ ಕೈ ಜೋಡಿಸಿ ಕೆಲಸ ಮಾಡುತ್ತಿರುವುದೇ ಮೈಸೂರಿನಲ್ಲಿ ಹಣವಂತರಿಗಿಂತ ಹೃದಯವಂತರಿದ್ದಾರೆ ಎಂಬುದಕ್ಕೆ ಸಾಕ್ಷಿ. ಸಂಘ- ಸಂಸ್ಥೆಗಳವರು ಸ್ವಯಂ ಪ್ರೇರಿತರಾಗಿ ಮುಂದೆ ಬಂದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಕೊರೊನಾ ಸಮಯದಲ್ಲಿ ನಗರ ಪಾಲಿಕೆ ವತಿಯಿಂದ ಹೊಸದಾಗಿ ಶುರುವಾಗಿರುವ ಕಾರ್ಯಕ್ರಮಗಳಾಗಿ ರುವಕೋವಿಡ್‌ ಮಿತ್ರ, ವಾತ್ಸಲ್ಯ, ಸಾಂತ್ವನ, ಟೆಲಿ ಕೇರ್‌, ಮನೆ ಮನೆ ಸಮೀಕ್ಷೆ ಇದರಲ್ಲಿ ಅಧಿಕಾರಿಗಳ ಜೊತೆಗೆ ನಾಗರಿಕ ಸಮಾಜ ಯಾವುದೇ ನಿರೀಕ್ಷೆ ಇಟ್ಟುಕೊಳ್ಳದೆ ಬಹಳ ದೊಡ್ಡ ಮಟ್ಟದಲ್ಲಿ ಭಾಗವಹಿಸುತ್ತಿದ್ದಾರೆ. ನಾನು ಕರೆ ಮಾಡಿ ಸಂಕಷ್ಟದಲ್ಲಿರುವವರಿಗೆ 100 ಊಟ ಬೇಕುಅಂತ ಹೇಳಿದರೆ ಸಾಕು 5 ನಿಮಿಷದಲ್ಲಿ ತಯಾರಾಗುತ್ತೆ. ಈ ರೀತಿ ಎಲೆ ಮರೆಯಲ್ಲಿ ತುಂಬ ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಸಂಕಷ್ಟದ ಪರಿಸ್ಥಿತಿಯಲ್ಲಿ ವಕೀಲರಿಗೆ ದಿನಸಿ ವಿತರಿಸಲಾಗುತ್ತಿದೆ. ಇದು ನನ್ನ ಸೇವೆಯಲ್ಲಿ ಮರೆಲಾರದ ಅನುಭವವಾಗುತ್ತೆ. ಇಂತಹ ಅನುಭವ ಮುಂದೆ ಆಗುವುದಿಲ್ಲ. ಸಂಘ-ಸಂಸ್ಥೆಗಳವರು ಒಂದಷ್ಟು ಹಣ ನೀಡಿ ಸುಮ್ಮನಾಗುತ್ತಿಲ್ಲ. ನಮ್ಮ ಜೊತೆ ನಿಂತು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಪಾಲಿಕೆಯಿಂದ ಧನ್ಯವಾದ ತಿಳಿಸುತ್ತೇನೆ. ಆದಷ್ಟು ಬೇಗ ಕೊರೊನಾ ಮುಕ್ತರಾ ಗೋಣ. ನಾವು ಏನೇ ಕೆಲಸ ಮಾಡುತ್ತಿದ್ದರೂ ಸೋಂಕನ್ನು ಹಾಗೂ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿಕೆಲಸ ಮಾಡುತ್ತಿದ್ದೇವೆ ಎಂದರು.

ಡಿಸಿಪಿ ಪ್ರಕಾಶ್‌ ಗೌಡ ಮಾತನಾಡಿ, ಕೋವಿಡ್ ದಿಂದಾಗಿ 159 ಮಂದಿ ವಕೀಲರು ಸಾವನ್ನಪ್ಪಿದ್ದಾರೆ. ಇದು ನೋವಿನ ಸಂಗತಿ. ದಯವಿಟ್ಟು ಎಲ್ಲರೂ ಜಾಗೃತೆ ವಹಿಸಿ,ಕೋವಿಡ್ ನಿಯಮಗಳನ್ನು ಪಾಲಿಸಿ ಎಂದರು. ಇದೇ ವೇಳೆ 560 ಮಂದಿಗೆ ದಿನಸಿ ಕಿಟ್‌ ವಿತರಿಸಲಾಯಿತು. ಸಂಕಷ್ಟಕ್ಕೆ ಸಿಲುಕಿರುವ ವಕೀಲರ ಕುಟುಂಬದವರಿಗೆ ಟೋಕನ್‌ ಮೂಲಕ ದಿನಸಿ ಕಿಟನ್ನು ಮನೆ ಮನೆಗೆ ತಲುಪಿಸುವಕೆಲಸ ಮಾಡಲಾಯಿತು.

ಈ ವೇಳೆ ಸಂಸದ ಪ್ರತಾಪ್‌ ಸಿಂಹ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ ಕುಮಾರ್‌, ಹಿರಿಯ ವಕೀಲ ಎಂ.ಡಿ.ಹರೀಶ್‌ ಕುಮಾರ್‌ ಹೆಗಡೆ, ಲಾ ಗೈಡ್‌ ಕನ್ನಡ ಕಾನೂನು ಮಾಸಪತ್ರಿಕೆ ಸಂಪಾದಕರು, ವಕೀಲರು ಎಚ್‌.ಎನ್‌.ವೆಂಕಟೇಶ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.