ಜಿಪಂ ಅಧ್ಯಕ್ಷೆ ವಿರುದ್ಧ ಅವಿಶ್ವಾಸಕ್ಕೆ ಸಿದ್ಧತೆ


Team Udayavani, May 19, 2018, 12:52 PM IST

m2-jipam.jpg

ಮೈಸೂರು: ಅತಂತ್ರ ವಿಧಾನಸಭೆ ಸೃಷ್ಟಿಯಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಬೇಷರತ್‌ ಆಗಿ ಜೆಡಿಎಸ್‌ ಬೆಂಬಲಿಸಿರುವಂತೆ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಜೆಡಿಎಸ್‌-ಕಾಂಗ್ರೆಸ್‌ ಹೊಂದಾಣಿಕೆಯಾಗುವ ಸಾಧ್ಯತೆಗಳು ದಟ್ಟವಾಗುತ್ತಿದೆ. ಜೊತೆಗೆ ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ನಡೆದುಕೊಂಡಿರುವ ಅಧ್ಯಕ್ಷೆ ನಯೀಮಾ ಸುಲ್ತಾನರ ವಿರುದ್ಧ ಅವಿಶ್ವಾ ನಿರ್ಣಯ ಮಂಡಿಸಲು ಸಿದ್ಧತೆ ನಡೆದಿದೆ.

ಜೆಡಿಎಸ್‌-ಬಿಜೆಪಿ ಹೊಂದಾಣಿಕೆ: 49 ಸದಸ್ಯ ಬಲದ ಜಿಪಂನಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ರಾಜ್ಯಮಟ್ಟದ ತೀರ್ಮಾನದಂತೆ 18 ಸದಸ್ಯರನ್ನು ಹೊಂದಿರುವ ಜೆಡಿಎಸ್‌ ಅಧ್ಯಕ್ಷ ಸ್ಥಾನ ಹಾಗೂ ಒಂದು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಮತ್ತು 8 ಮಂದಿ ಸದಸ್ಯರನ್ನು

ಹೊಂದಿರುವ ಬಿಜೆಪಿಗೆ ಉಪಾಧ್ಯಕ್ಷ ಸ್ಥಾನ ಹಾಗೂ 2 ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಹಂಚಿಕೆಯ ಮಾತುಕತೆ ನಡೆದು ಹೊಂದಾಣಿಕೆ ಮಾಡಿಕೊಂಡಿವೆ. ಕಾಂಗ್ರೆಸ್‌ 22 ಸದಸ್ಯರನ್ನು ಹೊಂದಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಜೆಡಿಎಸ್‌-ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ವಿರೋಧ ಪಕ್ಷದಲ್ಲಿ ಕೂರುವಂತಾಗಿದೆ.

ಸಂಖ್ಯಾಬಲ ಕುಸಿತ: ಈ ಚುನಾವಣೆಯಲ್ಲಿ ಶಾಸಕರಾಗಿ ಚುನಾಯಿತರಾಗಿರುವ ಜೆಡಿಎಸ್‌ನ ಇಬ್ಬರು ಜಿಲ್ಲಾ ಪಂಚಾಯ್ತಿ ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ಕೊಡುವುದರಿಂದ ಜೆಡಿಎಸ್‌ನ ಸಂಖ್ಯಾಬಲ 16ಕ್ಕೆ ಇಳಿಯಬೇಕಿತ್ತಾದರೂ ಪಕ್ಷೇತರ ಸದಸ್ಯರಾಗಿದ್ದ ದಯಾನಂದಮೂರ್ತಿ, ಜೆಡಿಎಸ್‌ ಸೇರಿ ನಂಜನಗೂಡು ಕ್ಷೇತ್ರದಿಂದ ವಿಧಾನಸಭೆ ಚುನಾವಣೆ ಎದುರಿಸಿ ಪರಾಭವಗೊಂಡಿದ್ದಾರೆ.

ಇನ್ನು ಅಡಗೂರು ಎಚ್‌.ವಿಶ್ವನಾಥ್‌ ಪುತ್ರ ತಾಂತ್ರಿಕವಾಗಿ ಕಾಂಗ್ರೆಸ್‌ ಸದಸ್ಯರಾಗಿದ್ದರೂ ತಂದೆಯ ಕಾರಣದಿಂದ ಮಾನಸಿಕವಾಗಿ ಜೆಡಿಎಸ್‌ ಜೊತೆಗೇ ಇದ್ದಾರೆ. ಹೀಗಾಗಿ ಜೆಡಿಎಸ್‌ನ ಸಂಖ್ಯಾಬಲ 18 ಆಗಲಿದೆ. ಇನ್ನು ಹುಣಸೂರು ತಾಲೂಕಿನ ಹನಗೋಡು ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಜಿಪಂ ಚುನಾವಣೆ ಗೆದ್ದಿದ್ದ ಅನಿಲ್‌ ಚಿಕ್ಕಮಾದು,

ಜಿಪಂ ಸದಸ್ಯ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿ ಎಚ್‌.ಡಿ.ಕೋಟೆ ಕ್ಷೇತ್ರದಿಂದ ಶಾಸಕರಾಗಿ ಆರಿಸಿ ಬಂದಿದ್ದಾರೆ. ತಿ.ನರಸೀಪುರ ಕ್ಷೇತ್ರದ ಶಾಸಕರಾಗಿ ಚುನಾಯಿತರಾಗಿರುವ ಸೋಮನಾಥ ಪುರ ಕ್ಷೇತ್ರದ ಜಿಪಂ ಸದಸ್ಯರಾಗಿದ್ದ ಅಶ್ವಿ‌ನ್‌ ಕುಮಾರ್‌, ಶನಿವಾರ ಜಿಪಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಕುರ್ಚಿ ಬಿಡದ ಅಧ್ಯಕ್ಷೆ: ಮೊದಲ 20 ತಿಂಗಳು ಎಚ್‌.ಡಿ.ಕೋಟೆ ತಾಲೂಕಿನ ನಯೀಮಾ ಸುಲ್ತಾನ, ಉಳಿದ ಅವಧಿಗೆ ಅದೇ ತಾಲೂಕಿನ ಪರಿಮಳಾ ಶ್ಯಾಂ ಅವರನ್ನು ಅಧ್ಯಕ್ಷರನ್ನಾಗಿಸಲು ಜೆಡಿಎಸ್‌ ಪಕ್ಷದಲ್ಲಿ ಆಂತರಿಕವಾಗಿ ಒಪ್ಪಂದವಾಗಿತ್ತು.

ಅದರಂತೆ ಈಗಾಗಲೇ 20 ತಿಂಗಳು ಅಧಿಕಾರಾವಧಿ ಪೂರೈಸಿರುವ ನಯೀಮಾ ಸುಲ್ತಾನ, 2017ರ ಡಿಸೆಂಬರ್‌ನಲ್ಲೇ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕಿತ್ತು. ಆದರೆ, ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಅಧಿಕಾರದಲ್ಲಿ ಮುಂದುವರಿದಿರುವುದರಿಂದ ಅವಿಶ್ವಾಸ ನಿರ್ಣಯ ಮಂಡಿಸಿ, ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸಿದ್ಧತೆಗಳು ನಡೆದಿವೆ.

ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಳೆದ ಮೂರು ತಿಂಗಳಿಂದ ಜಿಪಂ ಸಾಮಾನ್ಯ ಸಭೆ ನಡೆದಿಲ್ಲ. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಘಟನಾವಳಿಗಳೆಲ್ಲ ಕಳೆದ ನಂತರ ನಡೆಯುವ ಜಿಪಂ ಸಾಮಾನ್ಯ ಸಭೆಯಲ್ಲಿ ನಯೀಮಾ ಸುಲ್ತಾನ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಿದ್ದಲ್ಲಿ, ಅವಿಶ್ವಾಸ ನಿರ್ಣಯದ ಮೂಲಕ ಕೆಳಗಿಳಿಸಲು ಜೆಡಿಎಸ್‌ ಸದಸ್ಯರೇ ತೀರ್ಮಾನಿಸಿದ್ದಾರೆ.

ಜಿಪಂನಲ್ಲೂ ಹೊಂದಾಣಿಕೆ: ರಾಜ್ಯಮಟ್ಟದ ತೀರ್ಮಾನದಂತೆ ಜಿಲ್ಲಾ ಪಂಚಾಯ್ತಿಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆ ಮಾಡಿಕೊಂಡು ಅಧಿಕಾರ ಹಂಚಿಕೊಂಡರೆ, ಉಪಾಧ್ಯಕ್ಷ ಸ್ಥಾನ ಹಾಗೂ 2 ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಹೊಂದಿರುವ ಬಿಜೆಪಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಬೇಕಾಗುತ್ತದೆ.

ಈ ಬಗ್ಗೆ ಉದಯವಾಣಿ ಜೊತೆಗೆ ಮಾತನಾಡಿದ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ಜಿಪಂ ಅಧ್ಯಕ್ಷರಿಗೆ ಸರ್ಕಾರ ರಾಜ್ಯ ಸಚಿವರ ಸ್ಥಾನಮಾನ ನೀಡಿ, ಎಲ್ಲ ಸವಲತ್ತು ನೀಡಿದ್ದರೂ ನಯೀಮಾ ಸುಲ್ತಾನ, ಅದನ್ನು ಬಳಸಿಕೊಂಡು ಉತ್ತಮ ಆಡಳಿತ ನೀಡುವಲ್ಲಿ ವಿಫ‌ಲರಾಗಿದ್ದಾರೆ. ಅಧ್ಯಕ್ಷರಾಗಿ ಜಿಲ್ಲೆಯ ಯಾವುದೇ ತಾಲೂಕಿಗೆ ಭೇಟಿ ನೀಡಲಿಲ್ಲ.

ಅಲ್ಲಿ ಕೆಡಿಪಿ ಸಭೆಗಳನ್ನು ಮಾಡಲಿಲ್ಲ. ಜೊತೆಗೆ ಪಕ್ಷದ ಆಂತರಿಕ ಒಪ್ಪಂದದಂತೆ ನಡೆದುಕೊಳ್ಳದೆ ಅಧಿಕಾರದಲ್ಲಿ ಮುಂದುವರಿದಿದ್ದಾರೆ. ಹೀಗಾಗಿ ಅವಿಶ್ವಾಸ ನಿರ್ಣಯ ಮಂಡಿಸಲೇ ಬೇಕಾಗುತ್ತದೆ. ಇದು ನನ್ನೊಬ್ಬನ ತೀರ್ಮಾನವಲ್ಲ. ಪಕ್ಷದ ತೀರ್ಮಾನದಂತೆ ನಡೆದುಕೊಳ್ಳಬೇಕಾಗುತ್ತದೆ ಎನ್ನುತ್ತಾರೆ.

ಜಿಪಂ ವಿರೋಧ ಪಕ್ಷದ ನಾಯಕರಾಗಿರುವ ಡಿ.ರವಿಶಂಕರ್‌, ರಾಜ್ಯಮಟ್ಟದ ಹೊಂದಾಣಿಕೆ ಸ್ಥಳೀಯವಾಗಿಯೂ ಅನ್ವಯವಾಗಬೇಕು. ಆದರೆ, ಜೆಡಿಎಸ್‌ ಬಿಬಿಎಂಪಿಯಲ್ಲಿ ಕಾಂಗ್ರೆಸ್‌ ಜೊತೆಗಿದೆ. ಮೈಸೂರು ಮಹಾ ನಗರಪಾಲಿಕೆ, ಮೈಸೂರು ಜಿಪಂನಲ್ಲಿ ಬಿಜೆಪಿ ಜೊತೆಗಿದೆ. ಹೀಗಾಗಿ ಜೆಡಿಎಸ್‌ ಯಾವ ತೀರ್ಮಾನ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ ಎನ್ನುತ್ತಾರೆ.

* ಗಿರೀಶ್‌ ಹುಣಸೂರು

ಟಾಪ್ ನ್ಯೂಸ್

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.