ಶಿಖರಾರೋಹಣ 2ನೇ ಆವೃತ್ತಿ ಬಿಡುಗಡೆ ಇಂದು


Team Udayavani, Feb 10, 2018, 12:37 PM IST

m6-shikharo.jpg

ಮೈಸೂರು: ಪ್ರಧಾನ ಮಂತ್ರಿಗಳಾಗಿ ಎಚ್‌.ಡಿ.ದೇವೇಗೌಡರ ಸಾಧನೆ ಕುರಿತಂತೆ ಹೊರತರಲಾಗಿರುವ ಸಾಧನೆಯ ಶಿಖರಾರೋಹಣ ಎರಡನೇ ಆವೃತ್ತಿ ಶನಿವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ ಎಂದು ಜೆಡಿಎಸ್‌ ಮುಖಂಡರಾದ ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್‌.ರಂಗಪ್ಪ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಶ್ವವಿದ್ಯಾನಿಲಯದ ಸೆನೆಟ್‌ ಭವನದಲ್ಲಿ ಸಂಜೆ 4.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಇತಿಹಾಸ ತಜ್ಞರಾದ ವಿಶ್ರಾಂತ ಕುಲಪತಿ ಡಾ.ಬಿ.ಷೇಕ್‌ ಅಲಿ ಅಧ್ಯಕ್ಷತೆವಹಿಸಲಿದ್ದಾರೆ. ಎಚ್‌.ಡಿ.ದೇವೇಗೌಡ ಹಾಗೂ ಚೆನ್ನಮ್ಮ ದೇವೇಗೌಡ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಹೇಳಿದರು.

ಸಾಧನೆಗೆ ಅಕ್ಷರ ರೂಪ: ಪುಸ್ತಕ ರಚನೆಕಾರರಲ್ಲಿ ಒಬ್ಬರಾದ ಸಾಹಿತಿ ಡಾ.ಪ್ರಧಾನ್‌ ಗುರುದತ್ತ ಮಾತನಾಡಿ, ಕೇವಲ 10 ತಿಂಗಳು 11 ದಿನಗಳ ಕಾಲ ಪ್ರಧಾನಮಂತ್ರಿಯಾಗಿದ್ದ ದೇವೇಗೌಡರು, ರಾಷ್ಟ್ರದ ಅನೇಕ ಜ್ವಲಂತ ಸಮಸ್ಯೆಗಳನ್ನು ನಿವಾರಿಸಿ ಸಾಧನೆ ಮಾಡಿದ್ದಾರೆ.

ಅವರೊಂದಿಗೆ ನಾನು ಮತ್ತು ಡಾ.ಸಿ.ನಾಗಣ್ಣ ಅವರು 40 ರಿಂದ 50 ಸಂದರ್ಶನ ಮಾಡಿ ಅವರ ಅಭಿಪ್ರಾಯಗಳಿಗೆ ಅಕ್ಷರ ರೂಪ ನೀಡಿದ್ದೇವೆ. ದೇವೇಗೌಡರು ಹೇಳುತ್ತಿದ್ದ ಒಂದೊಂದು ಮಾಹಿತಿಯಲ್ಲೂ ಖಚಿತತೆ ಇತ್ತು. ದಿನಾಂಕಗಳ ಸಹಿತ ವಿವರಿಸುತ್ತಿದ್ದರು.

ಅವರೊಬ್ಬ ಮಾನವ ಕಂಪ್ಯೂಟರ್‌ ಇದ್ದಂತೆ, ದೇವೇಗೌಡರು ಕೊಟ್ಟ ಮಾಹಿತಿಗಳನ್ನು ಧೂತವಾಸದಿಂದ ಖಚಿತಪಡಿಸಿಕೊಂಡೇ ಪ್ರಕಟಿಸಿದ್ದೇವೆ. ಇದರಲ್ಲಿ ನಮ್ಮದು ಅಳಿಲು ಸೇವೆ ಎಂದು ಹೇಳಿದರು. 24 ಅಧ್ಯಾಯವನ್ನು ಒಳಗೊಂಡ 400 ಪುಟದ ಈ ಗ್ರಂಥದಲ್ಲಿ ದೇವೇಗೌಡರು ತಮ್ಮ ಸಾಧನೆಯನ್ನು ಹೇಳಿಕೊಂಡಿದ್ದಾರೆಯೇ ಹೊರತು, ಯಾರ ಬಗ್ಗೆಯೂ ಆರೋಪ ಮಾಡಿಲ್ಲ ಎಂದರು. 

ದೋಷ ಸರಿಪಡಿಸಿ 2ನೇ ಆವೃತ್ತಿ: ಬೆಂಗಳೂರಿನಲ್ಲಿ ಮೊದಲ ಆವೃತ್ತಿ ಬಿಡುಗಡೆಯಾದ ಒಂದೇ ವಾರದಲ್ಲಿ 2 ಸಾವಿರ ಪ್ರತಿಗಳು ಮಾರಾಟವಾಗಿದೆ. ಹೀಗಾಗಿ ಮೊದಲ ಆವೃತ್ತಿಯಲ್ಲಿನ ಕೆಲ ಸಣ್ಣಪುಟ್ಟ ಮುದ್ರಣ ದೋಷಗಳನ್ನು ಸರಿಪಡಿಸಿ, ಪ್ರಧಾನಿಯಾಗಿ ಕರ್ನಾಟಕಕ್ಕೆ ಅವರ ಕೊಡುಗೆ ಎಂಬ ಅಧ್ಯಾಯವನ್ನು ಸೇರಿಸಿ 2ನೇ ಆವೃತ್ತಿ ಹೊರತಂದಿದ್ದೇವೆ ಎಂದರು. ಜೆಡಿಎಸ್‌ ನಗರ ಅಧ್ಯಕ್ಷ ಕೆ.ಟಿ.ಚೆಲುವೇಗೌಡ, ನಗರಪಾಲಿಕೆ ಸದಸ್ಯರಾದ ಆರ್‌.ಲಿಂಗಪ್ಪ, ಎಸ್‌.ಬಿ.ಎಂ.ಮಂಜು ಮೊದಲಾದವರು ಸುದ್ದಿಗೋಷ್ಠಿಯಲ್ಲಿದ್ದರು.

ಸಾಧನೆಯ ಶಿಖರಾರೋಹಣ ಗ್ರಂಥವನ್ನು ಡಾ.ಪ್ರಧಾನ್‌ ಗುರುದತ್ತ ಮತ್ತು ಡಾ.ಸಿ.ನಾಗಣ್ಣ ಅವರೇ ಇಂಗ್ಲಿಷ್‌ ಮತ್ತು ಹಿಂದಿ ಭಾಷೆಯಲ್ಲಿ ಬರೆಯುತ್ತಿದ್ದು, ಮೂರು ತಿಂಗಳಲ್ಲಿ ರಾಷ್ಟ್ರಮಟ್ಟದಲ್ಲಿ ಬಿಡುಗಡೆ ಮಾಡಲಾಗುವುದು. ಎಚ್‌.ಡಿ.ಕುಮಾರಸ್ವಾಮಿ ಅವರ 20 ತಿಂಗಳ ಸಾಧನೆಯನ್ನು ದಾಖಲಿಸಲು ಬಹಳಷ್ಟು ಸಾಹಿತಿಗಳು ಮುಂದೆ ಬಂದಿದ್ದಾರೆ. ಆದರೆ, ಕುಮಾರಸ್ವಾಮಿ ಅವರಿಗೆ ಸಮಯ ಇಲ್ಲದಿರುವುದರಿಂದ ಆ ಕೆಲಸ ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಎಚ್‌.ಡಿ.ಕುಮಾರಸ್ವಾಮಿ ಅವರ ಸಾಧನೆಯ ಪುಸ್ತಕವನ್ನೂ ಹೊರತರಲಾಗುವುದು.
-ಪ್ರೊ.ಕೆ.ಎಸ್‌.ರಂಗಪ್ಪ, ಜೆಡಿಎಸ್‌ ಮುಖಂಡರು

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.