ಶಿಥಿಲಗೊಂಡ ಕೆರೆ ಏರಿ ದುರಸ್ತಿ ಗೊಳಿಸಲು ಒತ್ತಾಯ


Team Udayavani, Nov 11, 2019, 4:41 PM IST

mysore-tdy-1

ಎಚ್‌.ಡಿ.ಕೋಟೆ: ತಾಲೂಕಿನ ಕಂಡೇಗೌಡನಪುರ ಗ್ರಾಮದಲ್ಲಿರುವ ಕೆರೆ ಏರಿ ಶಿಥಿಲಗೊಂಡು ಕಳೆದ 2 ದಿನಗಳ ಹಿಂದಿನಿಂದ ಬೀಳುತ್ತಿರುವ ಮಳೆಗೆ ಕೆರೆ ಏರಿ ಕುಸಿದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಅಷ್ಟೇ ಅಲ್ಲದೆ ಕೆರೆ ಏರಿ ಕುಸಿದರೆ ರಸ್ತೆ ಮಾರ್ಗ ಸಂಪರ್ಕ ಕಳೆದುಕೊಳ್ಳಲಿದ್ದು ದುರಸ್ತಿಗಾಗಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಒಂದು ವರ್ಷದ ಹಿಂದಷ್ಟೇ ಜಿಪಂ 5 ಲಕ್ಷ ಅನುದಾನದಲ್ಲಿ ಅಭಿವೃದ್ಧಿ ಪಡಿಸಿದ್ದ ಕೆರೆ ಇಷ್ಟು ಬೇಗ ಶಿಥಿಲಗೊಂಡಿದೆ. ಕೆರೆ ಏರಿ ಒಡೆದು ಕೆರೆಯ ನೀರು ತಗ್ಗು ಪ್ರದೇಶದತ್ತ ಹರಿದರೆ ಜನಜಾನು ವಾರುಗಳ ಜೀವಕ್ಕೆ ಸಂಚಕಾರ ಒದಗಲಿದೆ. ತಾಲೂಕಿನ ಹಂಪಾಪುರ ಹೋಬಳಿಗೆ ಸೇರಿದ ಈ ಕೆರೆ 16.16 ಎಕರೆ ವಿಸ್ತೀರ್ಣ ಹೊಂದಿರುವ ಕೆರೆ ಜಾಗದಲ್ಲಿ 1ಎಕರೆ ಸ್ಮಶಾನಕ್ಕೆ ಮಂಜೂರು ಮಾಡಲಾಗಿದೆ ಎಂದು ಗ್ರಾಮಸ್ಥರು ಹೇಳಿದರು.

ಸಂಚಾರ ಸ್ಥಗಿತವಾದರೆ ತೊಡಕು: ಕಂಡೇಗೌಡನ ಪುರ ಮತ್ತು ಕಾಡಸೂರು ಗ್ರಾಮಗಳಿಗೆ ಕಬ್ಬಿಗೆರೆ ಕೆರೆ ಜೀವನಾಡಿಯಾಗಿದ್ದು, ಅಂತರ್ಜಲ ವೃದ್ಧಿಗೆ ಕಾರಣವಾಗಿದೆ. ಕಂಡೇಗೌಡನ ಪುರ ಸೇರಲು ಈ ಕೆರೆ ಏರಿ ಮಾರ್ಗದ ರಸ್ತೆಯಲ್ಲಿಯೇ ಪ್ರತಿದಿನ ನೂರಾರು ಮಂದಿ ಸಂಚರಿಸುವುದೇ ಅಲ್ಲದೆ ಈ ಮಾರ್ಗವಾಗಿಯೇ ಸರ್ಕಾರಿ ಬಸ್‌ ಸೇರಿದಂತೆ ಖಾಸಗಿ ವಾಹನಗಳು ಸಂಚರಿಸಬೇಕಿದೆ. ಕೆರೆ ಏರಿ ಶಿಥಿಲವಾಗಿರುವ ಕಾರಣ ವಾಹನ ಸವಾರರು ಆತಂಕ ವ್ಯಕ್ತಪಡಿಸಿದ್ದಾರೆ. ಆಕಸ್ಮಾತ್‌ ಸಂಚಾರ ಸ್ಥಗಿತಗೊಂಡರೆ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ವಯೋವೃದ್ಧರು ಸೇರಿದಂತೆ ಎಲ್ಲರಿಗೂ ತೊಂದರೆಯಾಗುತ್ತದೆ.

ಅನಾಹುತಕ್ಕೆ ಮುನ್ನ ಕ್ರಮವಹಿಸಿ: ಕೆರೆ ಏರಿ ಕಳಪೆ ಕಾಮಗಾರಿ ಕಳಪೆ ಕಾಮಗಾರಿ ಅಥವಾ ಮಳೆ ನೀರಿನ ಅನಾಹುತ ಕಾರಣವೋ ಎಂಬುದನ್ನು ತಜ್ಞರು ಸ್ಥಳ ಪರಿಶೀಲಿಸಬೇಕಿದೆ. ಅಧಿಕಾರಿಗಳು ಬೇಜಬ್ದಾರಿಯಿಂದ ಕೆರೆ ಏರಿ ಒಡೆದು ಅನಾಹುತ ಸಂಭವಿಸಿದರೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನೇ ಕಾರಣ ಮಾಡ ಬೇಕಾಗುತ್ತದೆ. ಹೀಗಾಗಿ ತೊಂದರೆ ಎದುರಾಗುವ ಮುನ್ನ ಕ್ರಮ ಜರುಗಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.