ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಲು ಆಗ್ರಹ


Team Udayavani, Jun 9, 2019, 3:00 AM IST

parishista

ಹುಣಸೂರು: ಪರಿಶಿಷ್ಟ ಪಂಗಡಗಳಿಗೆ ಕೇಂದ್ರ ಸರಕಾರವು ಸಂವಿಧಾನ ಬದ್ಧವಾಗಿ ನೀಡುತ್ತಿರುವ ಶೇ.7.5 ಮೀಸಲಾತಿಯಂತೆ ರಾಜ್ಯ ಸರಕಾರವು ಸಹ ಅಷ್ಟೇ ಪ್ರಮಾಣದ ಮೀಸಲಾತಿ ಸೌಲಭ್ಯ ಕಲ್ಪಿಸ‌ಬೇಕೆಂದು ಒತ್ತಾಯಿಸಿ ತಾಲೂಕು ನಾಯಕರ ಸಂಘವು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಾಯಕ ಜನಾಂಗಕ್ಕೆ ಮೀಸಲಾತಿ ಸೌಲಭ್ಯ ಹೆಚ್ಚಿಸಿ, ತಾರತಮ್ಯ ಸರಿಪಡಿಸಿ, ಕೇಂದ್ರ ಸರಕಾರದಂತೆ ಸರಿ ಸಮಾನ ಮೀಸಲಾತಿ ನೀಡಿರೆಂದು ಘೋಷಣೆ ಮೊಳಗಿಸಿದರು.
ನಂತರ ಸಂಘದ ಅಧ್ಯಕ್ಷ ಹರವೆ ಶಿವಣ್ಣ ಮಾತನಾಡಿ, ರಾಜ್ಯ ಸರಕಾರವು ಪರಿಶಿಷ್ಟ ಪಂಗಡಗಳಿಗೆ ನ್ಯಾಯಬದ್ಧವಾಗಿ ನೀಡಬೇಕಾದ ಮೀಸಲಾತಿಯಲ್ಲಿ ಕೇವಲ ಶೇ.3 ರಷ್ಟು ನೀಡಿ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿದೆ.

ಕೇಂದ್ರ ಸರಕಾರವು ಶೇ.7.5 ಮೀಸಲಾತಿ ನೀಡುತ್ತಿದ್ದು, ಅದೇ ರೀತಿ ನೀಡಬೇಕಿದೆ. ಈ ಬಗ್ಗೆ ಹಲವಾರು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ ಈಗಲಾದರೂ ತಾರತಮ್ಯ ಕೈ ಬಿಟ್ಟು ನ್ಯಾಯಬದ್ಧವಾಗಿ ನೀಡಬೇಕಾದ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ, ಸ್ಪಂದಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು.

ತಾಲೂಕು ಯುವ ಜನತಾ ದಳದ ಅಧ್ಯಕ್ಷ ಎಸ್‌.ಲೋಕೇಶ್‌ ಮಾತನಾಡಿ, ಇತ್ತೀಚೆಗೆ ಇತರೆ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಅನ್ಯಾಯವೆಸಗುತ್ತಿದೆ. ಈ ನೀತಿ ಕೈಬಿಡಬೇಕೆಂದರೆ, ಜಿಪಂ ಮಾಜಿ ಸದಸ್ಯ ದೇವರಾಜ್‌ ಉದ್ಯೋಗ ಹಾಗೂ ರಾಜಕೀಯವಾಗಿ ಪರಿಶಿಷ್ಟ ಪಂಗಡಕ್ಕೆ ಅನ್ಯಾಯವಾಗುತ್ತಿದ್ದು ಮೀಸಲಾತಿಯನ್ನು ಸಂವಿಧಾನ ಬದ್ಧವಾಗಿ ಹೆಚ್ಚಿಸುವ ಮೂಲಕ ನೆರವಾಗಬೇಕೆಂದು ಒತ್ತಾಯಿಸಿದರು.

ಧರಣಿಯಲ್ಲಿ ಜಿಪಂ ಸದಸ್ಯ ಕಟ್ಟನಾಯ್ಕ, ಉಪಾಧ್ಯಕ್ಷ ಕೆ.ಎಸ್‌. ಅಣ್ಣಯ್ಯನಾಯ್ಕ, ಮಾಜಿ ಅಧ್ಯಕ್ಷ ತಿಮ್ಮನಾಯ್ಕ, ಮುಖಂಡರಾದ ಕಾಳಿದಾಸನಾಯ್ಕ, ಕಾರ್‌ ಗೋವಿಂದಯ್ಯ, ಸ್ವಾಮಿನಾಯ್ಕ, ಚೌಡನಾಯ್ಕ, ರಾಚಪ್ಪ, ರಾಮನಾಯ್ಕ ಸೇರಿದಂತೆ ಇತರರು ಇದ್ದರು.

ಶಾಸಕರ ಭರವಸೆ: ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಶಾಸಕ ಎಚ್‌.ವಿಶ್ವನಾಥ್‌ ಮನವಿ ಸ್ವೀಕರಿಸಿ, ಪರಿಶಿಷ್ಟ ಪಂಗಡಕ್ಕೆ ಅನ್ಯಾಯವಾಗುತ್ತಿರುವುದು ಸತ್ಯ, ಈ ಬಗ್ಗೆ ಮುಖ್ಯ ಮಂತ್ರಿಗಳ ಜೊತೆ ಚರ್ಚಿಸಿ ಮೀಸಲಾತಿ ಹೆಚ್ಚಳಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ಇತ್ತರು. ತಹಶೀಲ್ದಾರ್‌ ಬಸವರಾಜುರಿಗೂ ಸಹ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.