ಸಮಾಜ, ಆತ್ಮತೃಪ್ತಿಗೆ ಸಂಶೋಧನೆ ಮಾಡಿ


Team Udayavani, Mar 1, 2020, 3:00 AM IST

samaja-atma

ಮೈಸೂರು: ಇಂದು ಅಂತರ್‌ಶಿಸ್ತೀಯ ಸಂಶೋಧನೆಯ ಅಗತ್ಯತೆ ಇದ್ದು, ಸಮಾಜಕ್ಕಾಗಿ ಮತ್ತು ಆತೃಪ್ತಿಗಾಗಿ ಸಂಶೋಧನೆ ಕೈಗೊಳ್ಳಿ ಎಂದು ಮೈಸೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್‌ ಸಲಹೆ ನೀಡಿದರು. ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್‌ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಯುಜಿಸಿ ಪ್ರಾಯೋಜಿತ ಸಿಪಿಇ ಯೋಜನೆಯಡಿ ಏರ್ಪಡಿಸಿದ್ದ ನಾಲ್ಕು ದಿನಗಳ ಸಮಕಾಲೀನ ವಿಷಯಾಧಾರಿತ ಉಪನ್ಯಾಸ ಮಾಲೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೊಸ ವಿಚಾರ: ಯಾವುದೇ ವಿಜ್ಞಾನ ಶಾಖೆ ತನ್ನಷ್ಟಕ್ಕೆ ಪರಿಪೂರ್ಣವಾಗುವುದಿಲ್ಲ. ಅದು ಇತರೆ ವಿಜ್ಞಾನಶಾಖೆಗಳ ಜೊತೆ ಸಂಪರ್ಕ ಹೊಂದಿದಾಗ ಅದರ ಪರಿಣಾಮ ಉತ್ತಮವಾಗಿರುತ್ತದೆ. ಅಧ್ಯಾಪಕರಾದವರು ಕೇವಲ ಬೋಧನೆಗಾಗಿ, ಸಂಶೋಧನೆಗಾಗಿ ಓದುವುದಲ್ಲ. ನಿಯಮಿತವಾಗಿ ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಆಗ ಹೊಸ ಹೊಸ ವಿಚಾರಗಳ, ಇತರೆ ಜ್ಞಾನ ಶಾಖೆಗಳ ಪರಿಚಯವಾಗುತ್ತದೆ. ಆಗ ನಿಮ್ಮ ಬೋಧನೆಯ ಗುರಿ ಸ್ಪಷ್ಟವಾಗುತ್ತದೆ. ಯಾರಿಗೆ ಹೇಗೆ ಬೋಧಿಸಬೇಕೆಂಬುದು ತಿಳಿಯುತ್ತದೆ ಎಂದರು.

ಜ್ಞಾನಕ್ಕೆ ಗಡಿಯಿಲ್ಲ: ಸಮಾರೋಪ ಭಾಷಣ ಮಾಡಿದ ಜೆಎಸ್‌ಎಸ್‌ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ಕುಲಪತಿ ಡಾ.ಎಲ್‌.ಜವಹಾರ್‌ ನೇಸನ್‌, ಜ್ಞಾನಕ್ಕೆ ಗಡಿ ಎಂಬುದಿಲ್ಲ. ಜ್ಞಾನವನ್ನು ಯಾವ ಕಡೆಯಿಂದಲಾದರೂ, ಎಷ್ಟು ಬೇಕಾದರೂ ಪಡೆಯಬಹುದು. ಹಾಗೆ ಪಡೆಯಬೇಕಾದರೆ ಯಾವುದೇ ಒಂದು ವಿಷಯಕ್ಕೆ ಸೀಮಿತಗೊಳ್ಳದೆ ಹಲವಾರು ವಿಷಯಗಳ ಜ್ಞಾನವನ್ನು ಪಡೆಯಲು ಶ್ರಮಿಸಬೇಕು. ವೈದ್ಯಕೀಯ ಅಧ್ಯಯನ ಮಾಡುವವರಿಗೆ ದೇಶದ ಆರ್ಥಿಕ ಸ್ಥಿತಿಯ ಪರಿಚಯವೂ ಇರಬೇಕು. ಜ್ಞಾನ ಎಂದರೆ ಕೇವಲ ಓದಲ್ಲ. ಅದು ಅನುಭವ.

ಸಮಾಜದೊಂದಿಗೆ ಬೆರೆಯಬೇಕು, ಅಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು., ಅದರ ಪರಿಹಾರಕ್ಕೆ ನಮ್ಮ ಅಧ್ಯಯನ ಉಪಯೋಗವಾಗಬೇಕು. ಅದು ಮಾತ್ರವೇ ನಿಜವಾದ ಅಧ್ಯಯನ ಮತ್ತು ಸಂಶೋಧನೆ ಆಗುತ್ತದೆ. ಆದರೆ ಇಂದಿನ ಶಿಕ್ಷಣದ ಗುರಿ ಸಮರ್ಪಕವಾಗಿಲ್ಲದಿರುವುದರಿಂದ ಅದು ಮಾನವೀಯತೆ ಬೆಳೆಸಲು ಅಸಮರ್ಥವಾಗಿದೆ. ಈ ದಿಸೆಯಲ್ಲಿ ಸಮಾಜೋಪಯೋಗಿ ಅಧ್ಯಯನ ಮತ್ತು ಸಂಶೋಧನೆ ನಡೆಯಲಿ ಎಂದು ಸಲಹೆ ನೀಡಿದರು.

ಸಾಮಾಜಿಕ ಶಿಕ್ಷಣ: ಮೈಸೂರು ವಿವಿ ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕ ಡಾ.ಎಸ್‌.ಶ್ರೀಕಂಠಸ್ವಾಮಿ ಮಾತನಾಡಿ, ವಿಜ್ಞಾನಕ್ಕೆ ಇಂದು ಹಲವು ತೆರನಾದ ಸಾಮರ್ಥ್ಯವಿದೆ. ಮಾನವನ ಬದುಕಿಗೆ ತಕ್ಕಂತೆ ವಿಜ್ಞಾನವೂ ಬದಲಾವಣೆ ಹೊಂದುತ್ತಾ ಹೋಗುತ್ತಿದೆ. ಜ್ಞಾನದ ಮೂಲಕ ಬದುಕು ಕೂಡ ಹಸನಾಗಿದೆ. ಇಂದು ಕೇವಲ ತರಗತಿ ಶಿಕ್ಷಣ ಸಾಕಾಗುವುದಿಲ್ಲ. ಸಾಮಾಜಿಕ ಶಿಕ್ಷಣ ಅತ್ಯಗತ್ಯವಾಗಿದೆ. ಸಮಾಜದೊಂದಿಗೆ ಮುಖಾಮುಖೀಯಾಗಲು ಇಂತಹ ಉಪನ್ಯಾಸಗಳ ಅಗತ್ಯತೆ ಇದೆ ಎಂದು ತಿಳಿಸಿದರು.

ಕಾಲೇಜಿನ ಮುಖ್ಯ ಕಾರ್ಯನಿರ್ವಾಹಕ ಪ್ರೊ.ಬಿ.ವಿ. ಸಾಂಬಶಿವಯ್ಯ, ಪ್ರಾಂಶುಪಾಲ ಪೊ›. ಎಂ. ಮಹದೇವಪ್ಪ , ಸಂಚಾಲಕ ಡಾ.ಬಿ.ವೈ. ಸತೀಶ್‌ಕುಮಾರ್‌ ಉಪಸ್ಥಿತರಿದ್ದರು. ನಾಲ್ಕು ದಿನಗಳವರೆಗೆ ನಡೆದ‌ ಈ ಉಪನ್ಯಾಸ ಮಾಲೆಯಲ್ಲಿ ಭೌತಿಕ ವಿಜ್ಞಾನ, ಜೈವಿಕ ವಿಜ್ಞಾನ, ಸಮಾಜ ವಿಜ್ಞಾನ ಮತ್ತು ಮಾನವಿಕ ಶಾಸ್ತ್ರ ಹಾಗೂ ವಾಣಿಜ್ಯ ಮತ್ತು ನಿರ್ವಹಣೆ ಕುರಿತು ದೇಶದ ವಿವಿಧ ವಿಶ್ವವಿದ್ಯಾಲಯಗಳ ಸಂಪನ್ಮೂಲ ವ್ಯಕ್ತಿಗಳು ಉಪನ್ಯಾಸ ನೀಡಿದರು. 500ಕ್ಕೂ ಅಧಿಕ ಮಂದಿ ಉಪನ್ಯಾಸಕರು ಪಾಲ್ಗೊಂಡರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.