ಹಳ್ಳಿಹಕ್ಕಿಗೆ ಹುಣಸೂರು ಕ್ಷೇತ್ರದಲ್ಲಿ ಮರುಜೀವ


Team Udayavani, May 16, 2018, 2:10 PM IST

m2-halli.jpg

ಹುಣಸೂರು: ಹುಣಸೂರು ಕ್ಷೇತ್ರದಲ್ಲಿನ ಜಾತಿ ಸಮೀಕರಣ, ಬಿಜೆಪಿಯೊಂದಿಗಿನ ಆಂತರಿಕ ಒಪ್ಪಂದ ಎಚ್‌.ವಿಶ್ವನಾಥರನ್ನು ಗೆಲುವಿನ ದಡ ಸೇರಿಸುವಲ್ಲಿ ಜೆಡಿಎಸ್‌ ವರಿಷ್ಠರು ಯಶಸ್ವಿಯಾಗುವ ಮೂಲಕ ಕಾಂಗ್ರೆಸ್‌ನಲ್ಲಿ ಮೂಲೆ ಗುಂಪಾಗಿದ್ದವರಿಗೆ ರಾಜಕೀಯ ಮರುಜೀವ ನೀಡಿದೆ.

ವಿಶ್ವನಾಥ್‌ ರಾಜಕೀಯ ಅನುಭವ: ದೇವರಾಜ ಅರಸರ ಕಾಲದಿಂದಲೂ ರಾಜಕೀಯವನ್ನು ಕರಗತವಾಗಿಸಿಕೊಂಡಿರುವ ಎಚ್‌.ವಿಶ್ವನಾಥ್‌ ಹಲವಾರು ಚುನಾವಣೆಗಳನ್ನು ಎದುರಿಸಿ, ರಾಜಕೀಯ ಏಳು ಬೀಳುಗಳನ್ನು ಕಂಡವರು. ಕಾಂಗ್ರೆಸ್‌ನಲ್ಲಿದ್ದಾಗ ಸಾಕಷ್ಟು ಅಧಿಕಾರ ಅನುಭವವಿದ್ದವರು.

ಕಾಂಗ್ರೆಸ್‌ ತೊರೆದು ತೆನೆ ಹೊತ್ತನಂತರ ಕ್ಷೇತ್ರದಲ್ಲಿ ಶಾಸಕರ ವಿರೋಧಿಗಳನ್ನು ತಮ್ಮತ್ತ ಸೆಳೆದುಕೊಳ್ಳುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಎರಡು ಬಾರಿ ಕ್ಷೇತ್ರಕ್ಕಾಗಮಿಸಿದ ಪಕ್ಷದ ವರಿಷ್ಠ ದೇವೇಗೌಡ ಹಾಗೂ ಕುಮಾರಸ್ವಾಮಿ ಸಂಘಟಿತವಾಗಿ ಕ್ಷೇತ್ರ ಪ್ರಚಾರ ನಡೆಸುವ ಮೂಲಕ ಮತ ಕ್ರೂಢೀಕರಣಗೊಳಿಸುವಲ್ಲಿ ಯಶಸ್ಸು ಕಂಡವರು. 

ವಿಶ್ವನಾಥ್‌ ಸಿದ್ದರಾಮಯ್ಯರೊಂದಿಗಿನ ಸಂಬಂಧ ಕಡಿದುಕೊಂಡ ಬಳಿಕ ಮಾಜಿ ಪ್ರಧಾನಿ ದೇವೇಗೌಡರು ಕಾಂಗ್ರೆಸ್‌ನಿಂದ ಕರೆತಂದು ಹುಣಸೂರು ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದರು. ಅವರು ಹೆಣೆದ ರಣತಂತ್ರದಲ್ಲಿ ಯಶಸ್ವಿಯಾಗಿರುವ ವಿಶ್ವನಾಥರಿಗೆ ಕ್ಷೇತ್ರದಲ್ಲಿನ ಒಕ್ಕಲಿಗರು, ಕುರುಬ ಸಮುದಾಯದ ಬೆಂಬಲ, ಪರಿಶಿಷ್ಟ ಹಾಗೂ ಇತರೆ ಸಮುದಾಯಗಳ ಸಹಕಾರ ವಿಶ್ವನಾಥ್‌ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದೆ.

ಸೇಡು ತೀರಿಸಿಕೊಂಡ ವಿಶ್ವನಾಥ್‌: ಸಿದ್ದರಾಮಯ್ಯ ವಿರುದ್ಧ ಸೆಟೆದು ನಿಂತಿದ್ದ ವಿಶ್ವನಾಥರಿಗೆ  ಈ ಚುನಾವಣೆ ಅಗ್ನಿ ಪರೀಕ್ಷೆ ಜೊತೆಗೆ ರಾಜಕೀಯದ ಅಂತ್ಯವಾಗಿತ್ತು. ಇದಕ್ಕಾಗಿ ಜೆಡಿಎಸ್‌ ಸೇರಿದ್ದಲ್ಲದೆ ಬಿಜೆಪಿಯಿಂದ ದುರ್ಬಲ ಅಭ್ಯರ್ಥಿ ಹಾಕುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಲ್ಲದೆ, ಗೆಲುವಿನಲ್ಲೂ ತಮ್ಮ ಛಾಪು ಮೂಡಿಸಿ, ಸೇಡು ತೀರಿಸಿಕೊಂಡರೆನ್ನಲಾಗುತ್ತಿದೆ.

ನನಸಾಗದ ಹ್ಯಾಟ್ರಿಕ್‌ ಕನಸು: ಹಿಂದೆ ಒಮ್ಮೆ ಪುರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದ ಎಚ್‌.ಪಿ.ಮಂಜುನಾಥ್‌ 2008ರಲ್ಲಿ ಸಿದ್ದರಾಮಯ್ಯರ ನಾಮಬಲದಿಂದಲೇ ಕಾಂಗ್ರೆಸ್‌ ಶಾಸಕರಾಗಿ ಆಯ್ಕೆಯಾದರು. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ,  ಈ ಬಾರಿಯೂ ಗೆಲುವು ಸಾಧಿಸಿ ಹ್ಯಾಟ್ರಿಕ್‌ ಕಸಸು ಕಟ್ಟಿಕೊಂಡಿದ್ದರು.

ಇದಕ್ಕಾಗಿ ಸರ್ವ ಸನ್ನದ್ದರಾಗಿದ್ದರು. ಆದರೆ ಇವರ ಗೆಲುವಿನ ಮರ್ಮವರಿತ ಜೆಡಿಎಸ್‌ ತನ್ನೆಲ್ಲಾ ತಂತ್ರ ಬಳಸಿ ಅವರ ಹ್ಯಾಟ್ರಿಕ್‌ ಕನಸನ್ನು ಭಗ್ನಗೊಳಿಸಿದೆ. ಆದರೆ ಕಾಂಗ್ರೆಸ್‌ ಅಭ್ಯರ್ಥಿ ಮಂಜುನಾಥ್‌ ಈ ಬಾರಿ ಸೋಲುಂಡರೂ ಕಲೆದ ಬಾರಿಯ ಮತಗಳನ್ನು ತಮ್ಮಲ್ಲೇ ಉಳಿಸಿಕೊಳ್ಳುವಲ್ಲಿ ಮಾತ್ರ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.