ಶಾಸಕರ ರಾಜೀನಾಮೆ ಪರ್ವ ಆರಂಭ


Team Udayavani, Jul 2, 2019, 3:00 AM IST

Udayavani Kannada Newspaper

ಮೈಸೂರು: ಆನಂದ್‌ಸಿಂಗ್‌ ರಾಜೀನಾಮೆಯೊಂದಿಗೆ ಶಾಸಕರ ರಾಜೀನಾಮೆ ಪರ್ವ ಶುರುವಾಗಲಿದ್ದು, ಈ ಸರ್ಕಾರ ಪತನಗೊಳ್ಳುವುದು ಖಚಿತ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರಿನ ಜ್ಯೋತಿ ನಗರದಲ್ಲಿನ ನಿರಾಶ್ರಿತರ ಪರಿಹಾರ ಕೇಂದ್ರದ ನಿವಾಸಿಗಳೊಂದಿಗೆ ಸೋಮವಾರ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಮ್ಮಿಶ್ರ ಸರ್ಕಾರದಲ್ಲಿರುವ ಕಾಂಗ್ರೆಸ್‌-ಜೆಡಿಎಸ್‌ನವರಲ್ಲಿ ಸಾಕಷ್ಟು ಗೊಂದಲಗಳಿವೆ. ಕೆಲವರು ಮುಂದೇನು ಎಂಬ ಯೋಚನೆಯಲ್ಲಿ ಸಿಲುಕಿದ್ದಾರೆ. ಶಾಸಕ ಆನಂದ್‌ ಸಿಂಗ್‌ ರಾಜೀನಾಮೆಯೊಂದಿಗೆ ಈ ಗೊಂದಲ ಜಗಜ್ಜಾಹೀರಾಗಿದೆ ಎಂದು ಹೇಳಿದರು.

ದೋಸ್ತಿ ಸರ್ಕಾರ ಪತನ: ಜಿಂದಾಲ್‌ ಕಂಪನಿಗೆ ಭೂಮಿ ನೀಡುವುದನ್ನು ವಿರೋಧಿಸಿದ್ದ ಶಾಸಕ ಆನಂದ್‌ ಸಿಂಗ್‌, ಭೂಮಿ ಉಳಿಸಲು ರಾಜೀನಾಮೆಗೂ ಸಿದ್ಧ ಎಂದಿದ್ದರು. ಜಿಂದಾಲ್‌ ಕಂಪನಿಗೆ ಭೂಮಿ ನೀಡಲ್ಲವೆಂದು ಸಚಿವ ಸಂಪುಟ ಉಪ ಸಮಿತಿ ರಚಿಸಿ ಕಣ್ಣೊರೆಸುವ ತಂತ್ರ ನಡೆಸುತ್ತಿರುವುದನ್ನು ಅರಿತ ಆನಂದ್‌ ಸಿಂಗ್‌ ರಾಜೀನಾಮೆ ನೀಡಿರುವುದನ್ನು ಸ್ವಾಗತಿಸುವುದಾಗಿ ಹೇಳಿದರು.

ಆನಂದ್‌ಸಿಂಗ್‌ ರಾಜೀನಾಮೆ ಕೊಟ್ಟಾಗಿದೆ. ಮುಂದೆ ಅನೇಕ ಶಾಸಕರು ಅವರನ್ನು ಅನುಸರಿಸುವ ಲಕ್ಷಣ ಕಾಣಿಸುತ್ತಿದ್ದು, ಬಿಜೆಪಿ ಆಪರೇಷನ್‌ ಕಮಲ ಮಾಡುತ್ತಿಲ್ಲ. ಅದರ ಅಗತ್ಯವೂ ಇಲ್ಲ. ಮುಂದಿನ ದಿನಗಳಲ್ಲಿ ದೊಡ್ಡ ರಾಜಕೀಯ ಸ್ಫೋಟವಾಗಲಿದೆ. ದೋಸ್ತಿ ಸರ್ಕಾರ ಪತನವಾದರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿದರು.

ಒಳಒಪ್ಪಂದ: ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಹೀನಾಯವಾಗಿ ಸೋತು ಧೂಳೀಪಟವಾದ ನಂತರವು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದೆ ಅಧಿಕಾರ ದಾಹ, ದುರಾಸೆಯಿಂದ ಮುಂದುವರಿದಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌ಗೆ ಮಾತ್ರ ಈ ಸರ್ಕಾರ ಮುಂದುವರಿಯುವುದು ಬೇಕಾಗಿದೆ. ಬೇರ್ಯಾವ ಶಾಸಕರಿಗೂ ಈ ಸರ್ಕಾರ ಮುಂದುವರಿಯುವುದು ಬೇಕಿಲ್ಲ. ಅದರಲ್ಲೂ ಕಾಂಗ್ರೆಸ್‌ ಶಾಸಕರಿಗೆ ಸರ್ಕಾರ ಮುಂದುವರಿಯುತ್ತಿರುವುದು ಇಷ್ಟವಿಲ್ಲ. ಆದರೂ ಕೆಲವರು ಒಳ ಒಪ್ಪಂದ ಮಾಡಿಕೊಂಡು ಹೋಗುತ್ತಿದ್ದಾರೆ ಎಂದು ಟೀಕಿಸಿದರು.

ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ಮಧ್ಯಸ್ಥಿಕೆ ವಹಿಸಲು ಮುಂದಾಗಿರುವ ಸಚಿವ ಡಿ.ಕೆ.ಶಿವಕುಮಾರ್‌ ಯಾವಾಗಲೂ ಹೇಳಿದ್ದನ್ನೇ ಹೇಳುತ್ತಿದ್ದು, ಅವರ ಕ್ಯಾಸೆಟ್‌ ಕೇಳಿ ಸುಸ್ತಾಗಿ ಹೋಗಿದೆ. ಈ ನಾಯಕರ ದೊಂಬರಾಟ ಹೆಚ್ಚು ದಿನ ನಡೆಯಲ್ಲ. ಈ ಸರ್ಕಾರ ಯಾವತ್ತೋ ಬೀಳಬೇಕಿತ್ತು. ಆದರೂ ಕುಂಟುತ್ತಾ ಸಾಗಿದೆ. ಈ ಬಾರಿ ಪತನವಾಗುವುದು ಖಚಿತ ಎಂದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವಿದೇಶ ಪ್ರವಾಸ ತಪ್ಪಲ್ಲ. ಆದರೆ,ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿಯಿಂದಾಗಿ ರೈತರು ಸಮಸ್ಯೆಯಲ್ಲಿ ಸಿಲುಕಿರುವಾಗ ಹೋಗಿರುವುದು ಸರಿಯಲ್ಲ. ವಿದೇಶ ಪ್ರವಾಸ ಅವರ ವೈಯಕ್ತಿಕವೇ ಇರಬಹುದು. ಆದರೆ, ಜ್ವಲಂತ ಸಮಸ್ಯೆ ಇರುವಾಗ ವಿದೇಶ ಪ್ರವಾಸ ಹೋಗುವುದು ಸರಿಯಲ್ಲ ಎಂದು ಹೇಳಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ರಾಜೇಂದ್ರ, ನಗರ ಅಧ್ಯಕ್ಷ ಡಾ.ಬಿ.ಎಚ್‌.ಮಂಜುನಾಥ್‌, ನಗರಪಾಲಿಕೆ ಸದಸ್ಯ ಬಿ.ವಿ.ರಾಮಪ್ರಸಾದ್‌, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಚ್‌.ವಿ.ರಾಜೀವ್‌ ಮತ್ತಿತರರು ಹಾಜರಿದ್ದರು.

ಜಿಂದಾಲ್‌ನಿಂದ ಕಿಕ್‌ಬ್ಯಾಕ್‌: ಜಿಂದಾಲ್‌ ಕಂಪನಿಗೆ ಭೂಮಿ ನೀಡುವ ವಿಚಾರದಲ್ಲಿ ಕಿಕ್‌ಬ್ಯಾಕ್‌ ಪಡೆಯಲಾಗಿದೆ. ಪ್ರಕರಣವನ್ನು ಮುಚ್ಚಿಹಾಕಲು ಉಪ ಸಮಿತಿ ರಚಿಸಲಾಗಿದೆ ಹೊರತು ಬೇರೇನೂ ಇಲ್ಲ. ಈಗಾಗಲೇ 14ಸಾವಿರ ಎಕರೆ ಭೂಮಿ ಕೊಡಲಾಗಿದೆ.

ಉಳಿದ 3000 ಎಕರೆಯನ್ನು ಕೊಡುವುದಕ್ಕೆ ಕಿಕ್‌ಬ್ಯಾಕ್‌ ಪಡೆಯಲಾಗಿದೆ ಎನ್ನುವುದರಲ್ಲಿ ಯಾವ ಅನುಮಾನವೇ ಇಲ್ಲ. ಇಲ್ಲದಿದ್ದರೆ ಇಷ್ಟೊಂದು ವಿರೋಧದ ನಡುವೆ ಜಿಂದಾಲ್‌ಗೆ ಭೂಮಿ ಕೊಡಬೇಕಾದ ಅಗತ್ಯ ಏನಿತ್ತು ಎಂದು ಮಾಜಿ ಉಪ ಮುಖ್ಯಮಂತ್ರಿ ಅಶೋಕ್‌ ಪ್ರಶ್ನಿಸಿದರು.

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.