ಬೇಲದ ಕುಪ್ಪೆ ಜಾತ್ರೆಗೆ ಭಕರ ಪ್ರವೇಶಕ್ಕೆ ನಿರ್ಬಂಧ


Team Udayavani, Nov 26, 2021, 11:31 AM IST

ಜಾತ್ರೆಗೆ ನಿರ್ಬಂಧ

ಎಚ್‌.ಡಿ.ಕೋಟೆ: ತಾಲೂಕಿನಲ್ಲಿ ಮೊದಲ ಜಾತ್ರೆ ಆಚರಣೆ ಎನ್ನುವ ಖ್ಯಾತಿಗೆ ಪಾತ್ರವಾಗಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನದೊಳಗಿರುವ ಪ್ರಸಿದ್ಧ ಬೇಲದಕುಪ್ಪೆ ಶ್ರೀ ಮಹದೇಶ್ವರ ಸ್ವಾಮಿ ಜಾತ್ರೆಗೆ ಈ ಬಾರಿ ಸಾರ್ವಜನಿಕ ಪ್ರವೇಶ ನಿರ್ಬಂಧದೊಂದಿಗೆ ನ.27ರಂದು ಸರಳವಾಗಿ ಆಚರಣೆ ನಡೆಯಲಿದೆ.

ಪೂರ್ವಜರ ಕಾಲದಿಂದಲೂ ನಡೆಯುತ್ತಿತ್ತು: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಯಡಿಯಾಲ ವನ್ಯಜೀವಿ ಸಂರಕ್ಷಿತ ಪ್ರದೇಶದ ಅರಣ್ಯದೊಳಗಿರುವ ಬೇಲದಕುಪ್ಪೆ ಶ್ರೀ ಮಹದೇಶ್ವರಸ್ವಾಮಿ ಜಾತ್ರೆ ಮಹೋತ್ಸವ ತಾಲೂಕಿನಲ್ಲಿಯೇ ಹೆಸರುವಾಸಿ. ಪ್ರತಿವರ್ಷ 3-4ದಿನ ದೇವರಿಗೆ ಅಭಿಷೇಕ, ಹೋಮ, ಹಾಲರವಿಸೇವೆ, ಕೊಂಡೋತ್ಸವ, ರಾಸುಗಳ ಜಾತ್ರೆ, ರಥೋತ್ಸವ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪೂರ್ವಜರ ಕಾಲದಿಂದಲೂ ವಿಜೃಂಭಣೆಯಿಂದ ಆಚರಣೆ ಕಾಣುತ್ತಿತ್ತು.

ಮರಗಳಿಗೆ ಬೆಂಕಿ ಇಟ್ಟಿದ್ದರು: ದೇವರ ಜಾತ್ರೆಯಲ್ಲಿ ಪಾಲ್ಗೊಳ್ಳಲು ತಾಲೂಕಿನ ಭಕ್ತರಷ್ಟೇ ಅಲ್ಲದೆ ನರೆಹೊರೆಯ ತಾಲೂಕು ಜಿಲ್ಲೆಗಳಿಂದ ಭಕ್ತ ಸಮೂಹವೇ ಹರಿದು ಬರುತ್ತಿತ್ತು. ಹುಲಿಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಣೆಯಾಗುತ್ತಿದ್ದಂತೆಯೇ ಕಳೆದ 2-3ವರ್ಷಗಳ ಹಿಂದೆ ಅರಣ್ಯದೊಳಗಿನ ಬೇಲದಕುಪ್ಪೆ ಮಹದೇಶ್ವರಸ್ವಾಮಿ ಜಾತ್ರೆಗೆ ಪ್ರವೇಶ ನಿರ್ಬಂಧಿಸಲಾಗಿತ್ತು.

ಹೀಗಾಗಿ ಕುಪಿತರಾದ ವಿವಿಧ ಗ್ರಾಮಗಳ ಗ್ರಾಮಸ್ಥರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ವೈಷಮ್ಯ ಭುಗಿಲೆದಿತ್ತು. ಕಳೆದ 2 ವರ್ಷಗಳ ಹಿಂದೆ ಅರಣ್ಯ ಇಲಾಖೆ ಇರಿಸಿದ್ದ ಮರಗಳಿಗೆ ಬೆಂಕಿ ಇಟ್ಟ ಆರೋಪದಲ್ಲಿ ಪ್ರಕರಣವೂ ದಾಖಲಾಗಿತ್ತು. ಬಳಿಕ ಶಾಂತಿ ಸಭೆ ನಡೆಸಿ ವರ್ಷದ ಜಾತ್ರೆ ಸಂದರ್ಭದಲ್ಲಿ ಮಾತ್ರ ಪ್ರವೇಶ ನೀಡಲು ಮೌಖೀಕವಾಗಿ ತೀರ್ಮಾನಿಸಿಕೊಂಡು ಕಳೆದ 2 ವರ್ಷದ ಹಿಂದೆ ವರ್ಷ ಕೂಡ ಜಾತ್ರೆ ನೆರವೇರಿಸಲಾಗಿತ್ತು.

ದೇವಸ್ಥಾನ ಸಮಿತಿ ಮತ್ತು ಅಧಿಕಾರಿಗಳ ತಂಡದೊಂದಿಗೆ ಇದೇ ನ.27ರಂದು ಜಾತ್ರೆ ನೆರವೇರಿಸಲು ಸಿದ್ಧತೆ ನಡೆದಿದೆಯಾದರೂ ಭಕ್ತರಿಗೆ ಪ್ರವೇಶ ನಿರ್ಬಂಧಿಸಿರುವುದು ಬೇಸರ ಮೂಡಿಸಿದೆ. ಪ್ರತಿವರ್ಷ ಸಾವಿರಾರು ಭಕ್ತರ ಸಮಕ್ಷಮದಲ್ಲಿ ವಿಜೃಂಭಣೆಯ ಆಚರಣೆ ಕಾಣುತ್ತಿದ್ದ ಜಾತ್ರೆ ಕಳೆದ ಸಾಲಿನಂತೆ ಈ ಬಾರಿಯೂ ಸರಳವಾಗಿ ಆಚರಣೆಗೆ ಸಿದ್ಧತೆಗೊಂಡಿದೆ.

ಭಕ್ತ ಸಮೂಹಕ್ಕೆ ನಿರಾಸೆ

ಕಳೆದ ಸಾಲಿನಲ್ಲಿ ಮತ್ತು ಪ್ರಸಕ್ತ ಸಾಲಿನಲ್ಲಿ ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸರ್ಕಾರದ ಆದೇಶದಂತೆ ಬೇಲದ ಕುಪ್ಪೆ ಜಾತ್ರೆಗೆ ಭಕ್ತರು ಮತ್ತು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೇವಸ್ಥಾನ ಸಮಿತಿ ಸದಸ್ಯರು ಮತ್ತು ಅಗತ್ಯ ಇರುವ ಅಧಿಕಾರಿಗಳಿಗಷ್ಟೇ ಪ್ರವೇಶ ನೀಡಿ ಇನ್ನುಳಿದ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಆದೇಶದಿಂದ ತಲೆ ಮಾರುಗಳಿಂದ ದೇವರ ಜಾತ್ರಾ ಕೈಂಕರ್ಯದಲ್ಲಿ ಪಾಲ್ಗೊಂಡು ಭಕ್ತಿಯ ಪರಾಕಾಷ್ಟೆ ಮೆರೆಯುತ್ತಿದ್ದ ಭಕ್ತ ಸಮೂಹಕ್ಕೆ ನೋವಾಗಿದೆ.

“ನಾವು ಪಾರಂಪರಿಕವಾಗಿ ಜಾತ್ರೆ ಆಚರಿಸಿಕೊಂಡು ಬರುತ್ತಿದ್ದೇವೆ. ಈಗ, ಧಾರ್ಮಿಕ ಆಚರಣೆಗೆ ತಡೆ ನೀಡುವ ಮೂಲಕ ಸಂಪ್ರದಾಯಕ್ಕೆ ಆಚರಣೆಗೆ ಉಲ್ಲಂಘನೆ ಸರಿಯಲ್ಲ.– ಪ್ರಕಾಶ, ಸ್ಥಳೀಯ ನಿವಾಸಿ

 “ಇಡೀ ವರ್ಷ ಧಾರ್ಮಿಕ ಆಚರಣೆಗೆ ಅವಕಾಶ ನೀಡದೇ ಇದ್ದರೂ ಸರಿ. ಆದರೆ, ಜಾತ್ರೆಯ ದಿನಗಳಲ್ಲಾದರೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಾತ್ರೆಗೆ ಅವಕಾಶ ನೀಡುವುದು ಒಳಿತು.” – ಮೋಹನ್‌, ಗ್ರಾಮಸ್ಥರು

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.