ಭತ್ತ-ಧಾನ್ಯಗಳ ಕಣಜವೀಗ ಕ್ಯಾನ್ಸರ್‌ ಪೀಡತ


Team Udayavani, Jul 1, 2019, 3:00 AM IST

bhatta

ಮೈಸೂರು: ಭಾರತದ ಭತ್ತ ಹಾಗೂ ಧಾನ್ಯಗಳ ಕಣಜ ಎಂದು ಹೆಸರುವಾಸಿಯಾಗಿದ್ದ ಪಂಜಾಬ್‌ ಇಂದು ಕ್ಯಾನ್ಸರ್‌ ಕಣಜವಾಗಿ ಪರಿವರ್ತನೆಯಾಗಿದ್ದು, ಇದಕ್ಕೆ ಕೃಷಿ ವಿಜ್ಞಾನಿಗಳೇ ನೇರ ಕಾರಣ ಎಂದು ವಿಜ್ಞಾನ ಲೇಖಕ ನಾಗೇಶ್‌ ಹೆಗಡೆ ಹೇಳಿದರು.

ಅಭಿರುಚಿ ಪ್ರಕಾಶನ, ಚಿಂತನ ಚಿತ್ತಾರ ಪ್ರಕಾಶನ, ಪರಿವರ್ತನ ರಂಗ ಸಮಾಜದ ಸಹಯೋಗದಲ್ಲಿ ನಗರದ ಕಲಾಮಂದಿರ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಚಿನ್ನಸ್ವಾಮಿ ವಡ್ಡಗೆರೆ ಅವರ ಪುಸ್ತಕ ಬಿಡುಗಡೆ ಹಾಗೂ ಬೆಳಕಿನ ಬೇಸಾಯ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಸಾಯನಿಕ ತುಂಬಿ ಕಳುಹಿಸುತ್ತಾರೆ: ಸ್ವಾತಂತ್ರೊತ್ತರದಲ್ಲಿ ನಮ್ಮ ದೇಶದ ರೈತರು ಸ್ವತಂತ್ರವಾಗಿದ್ದರು. ತಮಗೆ ಬೇಕಾದ ಬೀಜ, ಗೊಬ್ಬರ, ಸಲಕರಣೆ ಹಾಗೂ ಇತರೆ ಸೌಲಭ್ಯಗಳ ಅನ್ವಯ ತಾವೇ ಉತ್ಪಾದಿಸಿಕೊಳ್ಳತ್ತಿದ್ದರು. ನಂತರ ಸರ್ಕಾರ ಮತ್ತು ಕೃಷಿ ವಿಜ್ಞಾನಿಗಳು ರೈತರ ದಾರಿ ತಪ್ಪಿಸಿದ್ದರು.

ಕೃಷಿ ರೋಗಕ್ಕೆ ರೈತರೇ ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಸರ್ಕಾರ ಒಂದೊಂದು ರೋಗಕ್ಕೆ ಒಬ್ಬೊಬ್ಬ ಅಧಿಕಾರಿಯನ್ನು ನೇಮಿಸಿದೆ. ಅವರು ಮೂಟೆಗಟ್ಟಲೆ ರಾಸಾಯನಿಕಗಳನ್ನು ತುಂಬಿ ಕಳುಹಿಸುತ್ತಾರೆ. ಹೀಗೆ ಸರ್ಕಾರ ಹಾಗೂ ಖಾಸಗಿ ಕಂಪನಿಗಳು ರೈತರನ್ನು ಕತ್ತಲೆಗೆ ದೂಡಿತ್ತಿವೆ ಎಂದು ಹೇಳಿದರು.

ಕಣ್ಣೀರು ತರಿಸುತ್ತೆ: ದೇಶದಲ್ಲಿ ಶೇ.98 ನೀರಾವರಿ ಮೇಲೆ ಬೇಸಾಯ ಮಾಡುತ್ತಿರುವ ಪಂಜಾಬಿನ ರೈತರ ಕಷ್ಟದ ಸ್ಥಿತಿ ಕಣ್ಣೀರು ತರಿಸುತ್ತದೆ. ಧಾನ್ಯದ ಕಣಜ ಈಗ ಕ್ಯಾನ್ಸರ್‌ ಕಣಜ ಆಗಿದೆ. ಕ್ಯಾನ್ಸರ್‌ ಚಿಕಿತ್ಸೆ ಪಡೆಯಲು ಕ್ಯಾನ್ಸರ್‌ ಟ್ರೈನ್‌ ಅನ್ನು ನಿಯೋಜಿಸಲಾಗಿದೆ. ಇನ್ನೂ ಪ್ರತಿಯೊಂದು ಮನೆಯಲ್ಲೂ ವ್ಯಾಜ್ಯಗಳಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಅಪರೂಪದ ತಳಿ ಸಂರಕ್ಷಣೆ: ಇತ್ತೀಚೆಗೆ ಸ್ಥಳೀಯ ತಳಿಗಳನ್ನು ನಿರ್ಲಕ್ಷ್ಯ ಮಾಡಲಾಗುತ್ತಿದ್ದು, ಅನ್ಯದೇಶ ತಳಿಗಳಿಗೆ ಮಾನ್ಯತೆ ನೀಡಲಾಗುತ್ತಿದೆ. ಇದರಿಂದ ಸ್ಥಳೀಯ ಪ್ರಮುಖ ತಳಿಗಳನ್ನು ಸ್ವಿಡ್ಜರ್‌ಲೆಂಡ್‌ನ‌ ಹಿಮಾ ಪ್ರದೇಶದ ತಿಜೋರಿಯಲ್ಲಿ ಸಂರಕ್ಷಣೆ ಮಾಡಲಾಗುತ್ತಿದೆ. ಇದನ್ನು ಯಾರು ಕಳ್ಳತನ ಮಾಡದ, ಅಲ್ಲಿಗೆ ಪ್ರವೇಶಿಸಲಾಗದ ಸ್ಥಳದಲ್ಲಿ ಕಂಪನಿಗಳು ಸಂರಕ್ಷಣೆ ಮಾಡಲಾಗುತ್ತಿದೆ.

ಮನುಕಲದ ಹಿತಕ್ಕಾಗಿ ಎಂದು ನಾವು ಭಾವಿಸಬೇಕಿಲ್ಲ. ಅಣ್ವಸ್ತ್ರ ಪ್ರಯೋಗ, ಗ್ರಹ ಸ್ಫೋಟದಂತಹ ಘಟನೆಗಳಿಂದ ನಾಶವಾದ ಬಳಿಕ ಇವುಗಳನ್ನು ಮಾರುಕಟ್ಟೆಗೆ ತರುವ ದುರುದ್ದೇಶವೂ ಅಡಗಿದೆ. ಇದಕ್ಕೆ ಬಹಳಷ್ಟು ದೇಶಗಳು ವಿರೋಧ ವ್ಯಕ್ತಪಡಿಸಿವೆ ಎಂದರು.

30 ಹತ್ತಿ ತಳಿಗಳ ನಾಶ: ಕುಲಾಂತರಿ ಬೀಜಗಳು ದೇಶಿ ಮತ್ತು ಸ್ಥಳೀಯ ಬೀಜಗಳಿಗೆ ಮಾರಕವಾಗಿದ್ದು, ಇದರಿಂದ ಅಪರೂಪದ ತಳಿಗಳು ಕಣ್ಮರೆಯಾಗುತ್ತಿವೆ. ಕುಲಾಂತರಿ ಹತ್ತಿಯಿಂದಾಗಿ ಅಪರೂಪದ 30 ಹತ್ತಿ ತಳಿಗಳು ವಿನಾಶವಾಗಿವೆ. ಜೊತೆಗೆ ತಳಿ ಸಂರಕ್ಷಣೆಗೆ ಸ್ಥಳೀಯ ವಿಧಾನಗಳನ್ನು ಮರೆಯುತ್ತಿದ್ದೇವೆ.

ಅಪರೂಪದ ತಳಿಗಳನ್ನು ಉಳಿಸಿಕೊಳ್ಳುವುದೇ ನಿಜವಾದ ಬೆಳಕು. ನಮ್ಮ ಸ್ಥಳೀಯ ತಳಿಗಳನ್ನು ವಿದೇಶಕ್ಕೆ ಕೊಂಡೊಯ್ಯತ್ತಿರುವುದೇ ಕತ್ತಲೆ ಎಂದು ತಿಳಿಸಿದರು. 5 ಮಂದಿ ಸಹಜ ಕೃಷಿಕರಿಂದ ಬಂಗಾರದ ಮನುಷ್ಯ ಮತ್ತು ಕೃಷಿ ಸಂಸ್ಕೃತಿ ಕಥನ ಪುಸ್ತಕ ಬಿಡುಗಡೆಗೊಳಿಸಿದರು.

ಜಲ ತಜ್ಞ ಮಲ್ಲಿಕಾರ್ಜುನ ಹೊಸಪಾಳ್ಯ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌, ಚಾಮರಾಜನಗರದ ರೈತದ ಸಂಘದ ಜಿಲ್ಲಾಧ್ಯಕ್ಷ ಹೊನ್ನಾರು ಪ್ರಕಾಶ್‌, ಪತ್ರಕರ್ತೆ ರಶ್ಮಿ ಕೌಜಲಗಿ, ಪ್ರಕಾಶಕರಾದ ಅಭಿರುಚಿ ಗಣೇಶ್‌, ನಿಂಗರಾಜು ಚಿತ್ತಣ್ಣನವರ್‌ ಮತ್ತಿತರರಿದ್ದರು.

ಕಾವೇರಿ ನೀರು ಬಳಕೆಗೆ ಕಟ್ಟುನಿಟ್ಟಿನ ನಿಯಮ ಅವಶ್ಯ: ಶರಾವತಿ ನೀರನ್ನು ಬೆಂಗಳೂರಿಗೆ ತರುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಆದರೆ, ತಮಿಳುನಾಡಿಗೆ 250 ಟಿಎಂಸಿ ನೀರು ಬಿಟ್ಟಿದೆ. ಅಲ್ಲಿ ಸಮರ್ಪಕವಾಗಿ ನೀರು ಬಳಕೆ ಮಾಡಿಲ್ಲ. ನೀರು ಸಮುದ್ರದ ಪಾಲಾಗಿದೆ.

ಬಾಗಲಕೋಟೆ ಜಿಲ್ಲೆ ಮತ್ತಿತರ ಪ್ರದೇಶದಲ್ಲಿ ನೀರಿಲ್ಲದೆ ಕಬ್ಬು ಬತ್ತಿ ಹೋಗಿದೆ. ಕಾವೇರಿ ನೀರನ್ನು ಸಮರ್ಪಕವಾಗಿ ಬಳಸಲು ಕಟ್ಟುನಿಟ್ಟಾದ ನಿಯಮ ಜಾರಿ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌ ಆಗ್ರಹಿಸಿದರು.

ಟಾಪ್ ನ್ಯೂಸ್

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ನಾನು ಹೇಳುತ್ತಿರುವುದು ಸುಳ್ಳಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ಕೋಲಾರದಲ್ಲಿ ಅಸಮಾಧಾನ ಇರೋದು ಸತ್ಯ: ಸಿಎಂ ಸಿದ್ದು

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

ನಮ್ಮ ಅಭ್ಯರ್ಥಿ ಪರ ವ್ಯಕ್ತವಾಗುತ್ತಿರುವ ಪ್ರವಾಹವನ್ನು ಡಿಕೆಶಿ ತಡೆಯಲಿ: ಎಚ್‌ಡಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.