ಕೊರೊನಾ ಸಂಕಷ್ಟ ಸಮಯದಲ್ಲಿ ನೆರವಿಗೆ ನಿಂತ ‘ರೈತಮಿತ್ರ’


Team Udayavani, Jan 1, 2022, 5:01 PM IST

ಕೊರೊನಾ ಸಂಕಷ್ಟ ಸಮಯದಲ್ಲಿ ನೆರವಿಗೆ ನಿಂತ ‘ರೈತಮಿತ್ರ’

ಮೈಸೂರು: ಮೈಸೂರಿನಲ್ಲಿ ರೈತರೇ ಸ್ಥಾಪಿಸಿದ ಕಂಪನಿಯ ಯಶೋಗಾಥೆ ಇದು. ಕೊರೊನಾ ಸಂಕಷ್ಟ ಸಮಯದಲ್ಲಿ ರೈತರ ನೆರವಿಗೆ ನಿಂತ ಕಂಪನಿ ಇದು. ಅದುವೇ ರೈತಮಿತ್ರ. ಈ ಕಂಪನಿಯ ಸಂಸ್ಥಾಪಕ ಅಧ್ಯಕ್ಷರು ನಾಡಿನ ರೈತ ಮುಖಂಡ, ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌.

ರೈತ ಮಿತ್ರ ಕಂಪನಿ ನೋಂದಣಿಯಾಗಿದ್ದು ಡಿಸೆಂಬರ್‌ 2014ರಲ್ಲಿ. ರೈತರು ಬೆಳೆದ ಉತ್ಪನ್ನವನ್ನು ಮಾರುಕಟ್ಟೆ ದರದಲ್ಲಿ ಖರೀದಿಸಿ ವಿವಿಧ ಕಂಪನಿಗಳ ಜೊತೆ ಒಡಂಬಡಿಕೆ ಮಾಡಿಕೊಂಡು ಆ ಕಂಪನಿಗಳಿಗೆ ಈ ಉತ್ಪನ್ನವನ್ನು ಮಾರಾಟ ಮಾಡುವುದು, ರೈತರ ನೆರವಿಗೆ ಧಾವಿಸುವುದು ರೈತ ಕಂಪನಿ ಉದ್ದೇಶ. ಈ ಕಂಪನಿಗೆ ನಬಾರ್ಡ್‌ ಪ್ರೋತ್ಸಾಹ ಧನ ನೀಡಿದೆ. ರೈತ ನಾಯಕ ಕುರುಬೂರು ಶಾಂತಕುಮಾರ್‌ ಅವರು ರೈತ ಮುಖಂಡ ಪಿ.ವಿ.ಗೋಪಿನಾಥ್‌ ಹಾಗೂ ಇತರ ರೈತರ ಜೊತೆಗೂಡಿ ಸ್ಥಾಪಿಸಿದ ಕಂಪನಿ ಇದು. ರೈತರೇ ಈ ಕಂಪನಿಯ ಮಾಲಿಕರು. ರೈತ ಮಿತ್ರ ಕಂಪನಿಯಲ್ಲಿ ಸುಮಾರು 1200 ಸದಸ್ಯರಿದ್ದಾರೆ. ಎಂಟು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಮೈಸೂರು, ಚಾಮರಾಜನಗರ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲ ಕೋಟೆ, ಮಂಡ್ಯ ಜಿಲ್ಲೆಗಳ ಸದಸ್ಯರ ಪರವಾಗಿ ನಿರ್ದೇಶಕರನ್ನು ಆಯ್ಕೆ ಮಾಡಲಾಗಿದೆ. ಕಂಪನಿಯು 20 ಲಕ್ಷ ರೂ.ಷೇರು ಬಂಡವಾಳದೊಂದಿಗೆ ಆರಂಭವಾಯಿತು.

ರೈತಮಿತ್ರ ರಸಗೊಬ್ಬರ ಉತ್ಪಾದಿಸುವ ಕಂಪನಿಗಳಿಂದಲೇ ನೇರವಾಗಿ ಸಗಟು ರಹದಾರಿಯನ್ನು ಪಡೆದು ವಿತರಣೆಗಾಗಿ ಶಾಖಾ ಕೇಂದ್ರಗಳನ್ನು ಆರಂಭಿಸಿತು. ಈ ಮೂಲಕ ರೈತರಿಗೆ ಸಕಾಲದಲ್ಲಿ ಖಾತರಿ ದರಕ್ಕಿಂತ ಕಡಿಮೆ ದರದಲ್ಲಿ ಪೂರೈಸಲಾಗುತ್ತಿದೆ. ಕಂಪನಿ ಕಡಿಮೆ ಲಾಭಾಂಶವನ್ನು ಪಡೆಯುತ್ತದೆ. ಇದರಿಂದ ರೈತರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ರೈತಮಿತ್ರಕಂಪನಿಯು ಸಿಎಫ್ಟಿಆರ್‌ಐ ಸಂಶೋಧನೆ ನಡೆಸಿದ ಹೆಚ್ಚು ಪ್ರೋಟಿನ್‌ ಇರುವಚಿಯಾ ಬೀಜವನ್ನು ಬೆಳೆಸಿ ಮಾರುಕಟ್ಟೆಗೆ ಪೂರೈಸಲು ಒಡಂಬಡಿಕೆ ಮಾಡಿಕೊಂಡಿದೆ. ಚಿಯಾ ಬೀಜವು ರೈತರ ಆದಾಯ ದ್ವಿಗುಣವಾಗಲು ಸಹಕಾರಿಯಾಗಿದೆ.

ರೈತರು ಬೆಳೆದ ಚಿಯಾ ಬೀಜವನ್ನು ಸಂಸ್ಕರಿಸಿ ಶುದ್ಧೀಕರಿಸಿ ಒಡಂಬಡಿಕೆ ಮಾಡಿಕೊಂಡ ಕಂಪನಿಗೆ ಪೂರೈಸಲು ಅನುಕೂಲವಾಗುವಂತೆ ಕಂಪನಿ ವತಿಯಿಂದ ಮೈಸೂರಿನ ಎಪಿ ಎಂಸಿ ಗೋದಾಮಿನಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ಶುದ್ಧೀಕರಣ ಘಟಕ ತೆರೆಯಲಾಗಿದೆ.

ರೈತರಿಗೆ ಗೊಬ್ಬರ ಬಳಕೆ, ಮಣ್ಣಿನ ಫ‌ಲವತ್ತತೆ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಬೆಳೆಗಳಿಗೆ ನೀರು ಬಳಸುವ ಹಾಗೂ ನೀರು ಪೋಲಾಗುವುದನ್ನುತಪ್ಪಿಸಲು ಅಧ್ಯಯನ ಪ್ರವಾಸವನ್ನು ರೈತರುಮಾಡಿದ್ದಾರೆ. ಸಾವಯವ ಕೃಷಿ ಕುರಿತು ಅಧ್ಯಯನ ಪ್ರವಾಸ ನಡೆಸಿದೆ. ರೈತರಿಗೆ ತೂಕದಲ್ಲಿ ಆಗುತ್ತಿದ್ದ ಮೋಸವನ್ನು ತಪ್ಪಿಸಲಾಗಿದೆ.

ರೈತ ಮಿತ್ರ ಕಂಪನಿ ರೈತರು ಬೆಳೆದ ಹಣ್ಣು, ತರಕಾರಿಗಳನ್ನು ನೇರವಾಗಿ ಖರೀದಿಸುತ್ತದೆ. ಇದರಿಂದ ಮಧ್ಯವರ್ತಿಗಳ ಪಾಲಾಗುತ್ತಿದ್ದ ಕಮೀಷನ್‌ ತಡೆಯಲಾಗಿದೆ. ನಂತರ ಕಂಪನಿಗಳಿಗೆ ಹಣ್ಣು, ತರಕಾರಿಗಳನ್ನು ಮಾರಾಟ ಮಾಡಲಾಗುತ್ತಿದೆ. ರೈತಮಿತ್ರ ಕಂಪನಿಯು ಸದಸ್ಯರಿಗೆ ಲಾಭಾಂಶವನ್ನೂ ಹಂಚಿದೆ. ಆದಾಯ ತೆರಿಗೆಯನ್ನೂ ಪಾವತಿಸಿದೆ.

ಕೊರೊನಾ ವೇಳೆ 2,500 ಟನ್‌ ತರಕಾರಿ ಖರೀದಿ :

ತರಕಾರಿಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಲಾಗಿದೆ. ಕೊರೊನಾ ಸಂಕಷ್ಟ ಕಾಲದಲ್ಲಿ ರೈತರು ಬೆಳೆದ 2,500 ಟನ್‌ ತರಕಾರಿಗಳನ್ನು ಮಾರುಕಟ್ಟೆ ದರದಲ್ಲಿಖರೀದಿಸಿದೆ. ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ 30ಟನ್‌ ಸಾಮರ್ಥ್ಯದ ರಾಸಾಯನಿಕ ಮುಕ್ತ ಬಾಳೆಹಣ್ಣು ಮತ್ತು ಮಾವಿನಹಣ್ಣು ಮಾಗಿಸುವ ಘಟಕವನ್ನು ತೋಟಗಾರಿಕೆ ಇಲಾಖೆಯ ಪ್ರೋತ್ಸಾಹ ಧನದೊಂದಿಗೆ ಪ್ರಾರಂಭಿಸಲಾಗಿದೆ ಎಂದು ರೈತಮಿತ್ರ ಸಂಸ್ಥಾಪಕ ಅಧ್ಯಕ್ಷ, ರೈತ ನಾಯಕ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ರೈತರಿಗೆ ಹೋರಾಟ ಒಂದೇ ಮುಖ್ಯವಲ್ಲ. ಹೋರಾಟದ ಜೊತೆಗೇ ರಚನಾತ್ಮಕವಾಗಿಯೂ ರೈತರ ನೆರವಿಗೆ ಧಾವಿಸಬೇಕು ಎಂಬಉದ್ದೇಶದೊಂದಿಗೆ ರೈತಮಿತ್ರ ಕಂಪನಿ ಸ್ಥಾಪಿಸಲಾಯಿತು. ಕಂಪನಿ ಸತತ ಐದು ವರ್ಷ ಲಾಭಮಾಡಿದೆ. ಕೊರೊನಾ ಬಂದ ನಂತರ ನಷ್ಟಉಂಟಾಗಿದೆ. ಕೇರಳದಲ್ಲಿ ನೆರೆ ಹಾವಳಿ ಬಂದಾಗಅಲ್ಲಿನ ಸರ್ಕಾರದ ಪರಿಹಾರ ನಿಧಿಗೆ 5 ಲಕ್ಷ ರೂಪಾಯಿ ದೇಣಿಗೆ ನೀಡಿದೆವು. ಮೈಸೂರಿನ ಎಪಿಎಂಸಿ ಆವರಣದಲ್ಲಿ ನಿವೇಶನ ಖರೀದಿಸಿ 1 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದ್ದೇವೆ. ಕುರುಬೂರು ಶಾಂತಕುಮಾರ್‌, ಸಂಸ್ಥಾಪಕ ಅಧ್ಯಕ್ಷರು, ರೈತಮಿತ್ರ ಕಂಪನಿ

ಕೂಡ್ಲಿ ಗುರುರಾಜ

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.