ಮೈಸೂರು ಡಿ.ಸಿ. ರೋಹಿಣಿ ವಿರುದ್ಧ ಶಾಸಕರ ಆಕ್ರೋಶ
Team Udayavani, Nov 28, 2020, 5:45 AM IST
ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಹುಣಸೂರು ಶಾಸಕ ಎಚ್. ಪಿ. ಮಂಜುನಾಥ್ ನಡುವಿನ ಜಟಾಪಟಿ ತಾರಕಕ್ಕೇರಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು, ರೋಹಿಣಿ ಸಿಂಧೂರಿ ಅವರು ಕಾನೂನಿನ ಚೌಕಟ್ಟು ಮೀರಿ, ಕೆಡಿಪಿ ಸಭೆಯಲ್ಲಿ ನಡೆದ ಮಾತುಕತೆಗೆ ವೈಯಕ್ತಿಕವಾಗಿ ಪತ್ರ ಬರೆದು ಉತ್ತರಿಸುವ ದರ್ಪ ತೋರಿದ್ದು, ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಡಿಪಿ ಸಭೆಯಲ್ಲಿ ಶಾಸಕರು ಹಾಗೂ ಜನಪ್ರತಿನಿಧಿಗಳು ಪ್ರಶ್ನೆ ಮಾಡೋದು ಸಹಜ. ಅದಕ್ಕೆ ಮುಂದಿನ ಸಭೆಯಲ್ಲಿ ಅಧಿಕಾರಿಗಳು ಉತ್ತರಿಸುವುದು ಶಿಷ್ಟಾಚಾರ. ಮಂಗಳವಾರ ನಡೆದ ಸಭೆಯಲ್ಲಿ ನಾನು ಪ್ರಶ್ನೆ ಮಾಡಿ, ಅವರ ಕಾರ್ಯವೈಖರಿಯನ್ನು ಖಂಡಿಸಿದ್ದೆ. ಆದರೆ, ಅದನ್ನು ಜಿಲ್ಲಾಧಿಕಾರಿಗಳು ವೈಯಕ್ತಿಕವಾಗಿ ತೆಗೆದುಕೊಂಡು, ಮರುದಿನವೇ ಪತ್ರ ಬರೆದಿದ್ದಾರೆ. ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದು ಕಿಡಿಕಾರಿದರು.
ಜಿಲ್ಲಾಧಿಕಾರಿಗಳ ಈ ಕ್ರಮವನ್ನು ಪರಿಷತ್ ಸಭೆಯಲ್ಲಿ ಪ್ರಸ್ತಾವಿಸುತ್ತೇನೆ. ಇನ್ನು ಎರಡು ದಿನದಲ್ಲಿ ಅವರು ಕ್ಷಮೆ ಕೇಳಬೇಕು. ಅಥವಾ ಆ ಪತ್ರ ಹೇಗೆ ಹೊರಗೆ ಬಂತು ಎಂಬುದನ್ನು ಬಹಿರಂಗಪಡಿಸಬೇಕು. ಡಿ. 7ರಂದು ನಾನು ಹಕ್ಕು ಚ್ಯುತಿ ಮಂಡಿಸುತ್ತೇನೆ. ವಿಧಾನ ಪರಿಷತ್ಗೆ ಬಂದು ಉತ್ತರಿಸಲಿ ಎಂದು ಪರಿಷತ್ ಸದಸ್ಯ ರಘು ಆಚಾರ್ ಹೇಳಿದ್ದಾರೆ