ರಾಜೀನಾಮೆ ನೀಡಲು ಯಡಿಯೂರಪ್ಪಗೆ ಆರ್ ಎಸ್ಎಸ್ ಮನವೊಲಿಸಿದೆ: ವಿಶ್ವನಾಥ್


Team Udayavani, Jun 6, 2021, 1:25 PM IST

ರಾಜೀನಾಮೆ ನೀಡಲು ಯಡಿಯೂರಪ್ಪಗೆ ಆರ್ ಎಸ್ಎಸ್ ಮನವೊಲಿಸಿದೆ: ವಿಶ್ವನಾಥ್

ಮೈಸೂರು: ದೆಹಲಿ ಹೇಳಿದಂತೆ ಕೇಳುವುದು ಮೊದಲಿಂದಲೂ ಇರುವ ಪರಿಪಾಠ. ರಾಜ್ಯದಲ್ಲಿ ಪರ್ಯಾಯ ನಾಯಕರನ್ನು ಮಾಡುತ್ತಾರೆ ಎಂದಿರುವುದು ಸ್ವಾಗತಾರ್ಹ. ನನಗೆ ಪರ್ಯಾಯ ನಾಯಕರಿದ್ದಾರೆ ಎಂದು ಹೇಳಿರುವುದು ಯಡಿಯೂರಪ್ಪರ ದೊಡ್ಡ ಮಾತು ಎಂದು ಎಂಎಲ್ ಸಿ ವಿಶ್ವನಾಥ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನ, ರಾಜಕೀಯ ನಾಯಕರು ಬಹಳ ವಿಶ್ವಾಸ ಇಟ್ಟುಕೊಂಡು ಬಂದಿದ್ದಾರೆ. ಯಡಿಯೂರಪ್ಪ ಈಗಿನ ಪರಿಸ್ಥಿತಿಯಲ್ಲಿ ರಾಜ್ಯದ ಹಿತಕ್ಕಾಗಿ ದೆಹಲಿ ನಾಯಕರ ಮಾತು ಕೇಳಿ ಕೆಳಗಿಳಿಯುತ್ತೇನೆ ಎಂದಿರುವುದನ್ನು ನಾನು ಸ್ವಾಗತ ಮಾಡುವೆ ಎಂದಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ವಿಚಾರ ಬಹಳ ದಿನದಿಂದ ನಡೆಯುತ್ತಿತ್ತು. ನಾಡಿನ ಹಿತದಿಂದ ಯಡಿಯೂರಪ್ಪ ರಾಜೀನಾಮೆ ಕೊಡುತ್ತೇನೆ ಎಂದಿರುವುದು ನಾಡಿನ ಜನ ಸ್ವಾಗತ ಮಾಡುತ್ತದೆ. ಆರ್ ಎಸ್ಎಸ್ ಕೂಡ ಅವರ ಮನ ಒಲಿಸಿದೆ ಎಂದರು.

ಸೈನಿಕ ದೆಹಲಿಗೆ ಹೋಗಿ ಬಂದರೂ ಅಂತ ಅವರು ರಾಜೀನಾಮೆ ಕೊಡುತ್ತಿಲ್ಲ. ಯಾರೋ ಮಾತನಾಡಿದರೂ ಎಂದು ಅವರು ರಾಜೀನಾಮೆ ಕೊಡುತ್ತಿಲ್ಲ. ಅವರಿಗೆ ವಯಸ್ಸಿನ ಕಾರಣವಿದೆ. ಬಿಜೆಪಿಯಲ್ಲಿ ವಯಸ್ಸಿನ ಲಕ್ಷ್ಮಣ ರೇಖೆ ಇದೆ. ಆದರೆ ಯಡಿಯೂರಪ್ಪ ಅವರಿಗೆ ಒಂದು ವಿನಾಯತಿ ಕೊಟ್ಟಿದ್ದರು. ಅವರ ವಯಸ್ಸು, ಆರೋಗ್ಯ ನಾಡಿನ ಅಭಿವೃದ್ಧಿ, ಆಡಳಿತದ ಮೇಲಿನ ಪರಿಣಾಮ ನೋಡಿ ಆರ್ ಎಸ್ ಎಸ್, ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ನನಗೆ ಯಡಿಯೂರಪ್ಪ ಮೇಲೆ ಅನುಕಂಪವಿದೆ. ಅವರ ವಯಸ್ಸಿನ ಕಾರಣ ಮಾತನಾಡುತ್ತಿದ್ದೇನೆ. ಅವರು ಅದಕ್ಷರು, ಅಪ್ರಾಮಾಣಿಕರು ಎಂದಲ್ಲ. ರಾಜೀನಾಮೆ ಕೊಟ್ಟರು ತೆಗೆದುಕೊಂಡರು ಎನ್ನುವುದಲ್ಲ, ಪಕ್ಷದ ಹಿತದೃಷ್ಟಿ ಮುಖ್ಯ ಅಷ್ಟೇ ಎಂದು ವಿಶ್ವನಾಥ್ ಹೇಳಿದರು.

ಇದನ್ನೂ ಓದಿ:ರಾತ್ರೋರಾತ್ರಿ ಬೆಂಗಳೂರಿಗೆ ತೆರಳಿದ ಯತ್ನಾಳ್: ಗಂಭೀರ ಸ್ವರೂಪ ಪಡೆದ ಸಿಎಂ ಬದಲಾವಣೆ ಚರ್ಚೆ

ಕ್ಯಾಪ್ಟನ್ ಬದಲಾಗುತ್ತಿದ್ದಾರೆ ಆಟಗಾರರು ಬದಲಾಗಬೇಕು. ಹೊಸ ಕ್ಯಾಪ್ಟನ್ ತನಗೆ ಬೇಕಾದ ಆಟಗಾರರನ್ನು ಅವರೇ ಆಯ್ಕೆ ಮಾಡಿಕೊಳ್ಳುತ್ತಾರೆ. ದೊಡ್ಡ ಬುದ್ದಿವಂತಿಕೆ, ಎಲ್ಲರನ್ನೂ ಪ್ರೀತಿಸುವ, ಸಾಮಾನ್ಯ ಜ್ಞಾನ ಇರುವ, ಅಧಿಕಾರಿಗಳಿಗೆ ಅಂಕುಶ ಹಾಕುವವರು, ರಾಜ್ಯದ ಅಭಿವೃದ್ಧಿ ಬಗ್ಗೆ ಗಮನಹರಿಸುವ ನಾಯಕ‌ ಬೇಕು. ಸದ್ಯ ಪರಿಸ್ಥಿತಿ ಕ್ಲಿಷ್ಟಕರವಾಗಿದೆ. ಇದೆಲ್ಲವನ್ನೂ ನಿಭಾಯಿಸುವ ನಾಯಕ ಬೇಕು ಎಂದರು.

ಪರ್ಯಾಯ ನಾಯಕರು ಇದ್ದಾರೆ ಎನ್ನುವುದು ಬಹಳ ದೊಡ್ಡ ಮಾತು. ಈಗ ಎಲ್ಲರನ್ನೂ ಜೊತೆಗೆ ಸೇರಿಸಿಕೊಂಡು ಹೋಗುವ ನಾಯಕ ಬೇಕು. ಜಾತಿ ರಾಜಕಾರಣ ಇದ್ದೇ ಇದೆ. ಸಿದ್ದರಾಮಯ್ಯ ಕುರುಬ ಸಮುದಾಯದಿಂದ ಮೇಲೆ ಬಂದಿದ್ದಾರೆ. ದೇವೇಗೌಡರು ಒಕ್ಕಲಿಗ ಸಮುದಾಯದಿಂದ ಮೇಲೆ ಬಂದಂತೆ ಯಡಿಯೂರಪ್ಪ ಬಲಿಷ್ಠ ಸಮುದಾಯದಿಂದ ಮೇಲೆ ಬಂದಿದ್ದಾರೆ. ಈ ಬಾರಿ ಮುಖ್ಯಮಂತ್ರಿ ಮಾಡುವಾಗ ವೀರಶೈವ ಸಮುದಾಯಕ್ಕೆ ಮೊದಲ ಆದ್ಯತೆ ಕೊಡಬೇಕು‌. ವೀರಶೈವರಲ್ಲೂ ಪಂಚಮಸಾಲಿ ಲಿಂಗಾಯತರನ್ನು ಪರಿಗಣಿಸುವುದು ಒಳ್ಳೆಯದು ಎಂದು ವಿಶ್ವನಾಥ್ ಹೇಳಿದರು.

ಇದನ್ನೂ ಓದಿ: ಯಾವಾಗ ಕೇಳುತ್ತಾರೋ ಆಗ ರಾಜೀನಾಮೆ ಕೊಟ್ಟು ಹೋಗುತ್ತೇನೆ: ನಾಯಕತ್ವ ಬದಲಾವಣೆ ವಿಚಾರಕ್ಕೆ ಸಿಎಂ

ರಾಜ್ಯದಲ್ಲಿ ಇಡೀ ರಾಜ್ಯದ ಜನರನ್ನು ಮ್ಯಾನೇಜ್ ಮಾಡುವ ಸಾಮಾನ್ಯ ಜ್ಞಾನ ಇರುವವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು. ಅಂತಹ ನಾಯಕರಲ್ಲಿ ಮುರುಗೇಶ್ ನಿರಾಣಿ ಇದ್ದಾರೆ. ನೇರ ಮಾತುಗಳನ್ನು ಆಡುವ ಬಸವನಗೌಡ ಪಾಟೀಲ್ ಯತ್ನಾಳ್ ಇದ್ದಾರೆ. ಅಂತಹವರಿಗೆ ಅವಕಾಶ ಕೊಡಬೇಕು ಎಂದು ವಿಶ್ವನಾಥ್ ಹೇಳಿದರು.

ಅಧಿಕಾರಿಗಳ ತಪ್ಪಿಲ್ಲ: ಮೈಸೂರು ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ಮಾತನಾಡಿ, ಈ ಪರಿಸ್ಥಿತಿಗೆ ಅವರಿಬ್ಬರು ಕಾರಣರಲ್ಲ. ನಾವು ರಾಜಕಾರಣಿಗಳೇ ಕಾರಣ. ಇಬ್ಬರು ಕಠಿಣ ಅಧಿಕಾರಿಗಳು, ದಕ್ಷ ಅಧಿಕಾರಿಗಳು. ಸರ್ಕಾರ ಮೃದವಾಗಿ ಸಮಸ್ಯೆ ಬಗೆಹರಿಸಿದೆ. ಯಡಿಯೂರಪ್ಪ ಅವರ ನಿರ್ಧಾರ ಸೂಕ್ತ ಸಮಯದ್ದಾಗಿದೆ ಎಂದರು.

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.