ಮೋದಿಯಿಂದ ಗ್ರಾಮೀಣ ಪ್ರದೇಶದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ: ಪ್ರತಾಪ್ ಸಿಂಹ


Team Udayavani, Oct 8, 2021, 7:37 PM IST

ASCASC

ಪಿರಿಯಾಪಟ್ಟಣ: ಸಂಸದರ ಕೆಲಸವೇನಿದ್ದರೂ ನಗರ ಪ್ರದೇಶದ ಹೈವೇ- ರೈಲ್ವೆಗೆ ಸೀಮೀತ ಎಂದು ಭಾವಿಸಿದ್ದ ನಮಗೆ ಗ್ರಾಮೀಣ ಪ್ರದೇಶದ ಅಭಿವೃದ್ದಿಗೂ ನೀವು ತೊಡಗಿಸಿಕೊಳ್ಳಬೇಕು ಎಂದು ಗ್ರಾಮೀಣ ಪ್ರದೇಶಕ್ಕೆ ಅನುದಾನ ಮೀಸಲಿಟ್ಟ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬೇಕು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ತಾಲೂಕಿನ ಬೆಟ್ಟದಪುರ, ಭುವನಹಳ್ಳಿ, ಬೆಕ್ಕರೆ, ನೇರಲೆಕುಪ್ಪೆ, ಆವರ್ತಿ ಗ್ರಾಮಗಳಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿ ಈಚೂರು ಗ್ರಾಮದಲ್ಲಿ ಮಾತನಾಡಿದರು.

ಈ ಹಿಂದೆ ಮೈಸೂರು ಭಾಗದಲ್ಲಿ ಸಂಸದರಾಗಿದ್ದ ಮಹಾರಾಜ್ರು, ಹೆಚ್.ವಿಶ್ವನಾಥ್, ಸಿ.ಹೆಚ್.ವಿಜಯಶಂಕರ್ ರವರು ಗ್ರಾಮೀಣ ಪ್ರದೇಶಗಳಿಗೆ ಕೇವಲ ಸಮುದಾಯ ಭವನ, ದೇವಾಲಯದ ಅಭಿವೃದ್ದಿಗಷ್ಟೇ ಸಂಸದರ ಕೆಲಸ ಎನ್ನುವಂತೆ ಜನರಲ್ಲಿ ಕಲ್ಪನೆ ಮೂಡಿಸಿದ್ದರು. ಆದರೆ ನಾನು ಸಂಸದನಾಗಿ ಆಯ್ಕೆಯಾದ ನಂತರ ಗ್ರಾಮೀಣ ಪ್ರದೇಶದ ಜನರು ಮೂಲ ಸೌಕರ್ಯಕ್ಕೆ ಮನವಿ ಮಾಡುತ್ತಿರುವ ಬಗ್ಗೆ ಸಂಸದರೆಲ್ಲಾ ಸೇರಿ ಮೋದಿಯವರಿಗೆ ಮನವರಿಕೆ ಮಾಡಿದರ  ಫಲವಾಗಿ ಇಂದು ಗ್ರಾ.ಪಂ, ಜಿ.ಪಂ.ತಾ.ಪಂ.ಗಳಿಗೆ ಅನುದಾನಗಳು ನೇರವಾಗಿ ಗ್ರಾ.ಪಂ.ಗೆ ಬರುವಂತೆ ಮಾಡಿದರು.

ಇದನ್ನೂ ಓದಿ:ನಾವು ತಪ್ಪು ಮಾಡಿಲ್ಲ, ಐಟಿ ದಾಳಿಯಿಂದ ನಮಗೆ ಯಾವುದೇ ತೊಂದರೆ ಇಲ್ಲ: ಬಿಎಸ್ ವೈ

ಮೈಸೂರಿನಲ್ಲಿ ವಿಮಾನ ನಿಲ್ಧಾಣದ ಅಭಿವೃದ್ದಿಗೆ ಭೂಮಿ ನೀಡಲು ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದು,  ರೈಲ್ವೆ ಅಭಿವೃದ್ದಿಗೂ 1954 ಕೋಟಿ ಮೀಸಲಿರಿಸಲಾಗಿ ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಬೇಕಾಗಿದೆ. ಕೊರೊನಾ ಮತ್ತಿತರ ವಿಚಾರಗಳಿಂದ ವಿಳಂಭವಾಗಿದ್ದ ಅನೇಕ  ಯೋಜನೆಗಳು ಶೀಘ್ರದಲ್ಲಿ ಪ್ರಾರಂಭವಾಗುವುದರ ಜೊತೆಗೆ 9500 ಕೋಟಿಯ 4 ಲೈನ್ ಹೈವೆ ಕಾಮಗಾರಿ ಕೂಡ ನಡೆಯಲಿದ್ದು ಭವಿಷ್ಯದಲ್ಲಿ ಕೈಗಾರಿಕೋದ್ಯಮ ಅಭಿವೃದ್ದಿ ಹೊಂದಿ ಸಾಕಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಆದ್ದರಿಂದ ತಾಲೂಕಿನಲ್ಲಿ ಜಾತಿಜಾತಿಗಳನ್ನು ಎತ್ತಿಕಟ್ಟಿ ರಾಜಕಾರಣ ಮಾಡುತ್ತಿದ್ದವರಿಗೆ ಅಭಿವೃದ್ದಿಯ ಮೂಲಕ ಉತ್ತರ ನೀಡುತ್ತಿದ್ದು ಮುಂದೆ ಅಭಿವೃದ್ದಿ ರಾಜಕಾರಣಕ್ಕೆ ಜನರು ಸಹಕಾರ ನೀಡಬೇಕು  ಎಂದರು.

ಶಾಸಕ ಕೆ.ಮಹದೇವ್ ಮಾತನಾಡಿ ಈಚೂರು ಗ್ರಾಮಕ್ಕೆ 1.50 ಕೋಟಿಯಷ್ಟು ಅನುದಾನ ನೀಡಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ. 3 ಹೆಚ್ಚುವರಿ ಶಾಲಾ ಕೊಠಡಿಗಳನ್ನು ಸಂಸದರು ಮತ್ತು ನಾನು ಸೇರಿ ಸರ್ಕಾರದಿಂದ ಮಂಜೂರು ಮಾಡಿಸಿಕೊಡುತ್ತೇವೆ. 2ಬಾರಿ ಸೋಲಿಸಿ 3ನೇ ಬಾರಿ ಗೆಲಿಸಿದ್ದೀರಾ 75 ವರ್ಷಗಳಲ್ಲಿ ಅಭಿವೃದ್ದಿಯ ಬಗ್ಗೆ ಪ್ರಶ್ನೆ ಮಾಡದೆ ಆಸಕ್ತಿತೋರದ ನೀವು ಈಗ ಏಕಾಏಕಿ ನಮ್ಮಮೇಲೆ ಒತ್ತಡ ಹಾಕಿದರೆ ಒಟ್ಟಿಗೆ ಅಭಿವೃದ್ದಿ ಮಾಡುವುದಾದರೂ ಹೇಗೆ? ಕೊರೊನಾ, ಪ್ರವಾಹ ಹೀಗೆ ಪ್ರಕೃತಿ ವಿಕೋಪಗಳಿಂದ 2 ವರ್ಷ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಿದ್ದರೂ ಸಂಸದರ ಮತ್ತು ಉಸ್ತುವಾರಿ ಸಚಿವರ ಸಹಕಾರದಿಂದ ಅನೇಕ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತಿದೆ. ನರೇಗಾ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಇಒ ಕೃಷ್ಣಕುಮಾರ್, ಪಿಡಿಒ ದೇವರಾಜೇಗೌಡ, ಕಾರ್ಯದರ್ಶಿ ಬಸವರಾಜು,ಗ್ರಾ.ಪಂ.ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ರಮೇಶ್, ಸುರೇಶ್, ಮಾನಸ, ಶ್ರೀನಿವಾಸ್, ಮುಖಂಡರಾದ ಆರ್.ಟಿ.ಸತೀಶ್, ಅಣ್ಣಯ್ಯಶೆಟ್ಟಿ, ಎಂ.ಎ.ರಾಜೇಗೌಡ, ಶಿವರಾಮೇಗೌಡ, ಬೆಮ್ಮತ್ತಿ ಚಂದ್ರು, ಪ್ರವೀಣ್, ಪ್ರಸಾದ್, ಪಟೇಲ್ಶಂಕರ್, ಕೆಂಪೇಗೌಡ, ರವಿ ಸೇರಿದಂತೆ ಮತ್ತಿತರರು ಹಾಜರಿದ್ದರು.

 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.