ಗಾನಯಾನಕ್ಕೆ ವಿದಾಯ ಹೇಳಿದ ಎಸ್‌.ಜಾನಕಿ


Team Udayavani, Oct 29, 2017, 6:35 AM IST

Ban29101710Medn-new.jpg

ಮೈಸೂರು: ಎಳವೆಯಲ್ಲೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಾಯನ ಆರಂಭಿಸಿದ್ದ ದಕ್ಷಿಣ ಭಾರತದ ಗಾನಕೋಗಿಲೆ ಎಸ್‌.ಜಾನಕಿ ಅವರು ಶನಿವಾರ ಮೈಸೂರಿನಲ್ಲೇ ತಮ್ಮ ಗಾನಯಾನಕ್ಕೆ ವಿದಾಯ ಹೇಳಿದರು.

ಎಸ್‌.ಜಾನಕಿ ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಬಯಲುರಂಗ
ಮಂದಿರದಲ್ಲಿ ಆಯೋಜಿಸಿದ್ದ ಜಾನಕಿ ಅವರ ಗಾನಯಾನದ ಕೊನೆಯ ಸಂಗೀತ ಸಂಜೆ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಸಂಗೀತ ಪ್ರೇಮಿಗಳು ಸಾಕ್ಷಿಯಾದರು.

ಕಾರ್ಯಕ್ರಮದಲ್ಲಿ ನೀಡಲಾದ ಸನ್ಮಾನ ಸ್ವೀಕರಿಸಿ, ಮನತುಂಬಿ ಮಾತನಾಡಿದ ಜಾನಕಿ ಅವರು, “ಕೇವಲ ಹತ್ತು ವರ್ಷದ ಬಾಲಕಿಯಾಗಿದ್ದಾಗ ಮೈಸೂರಿನಲ್ಲಿಯೇ ಗಾಯನ ಆರಂಭಿಸಿದ್ದ ನೆನಪು. ಇಲ್ಲಿಯವರೆಗೆ ಅನೇಕ ವೈವಿಧ್ಯಮಯ ಹಾಡುಗಳನ್ನು ಹಾಡಿದ್ದು,ನನ್ನ ಈ ಗಾಯನ ಪಯಣ ಸಂತೃಪ್ತಿ ಕೊಟ್ಟಿದೆ.ಇನ್ನು ಸಾಕು. ಇನ್ನು ಮುಂದೆ ನಾನು ಹಾಡುವುದಿಲ್ಲ. ಇದೇ ನನ್ನ ಕಡೇ ಸಂಗೀತ

ಕಾರ್ಯಕ್ರಮ’ ಎಂದು ಭಾರವಾದ ಹೃದಯದಿಂದ ವಿದಾಯ ಘೋಷಿಸಿದರು. ಮೈಸೂರಿನ ಅನೇಕ ಸಾಹಿತಿಗಳು ಬರೆದ ಗೀತೆಗಳನ್ನು ಹಾಡಿರುವೆ. ಇಲ್ಲಿಯ ಸಂಗೀತ ನಿರ್ದೇಶಕರೊಂದಿಗೆ ಕೆಲಸ ಮಾಡಿರುವೆ. ಈ ಕ್ಷಣಗಳೆಲ್ಲ ನನ್ನ ಪಾಲಿಗೆ ಅವಿಸ್ಮರಣೀಯ. ಮೈಸೂರಿನಲ್ಲೇ ಸಂಗೀತ ಕಾರ್ಯಕ್ರಮ ನೀಡಬೇಕೆಂಬ ಕಳೆದ ಒಂದು ದಶಕಗಳ ಆಸೆ ಇದೀಗ ಈಡೇರಿದೆ ಎಂದು ಸಂತಸಪಟ್ಟರು.

14 ವರ್ಷದವಳಿದ್ದಾಗ ಮೈಸೂರಿನಲ್ಲಿ ಹಾಡು ಹೇಳಿದ್ದೆ. ಖ್ಯಾತ ಸಂಗೀತ ನಿರ್ದೇಶಕ ಜಿ.ಕೆ. ವೆಂಕಟೇಶ್‌ ಅವರ ಸಾರಥ್ಯದಲ್ಲಿ 1952ರಲ್ಲಿ ನಡೆದ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಪಿ.ಬಿ.ಶ್ರೀನಿವಾಸ್‌ ಅವರೊಂದಿಗೆ ಸೇರಿ ಹಾಡು ಹೇಳಿದ್ದೆ. ಆಗ ಜಿ.ಕೆ. ವೆಂಕಟೇಶ್‌ ಯಾರು ಎನ್ನುವುದು ಕೂಡ ನನಗೆ ಗೊತ್ತಿರಲಿಲ್ಲ.

ಮೈಸೂರಿನಲ್ಲಿ ಆ ಕಾರ್ಯಕ್ರಮ ನಡೆದ ಸ್ಥಳ ಕೂಡ ನೆನಪಿಗೆ ಬರುತ್ತಿಲ್ಲ. ನಾಲ್ಕು ರಸ್ತೆ ಕೂಡುವ ವೃತ್ತವೊಂದರಲ್ಲಿ ಅವತ್ತು ಸಂಗೀತ ಕಾರ್ಯಕ್ರಮ ನಡೆದಿತ್ತು. ಅಲ್ಲಿಂದ ಆರಂಭವಾದ ಗಾನಯಾನದಲ್ಲಿ ಈ 60 ವರ್ಷಗಳ ಸುದೀರ್ಘ‌ ಕಾಲದಲ್ಲಿ ವಿವಿಧ ಬಗೆಯ ಹಾಡುಗಳನ್ನು ಹಾಡಿರುವೆ. ಈ ಸುದೀರ್ಘ‌ ಗಾನಯಾನದಿಂದ ನನಗೆ ದಣಿವಾಗಿದೆ. ಇನ್ನು ಸಾಕು ಎಂದಾಗ ಇಡೀ ಸಭಾಂಗಣ ಮೌನ ತಳೆದಿತ್ತು.

ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟ ನಂತರ “ಇಂದು ಎನಗೆ ಗೋವಿಂದಾ ನಿನ್ನಯ ಪಾದಾರವಿಂದವ ತೋರೋ ಮುಕುಂದನೇ’, “ಆಸೆಯ ಭಾವ… ಬದುಕಿನ ಜೀವ’… ಹೀಗೆ ಭಕ್ತಿಗೀತೆ, ಪ್ರೇಮಗೀತೆಗಳು, ಶಾಸಿOಉàಯಗೀತೆಗಳನ್ನು ಹಾಡಿ ತಮ್ಮ ಅಭಿಮಾನಿಗಳಿಗೆ ತಮ್ಮ ಕಂಠಸಿರಿಯನ್ನು ಉಣಬಡಿಸಿದರು. ಹಿರಿಯ ಕಲಾವಿದರಾದ ರಾಜೇಶ್‌, ಶಿವರಾಂ,ಜಯಂತಿ, ಶೈಲಶ್ರೀ, ಭಾರತಿ ವಿಷ್ಣುವರ್ಧನ್‌, ಪ್ರತಿಮಾ ದೇವಿ, ಹೇಮಾಚೌಧರಿ, ಹರಿಣಿ,ಸಂಗೀತ ನಿರ್ದೇಶಕ ರಾಜನ್‌, ನಟರಾದ ಅನಿರುದ್ಧ ಶರಣ್‌, ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್‌, ಸಂಸದ ಸಿ.ಎಸ್‌ .ಪುಟ್ಟರಾಜು, ಶಾಸಕ ಜಿ.ಟಿ.ದೇವೇಗೌಡ, ವಿಧಾನಪರಿಷತ್‌ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.