ತಿ.ನರಸೀಪುರ ಎಪಿಎಂಸಿ ಜೆಡಿಎಸ್‌ ಪಾಲು


Team Udayavani, Feb 22, 2017, 12:20 PM IST

mys1.jpg

ತಿ.ನರಸೀಪುರ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಭಾರಿ ಮುಖಭಂಗವಾಗಿದೆ. ಮಂಗಳವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಜೆಡಿಎಸ್‌ ಬೆಂಬಲಿತ ಬಸವನಹಳ್ಳಿ ವೆಂಕಟೇಶ, ಉಪಾಧ್ಯಕ್ಷರಾಗಿ ಮಾಜಿ ಛೇರನ್‌ ಮಹದೇವಯ್ಯ ಆಯ್ಕೆಗೊಂಡರು.

ಪಟ್ಟಣದ ನಂಜನಗೂಡು ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ)ಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆಯಲ್ಲಿ ಜೆಡಿಎಸ್‌ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಯಿತು. ಅಧ್ಯಕ್ಷ ಸ್ಥಾನಕ್ಕೆ ಸೋಮನಾಥಪುರ ಕ್ಷೇತ್ರದ ಜೆಡಿಎಸ್‌ ಸದಸ್ಯ ಬಸವನಹಳ್ಳಿ ವೆಂಕಟೇಶ್‌ ಹಾಗೂ ಕಲಿಯೂರು ಕ್ಷೇತ್ರದ ಕಾಂಗ್ರೆಸ್‌ ಸದಸ್ಯ ಎಂ.ಕೆ. ಶಂಕರ ನಾಯಕ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೋಸಲೆ ಕ್ಷೇತ್ರದ ಜೆಡಿಎಸ್‌ ಸದಸ್ಯ ಮಹದೇವಯ್ಯ ಹಾಗೂ ತಲಕಾಡು ಕ್ಷೇತ್ರದ ಕೈ ಸದಸ್ಯೆ ಕೆ.ಎಸ್‌.ಗೌರಮ್ಮ ನಾಮಪತ್ರ ಸಲ್ಲಿಸಿದರು.

ನಂತರ ನಡೆದ ಗುಪ್ತ ಮತದಾನದಲ್ಲಿ 10 ಸದಸ್ಯರ ಮತಗಳನ್ನು ಪಡೆದುಕೊಂಡ ಬಸವನಹಳ್ಳಿ ವೆಂಕಟೇಶ್‌ ಅಧ್ಯಕ್ಷರಾಗಿ ಚುನಾಯಿತರಾದರೆ, 6 ಮತಗಳನ್ನು ಪಡೆದುಕೊಂಡ ಎಂ.ಕೆ. ಶಂಕರನಾಯಕ ಪರಾಭವಗೊಂಡರು. ಉಪಾಧ್ಯಕ್ಷ ಸ್ಥಾನ ಸ್ಪರ್ಧಿಗಳಾಗಿದ್ದ ಮಹದೇವಯ್ಯ ಮತ್ತು ಕೆ.ಎಸ್‌.ಗೌರಮ್ಮ ಅವರಿಬ್ಬರೂ ತಲಾ ಎಂಟೆಂಟು ಮತ ಗಳನ್ನು ಪಡೆದುಕೊಂಡಿದ್ದರಿಂದ ಆಯ್ಕೆಗೆ ಲಾಟರಿ ಎತ್ತಲಾಯಿತು.

ಲಾಟರಿಯಲ್ಲಿ ಮಹದೇವಯ್ಯ ಅವರಿಗೆ ಅದೃಷ್ಟ ಒಲಿದ್ದರಿಂದ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯಲ್ಲಿ ಎಪಿಎಂಸಿಯ 16 ಮಂದಿ ಸದಸ್ಯರೆಲ್ಲರೂ ಭಾಗವಹಿಸಿದ್ದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರ್‌ ಬಿ. ಶಂಕರಯ್ಯ, ಸಹಾಯಕ ಚುನಾವಣಾಧಿಕಾರಿಯಾಗಿ ಪ್ರಭುರಾಜ್‌, ಪ್ರಭಾರ ಕಾರ್ಯದರ್ಶಿ ಎಂ.ಎನ್‌. ಶಿವಕುಮಾರ್‌ ಕಾರ್ಯನಿರ್ವಹಿಸಿದರು. ಫ‌ಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಜೆಡಿಎಸ್‌ ಕಾರ್ಯಕರ್ತರು ಹಾಗೂ ಮುಖಂಡರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. 

ಸೋಮನಾಥಪುರ ಜಿಪಂ ಕ್ಷೇತ್ರದ ಸದಸ್ಯ ಎಂ.ಅಶ್ವಿ‌ನ್‌ಕುಮಾರ್‌, ಮಾಜಿ ಅಧ್ಯಕ್ಷ ಎಸ್‌.ಎನ್‌.ಸಿದ್ಧಾರ್ಥ, ಜೆಡಿಎಸ್‌ ಕ್ಷೇತ್ರಾಧ್ಯಕ್ಷ ಸಿ.ಬಿ.ಹುಂಡಿ ಚಿನ್ನಸ್ವಾಮಿ, ಕಾರ್ಯಾಧ್ಯಕ್ಷ, ಎಚ್‌ಡಿಕೆ ಅಭಿಮಾನಿ ಬಳಗ ರಾಜಾಧ್ಯಕ್ಷ ಬಿ.ಆರ್‌. ಮಂಜುನಾಥ್‌, ಜಿಲ್ಲಾ ಉಪಾಧ್ಯಕ್ಷ ಕಾರ್ಗಳ್ಳಿ ಶಿವಸ್ವಾಮಿ, ಸಾಮ್ರಾಟ್‌ ಸುಂದರೇಶನ್‌, ಎಪಿಎಂಸಿ ಸದಸ್ಯರಾದ ಜಗದಾಂಬ,

ಹೊಂಬಾಳಯ್ಯ, ಎನ್‌.ಆರ್‌.ರಾಜೇಶ್‌, ಕೃಷ್ಣೇಗೌಡ, ಪುರಸಭಾ ಮಾಜಿ ಉಪಾಧ್ಯಕ್ಷ ಪಾರ್ಥಸಾರತಿ, ಮಾಜಿ ಸದಸ್ಯ ಡಾ.ಬಿ.ಕೆ.ಜಾನಪ್ರಕಾಶ್‌, ತಾ.ಪಂ ಸದಸ್ಯ ಬಿ.ಸಾಜಿದ್‌ ಅಹಮ್ಮದ್‌, ಮಾಜಿ ಅಧ್ಯಕ್ಷ ಅತ್ತಹಳ್ಳಿ ಕುಮಾರಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಡಿ.ಶಿವು, ಮುಖಂಡರಾದ ಮೇಗಡಹಳ್ಳಿ ಶಿವಕುಮಾರ್‌, ನಾಗಾರ್ಜುನ, ಸರ್ದಾರ್‌ ಪಾಷ, ರಾಧಾಕೃಷ್ಣ, ವೈ.ಕೆ.ನವೀನ, ಮಹೇಶ ನೂರಾರು ಜೆಡಿಎಸ್‌ ಕಾರ್ಯಕರ್ತರು ಹಾಜರಿದ್ದರು.

ಕಾಂಗ್ರೆಸ್ಸಿಗರೇ ಕೈ ಕೊಟ್ಟರು!
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಐವರು ಕೃಷಿಕರ ಕ್ಷೇತ್ರದ ಸದಸ್ಯ, ಮೂವರು ನಾಮ ನಿರ್ದೇಶಿತರು ಹಾಗೂ ಟಿಎಪಿಸಿಎಂಸ್‌ನ ಪ್ರತಿನಿಧಿಯಿದ್ದರೂ ಕಾಂಗ್ರೆಸ್‌ಗೆ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಕೃಷಿಕರ ಕ್ಷೇತ್ರದ ಕಾಂಗ್ರೆಸ್‌ ಸದಸ್ಯರಿಬ್ಬರೂ ಕೈ ಕೊಟ್ಟದ್ದರಿಂದ ಅಧಿಕಾರ ಕೈ ತಪ್ಪಿ, ಜೆಡಿಎಸ್‌ ಪಾಲಾಗಿದೆ.

ಜೆಡಿಎಸ್‌ನ ಐವರು ಕೃಷಿಕರ ಕ್ಷೇತ್ರದ ಸದಸ್ಯರು ಸೇರಿದಂತೆ ಓರ್ವ ಬಿಜೆಪಿ ಸದಸ್ಯೆ, ವರ್ತಕರ ಕ್ಷೇತ್ರದ ಸದಸ್ಯ ಮತ್ತು ಟಿಎಪಿಸಿಎಂಎಸ್‌ ಪ್ರತಿನಿಧಿ ಹಾಗೂ ಇಬ್ಬರು ಕೈ ಸದಸ್ಯರ ಬೆಂಬಲವನ್ನು ಪಡೆಯಲು ತಂತ್ರಗಾರಿಕೆ ರೂಪಿಸಿ ಸಿಎಂ ಸಿದ್ದರಾಮಯ್ಯ ಮತ್ತು ಪ್ರಭಾವಿ ಸಚಿವರಾಗಿರುವ ಡಾ. ಎಚ್‌.ಸಿ. ಮಹದೇವಪ್ಪ ಅವರಿಗೆ ಸೆಡ್ಡು ಹೊಡೆದು ಅಧಿಕಾರ ಹಿಡಿಯುವಲ್ಲಿ ಜೆಡಿಎಸ್‌ ಸಫ‌ಲವಾಗಿದೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಬ್ಬರನ್ನೂ ಮಾಜಿ ಶಾಸಕ ಡಾ. ಎನ್‌.ಎಲ್‌. ಭಾರತೀಶಂಕರ್‌ ಅಭಿನಂದಿಸಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ

Get rid of hate mongers, vote for Congress: Sonia gandhi

Election; ದ್ವೇಷದ ಪ್ರತಿಪಾದಕರನ್ನು ತೊಲಗಿಸಿ, ಕಾಂಗ್ರೆಸ್‌ಗೆ ಮತ ನೀಡಿ: ಸೋನಿಯಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

“ಸಂತ್ರಸ್ತೆ ಸಂಬಂಧಿ ಮನೆಯಲ್ಲಿ ತಂಗಿದ್ದರು’; ಸಾ.ರಾ.ಮಹೇಶ್‌

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

Pen Drive ಹಂಚಿದವರ ವಿರುದ್ಧ ಯಾಕೆ ಎಸ್ಐಟಿ ಕ್ರಮ ಕೈಗೊಳ್ಳಲಿಲ್ಲ: ಜಿ.ಟಿ ದೇವೇಗೌಡ ಪ್ರಶ್ನೆ

1-wqeeqw

Hunsur: ಹಣ್ಣಿನ ತೋಟ ಸೇರಿಕೊಂಡಿದ್ದ ಹೆಣ್ಣುಹುಲಿ ಸೆರೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.