ಮೈಸೂರು ಪಾಲಿಕೆ ಮೈತ್ರಿ ಗೊಂದಲಕ್ಕೆ ಸಿದ್ದರಾಮಯ್ಯ ಕಾರಣ: ಸಾ.ರಾ. ಮಹೇಶ್
Team Udayavani, Feb 28, 2021, 11:13 AM IST
ಮೈಸೂರು: ಮೈಸೂರು ಪಾಲಿಕೆ ಮೈತ್ರಿ ಗೊಂದಲಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಣ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜನತಾದಳದ ಶಕ್ತಿ ಏನೆಂಬುದನ್ನು ಸಿದ್ದರಾಮಯ್ಯ ಅವರಿಗೆ ತೋರಿಸಿದ್ದೇವೆ. ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಿಂದಲೇ ನಮ್ಮ ಶಕ್ತಿ ತೋರಿಸಿದ್ದೇವೆ ಎಂದರು.
ತಾವು ಬೆಳೆದ ಪ್ರಾದೇಶಿಕ ಪಕ್ಷವನ್ನು ಹಗುರವಾಗಿ ನೋಡಬೇಡಿ. ಚಿಕ್ಕದಾಗಿ ನೋಡಬೇಡಿ ಎಂದು ಸಿದ್ದರಾಮಯ್ಯಗೆ ಸಾ.ರಾ. ಮಹೇಶ್ ಎಚ್ಚರಿಕೆ ನೀಡಿದರು.
ಇದನ್ನೂ ಓದಿ:ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಇಲ್ಲ: ಸಿಎಂ ಯಡಿಯೂರಪ್ಪ
ಕೊನೆ ಕ್ಷಣದಲ್ಲಿ ಕೈ ಮೈತ್ರಿ ಆಗಲು ಜಿ.ಟಿ.ದೇವೇಗೌಡ, ಸಂದೇಶ್ ನಾಗರಾಜ್ ಕಾರಣ. ಅವರು ಬಂದಿದ್ದರೆ ನಾವು ಮೈತ್ರಿ ಮಾಡಿಕೊಳ್ಳುತ್ತಿರಲಿಲ್ಲ. ಬದಲಿಗೆ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿದ್ದೆವು. ಆದರೆ ಅವರಿಬ್ಬರು ಗೈರಾದರು. ಮುಂದಿನ ಸಾರಿ ಕಾಂಗ್ರೆಸ್ಗೆ ಮೇಯರ್ ಸ್ಥಾನ ನೀಡುತ್ತೇವೆ ಎಂದರು.
ಆದರೆ ಮಾತಿನ ಮೇಲೆ ಹಿಡಿತವಿರಬೇಕು. ಯಾವುದೇ ಡ್ರಾಮಾ ಗೊಂದಲಗಳಿಲ್ಲದೆ ಮೇಯರ್ ಸ್ಥಾನ ನೀಡಲಾಗುವುದು. ಈ ಬಾರಿಯೇ ಕೊಡುತ್ತಿದ್ದೆವು. ಆದರೆ ಹೀನಾಯವಾಗಿ ಮಾತನಾಡಿದ್ದರಿಂದ ಕೊಡಲಿಲ್ಲ. ಶಕ್ತಿ ತೋರಿಸಲು ಅಭ್ಯರ್ಥಿ ಹಾಕಿದೆವು ಅಷ್ಟೇ ಎಂದು ಸಾ.ರಾ. ಮಹೇಶ್ ಹೇಳಿದರು.
ಇದನ್ನೂ ಓದಿ: ಎಸೆಸೆಲ್ಸಿ : ಶೇ. 30ರಷ್ಟು ಪಠ್ಯ ಕಡಿತ : ಮಂಗಳೂರಿನಲ್ಲಿ ಸಚಿವ ಸುರೇಶ್ ಕುಮಾರ್ ಹೇಳಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ