ಎಚ್ಚೆತ್ತ ಶಾಸಕ, ಬದಲಾದ ಅಭ್ಯರ್ಥಿ: ಹುಣಸೂರು ನಗರಸಭೆ ಅಧ್ಯಕ್ಷೆಯಾಗಿ ಸಮಿನಾ ಪರ್ವಿನ್


Team Udayavani, Mar 31, 2022, 7:51 PM IST

1-ssdsa

ಹುಣಸೂರು : ಹುಣಸೂರು ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಗುರುವಾರದಂದು ನಡೆದ ಚುನಾವಣೆಯಲ್ಲಿ ೯ನೇ ವಾರ್ಡಿನ ಸದಸ್ಯೆ ಕಾಂಗ್ರೆಸ್‌ನ ಸಮೀನಾ ಪರ್ವಿನ್ ಅವಿರೋಧವಾಗಿ ಆಯ್ಕೆಯಾದರು.

ನಗರಸಭಾ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಸಮೀನಾ ಪರ್ವಿನ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾದ ಉಪ ವಿಭಾಗಾಧಿಕಾರಿ ವರ್ಣಿತ್‌ ನೇಗಿಯವರು ಅವಿರೋಧ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.

ನಿರೀಕ್ಷೆಯಂತೆ ಚುನಾವಣೆಯಲ್ಲಿ ಕಾಂಗ್ರೆಸ್‌ನ 15 , ಎಸ್.ಡಿ.ಪಿ.ಐ.ನ ಸೈಯದ್‌ಯೂನಸ್, ಸಮೀನಾ ಬಾನು, ಪಕ್ಷೇತರ ಸದಸ್ಯರಾದ ಮಾಲಿಕ್‌ಪಾಷ, ಸತೀಶ್‌ಕುಮಾರ್, ಪರ್ವಿನ್‌ತಾಜ್, ಆಶಾ ಮತ್ತು ಶಾಸಕ ಎಚ್.ಪಿ.ಮಂಜುನಾಥ್ ಸೇರಿದಂತೆ 21  ಮಂದಿ ಹಾಜರಿದ್ದರು.

ಜೆಡಿಎಸ್-ಬಿಜೆಪಿ ಗೈರು
ಚುನಾವಣೆಯಲ್ಲಿ ಕಳೆದ ಬಾರಿಯಂತೆ ಅಭ್ಯರ್ಥಿಯನ್ನು ಹಾಕದ ಏಳು ಮಂದಿ ಸದಸ್ಯ ಬಲದ ಜೆ.ಡಿ.ಎಸ್, ಬಿಜೆಪಿಯ ಮೂವರು ಸದಸ್ಯರು ಮತ್ತು ಪಕ್ಷೇತರ ಸದಸ್ಯ ದೊಡ್ಡಹೆಜ್ಜೂರುರಮೇಶ್, ಸಂಸದ ಪ್ರತಾಪಸಿಂಹ, ಎಂ.ಎಲ್.ಸಿ.ಅಡಗೂರು ಎಚ್.ವಿಶ್ವನಾಥ್ ಚುನಾವಣೆಗೆ ಗೈರಾಗಿದ್ದರು.

ಒಳೇಟಿನ ಬಿಸಿ,ಎಚ್ಚೆತ್ತ ಶಾಸಕ
ಪ್ರಿಯಾಂಕ ಥೋಮಸ್, ಗೀತಾನಿಂಗರಾಜು, ಸಮೀನಾಪರ್ವಿನ್ ಅಧ್ಯಕ್ಷಗಾದಿ ಆಕಾಂಕ್ಷಿಯಾಗಿದ್ದರು. ಒಳೇಟಿನ ಸುಳಿವರಿತ ಶಾಸಕ ಮಂಜುನಾಥ್ ಎಚ್ಚೆತ್ತು, ಇಡೀದಿನ ಚರ್ಚೆ ನಡೆಸಿ, ಸದಸ್ಯರ ಮನವೊಲಿಸುವಲ್ಲಿ ಯಶಸ್ವಿಯಾದರು. ಸಮೀನಾ ಪರ್ವಿನ್ ಅಧ್ಯಕ್ಷೆಯಾಗಲು ಎಲ್ಲರೂ ಒಪ್ಪಿದರು.

ಕಾಂಗ್ರೆಸ್ ವಿಜಯೋತ್ಸವ
ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ನಗರಸಭೆ ಹೊರಗೆ ಜಮಾಯಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪಕ್ಷದ ಭಾವುಟ ಹಿಡಿದು ಪಕ್ಷ ಹಾಗೂ ಶಾಸಕ ಎಚ್.ಪಿ.ಮಂಜುನಾಥ್ ಪರ ಜಯಘೋಷ ಮೊಳಗಿಸಿ, ಪಟಾಕಿ ಸಿಡಿಸುತ್ತಾ ಕಚೇರಿವರೆಗೆ ತಮಟೆ ಸದ್ದಿಗೆ ಕುಣಿದು-ಕುಪ್ಪಳಿಸಿದರು. ನಂತರ ಮೆರವಣಿಗೆಯಲ್ಲಿ ನೂತನ ಅಧ್ಯಕ್ಷೆ ಸಮೀನಾಪರ್ವಿನ್ ಹಾಗೂ ಸದಸ್ಯರು ಕಾಂಗ್ರೆಸ್ ಪಕ್ಷದ ಕಚೇರಿಗೆ ತೆರಳಿದ ವೇಳೆ ಸಭೆ ನಡೆಸಿ ಪಕ್ಷದವತಿಯಿಂದ ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಲಾಯಿತು.

ಅಂತೂ-ಇಂತೂ ದಕ್ಕಿದ ಅಧ್ಯಕ್ಷ ಸ್ಥಾನ
ಕಳೆದ ಬಾರಿಯೇ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಪ್ರಿಯಾಂಕ ಥೋಮಸ್‌ರಿಗೆ ಈ ಬಾರಿ ವರಿಷ್ಟ ಸ್ಥಾನ ಗ್ಯಾರಂಟಿ ಎಂಬ ಮಾತಿತ್ತಾದರೂ ಕೆಲ ರಾಜಕೀಯ ತಂತ್ರಗಾರಿಕೆಯಿಂದಾಗಿ ಕೈತಪ್ಪಿದೆ. ಎರಡು ಬಾರಿಯೂ ಅಧ್ಯಕ್ಷ ಸ್ಥಾನದ ಪ್ರಭಲ ಆಕಾಂಕ್ಷಿಯಾಗಿದ್ದ ಸಮೀನಾಪರ್ವಿನ್‌ರವರು ಈ ಬಾರಿ ಶಾಸಕ ಎಚ್.ಪಿ.ಮಂಜುನಾಥರ ಒತ್ತಾಸೆಯಿಂದ ಅಧ್ಯಕ್ಷಸ್ಥಾನ ಗಿಟ್ಟಿಸುವಲ್ಲಿ ಯಶಸ್ವಿಯಾಗಿರುವ ಇವರು ನಗರಸಭಾ ಮಾಜಿ ಸದಸ್ಯ ಜಾಕೀರ್‌ಹುಸೇನ್‌ರ ಪತ್ನಿ.

ಸಮಸ್ಯೆ ಪರಿಹಾರಕ್ಕೆ ಆದ್ಯತೆ
ನಗರದಲ್ಲಿ ಕುಡಿಯುವ ನೀರು, ಬೀದಿದೀಪ, ಸ್ವಚ್ಚತೆ ಸೇರಿದಂತೆ ಹಲವಾರು ಸಮಸ್ಯೆಗಳು ಕಾಡುತ್ತಿದ್ದು, ಶಾಸಕ ಮಂಜುನಾಥ್ ಹಾಗೂ ಎಲ್ಲ ೩೫ ಮಂದಿ ಸದಸ್ಯರ ಸಹಕಾರದೊಂದಿಗೆ ಪರಿಹರಿಸಲು ಶ್ರಮಿಸುವುದಾಗಿ ಹಾಗೂ ತಮ್ಮ ಆಯ್ಕೆಗಾಗಿ ನೆರವಾದ ಎಲ್ಲ ಸದಸ್ಯರನ್ನು ಅಭಿನಂದಿಸುವುದಾಗಿ ನೂತನ ಅಧ್ಯಕ್ಷೆ ಸಮಿನಾ ಪರ್ವಿನ್ ತಿಳಿಸಿದರು.

ನ್ಯಾಯ ಒದಗಿಸಿ
ಹಿಂದಿನ ಇಬ್ಬರು ಅಧ್ಯಕ್ಷರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನಗರದ ಅಭಿವೃದ್ದಿಗೆ ಶ್ರಮ ಹಾಕಿದ್ದರು. ಅದರಲ್ಲೂ ಕೊವಿಡ್ ಸಂದರ್ಭದಲ್ಲಿ ಅಹಿರ್ನಿಷಿಯಾಗಿ ದುಡಿದಿದ್ದರು. ಅದೇರೀತಿ ನೂತನ ಅಧ್ಯಕ್ಷರು ಪಕ್ಷಬೇದ ಮರೆತು ಎಲ್ಲ ಸದಸ್ಯರನ್ನು ಒಗ್ಗಟ್ಟಿನಿಂದ ಕರೆದೊಯ್ಯುವ ಮೂಲಕ ಯೋಜನೆಗಳಿಗೆ ವೇಗ ನೀಡಬೇಕು. ಪ್ರತಿಧಿನಿಗಳು, ಸಿಬ್ಬಂದಿಗಳನ್ನು ಎರಡು ಹಳಿಗಳ ಮೇಲೆ ಒಟ್ಟಿಗೆ ಕರೆದೊಯ್ದು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ನ್ಯಾಯ ಒದಗಿಸಬೇಕೆಂದು ಸೂಚಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.