ದಸರಾ ಪ್ರಾಧಿಕಾರ ರಚನೆಗೆ ಸಂಘ ಸಂಸ್ಥೆಗಳ ಆಗ್ರಹ


Team Udayavani, Sep 11, 2019, 3:00 AM IST

dasara-pradfi

ಮೈಸೂರು: ದಸರಾ ಪ್ರಾಧಿಕಾರ ರಚಿಸುವ ಮೂಲಕ ಪ್ರತಿ ವರ್ಷ ಆಚರಿಸುವ ದಸರಾ ಮಹೋತ್ಸವವನ್ನು ಸಾಕಷ್ಟು ಪೂರ್ವ ತಯಾರಿಯೊಂದಿಗೆ ಆಯೋಜಿಸಿದರೆ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ ಎಂದು ಮೈಸೂರಿನ ವಿವಿಧ ಸಂಘ-ಸಂಸ್ಥೆಯವರು ತಿಳಿಸಿದರು. ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಮಂಗಳವಾರ ವಿವಿಧ ಸಂಘ-ಸಂಸ್ಥೆಗಳವರೊಂದಿಗೆ ಸಭೆ ನಡೆಸಿದರು.

ತರಾತುರಿಯಲ್ಲಿ ಆಯೋಜನೆ: ಪ್ರತಿ ವರ್ಷ ಸರ್ಕಾರ ನಾಡಹಬ್ಬ ದಸರಾ ನಡೆಸಿದರೂ ಯಾವುದೇ ಪೂರ್ವ ತಯಾರಿ ಮಾಡಿಕೊಳ್ಳದೆ ತರಾತುರಿಯಲ್ಲಿ ದಸರಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದರಿಂದ ದೇಶ, ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಆಗಮಿಸಲು ಸಾಧ್ಯವಾಗುತ್ತಿಲ್ಲ. ದಸರಾ ಕಾರ್ಯಕ್ರಮಗಳಿಗೆಂದು ಸರ್ಕಾರ ಕೋಟ್ಯಂತರ ರೂ. ಖರ್ಚು ಮಾಡುತ್ತಿದ್ದರೂ ಅದರಿಂದ ಪ್ರವಾಸೋದ್ಯಮಕ್ಕೆ ಯಾವುದೇ ಪ್ರಯೋಜವಾಗದಿರುವ ಬಗ್ಗೆ ಮೈಸೂರು ಹೋಟೆಲ್‌ ಮಾಲೀಕರ ಸಂಘ, ಟೂರ್ ಆ್ಯಂಡ್‌ ಟ್ರಾವಲ್ಸ್‌ ಅಸೋಸಿಯೆಷನ್‌, ಯೋಗ ಸಂಸ್ಥೆಗಳು, ಪ್ರವಾಸಿ ಗೈಡ್‌ಗಳು, ಚಾಲಕರ ಸಂಘಗಳು ಸೇರಿದಂತೆ ವಿವಿಧ ಸಂಘ ಸಂಸ್ಥೆಗಳವರು ಅಸಮಾಧಾನ ವ್ಯಕ್ತಪಡಿಸಿದರು.

ಮೈಸೂರು ಟೂರ್ ಆ್ಯಂಡ್‌ ಟ್ರಾವಲ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಬಿ.ಎಸ್‌. ಪ್ರಶಾಂತ್‌ ಮಾತನಾಡಿ, ಪ್ರತಿ ಬಾರಿ ದಸರಾಗೆ ಕೆಲವೇ ದಿನಗಳಿರುವಾಗ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ. 10-15 ದಿನಗಳಿರುವಾಗ ಪ್ರಚಾರ ಮಾಡುತ್ತಾರೆ. ಇದರಿಂದಾಗಿ ದೇಶ-ವಿದೇಶಗಳ ಪ್ರವಾಸಿಗರು ಮೈಸೂರಿಗೆ ಬರಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಪ್ರವಾಸೋದ್ಯಮಕ್ಕೆ ಯಾವುದೇ ಪ್ರಯೋಜನವಾಗುತ್ತಿಲ್ಲ, ಹೀಗಾಗಿ ದಸರಾ ಕಾರ್ಯಕ್ರಮಗಳನ್ನು ಕನಿಷ್ಠ ಆರು ತಿಂಗಳ ಮುಂಚಿತವಾಗಿ ರೂಪಿಸಿ, ದೇಶ-ವಿದೇಶಗಳಲ್ಲಿ ವ್ಯಾಪಕ ಪ್ರಚಾರ ನೀಡಿದರೆ, ಪ್ರವಾಸಿಗರು ದಸರಾಗೆ ಬರುವುದಕ್ಕೆ ಯೋಜನೆ ರೂಪಿಸಿಕೊಳ್ಳುತ್ತಾರೆ. ಆದರೆ, ಸರ್ಕಾರ ಯೋಜನೆ ರೂಪಿಸುವಲ್ಲಿ ಹಿಂದೆ ಬೀಳುತ್ತಿರುವುದರಿಂದ ದಸರಾಗೆಂದು ಕೋಟ್ಯಂತರ ರೂ. ಖರ್ಚು ಮಾಡಿದರೂ ಅದರ ಉದ್ದೇಶವೇ ಈಡೇರುತ್ತಿಲ್ಲ ಎಂದರು.

ಮೈಸೂರು ಹೋಟೆಲ್‌ ಅಸೋಸಿಯೇಷನ್‌ ಅಧ್ಯಕ್ಷ ಸಿ.ನಾರಾಯಣಗೌಡ ಮಾತನಾಡಿ, ಮೈಸೂರಿನಲ್ಲಿರುವ ಹೋಟೆಲ್‌ಗ‌ಳಲ್ಲಿ ಒಟ್ಟು 6500 ರೂಮ್‌ ಗಳಿವೆ. ಆದರೆ, ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದ್ದರಿಂದ ಮೈಸೂರಿನಲ್ಲಿ ಪ್ರವಾಸಿಗರನ್ನು ಉಳಿಸಿಕೊಳ್ಳುವಂತಹ ಯಾವುದೇ ಕಾರ್ಯಕ್ರಮಗಳು ಸಂಜೆಯ ವೇಳೆ ನಡೆಯುತ್ತಿಲ್ಲ. ಹೀಗಾಗಿ ಮೈಸೂರಿಗೆ ಬರುವ ಯಾವ ಪ್ರವಾಸಿಗರು ಉಳಿದುಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರಸ್ತಾವನೆ: ಶಾಸಕ ಎಸ್‌.ಎ.ರಾಮದಾಸ್‌ ಮಾತನಾಡಿ, ಚಾಮುಂಡಿಬೆಟ್ಟ, ವಸ್ತು ಪ್ರದರ್ಶನ, ದಸರಾ ಮಹೋತ್ಸವ ಸೇರಿದಂತೆ ಪ್ರಾಧಿಕಾರ ರಚನೆಗೆ ಈ ಹಿಂದೆಯೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ, ಈ ವಿಷಯ ಸಚಿವ ಸಂಪುಟ ಸಭೆಗೆ ಬರುತ್ತಲೇ ಇಲ್ಲ ಎಂದರು.

ಮೈಸೂರಿನಲ್ಲಿ 300ಕ್ಕೂ ಹೆಚ್ಚು ಯೋಗ ಕೇಂದ್ರ: ಮೈಸೂರಿನಲ್ಲಿ 300ಕ್ಕೂ ಹೆಚ್ಚು ಯೋಗ ಕೇಂದ್ರಗಳಿವೆ. ವಿಶ್ವದ 45 ದೇಶಗಳಿಂದ ಯೋಗ ಕಲಿಯಲೆಂದು ಜನರು ಬರುತ್ತಿದ್ದಾರೆ. ಆದರೆ, ಅವರಿಗೆ ನೀಡಲಾಗುವ ವೀಸಾ ಅವಧಿ ಬಹಳ ಕಡಿಮೆಯಿರುವ ಕಾರಣ, ಅವರು ಹೆಚ್ಚು ದಿನ ಮೈಸೂರಿನಲ್ಲಿ ಉಳಿಯುವುದಕ್ಕೆ ಸಾಧ್ಯವಾಗುತ್ತಿಲ್ಲ, ಹಾಗಾಗಿ ಯೋಗ ವಿಶ್ವವಿದ್ಯಾಲಯವನ್ನು ಮೈಸೂರಿನಲ್ಲಿ ಸ್ಥಾಪಿಸಿ, ಶೈಕ್ಷಣಿಕ ವೀಸಾವನ್ನು ಪ್ರವಾಸಿಗರಿಗೆ ನೀಡಿದರೆ, ಅವರು ಹೆಚ್ಚು ದಿನ ಮೈಸೂರಿನಲ್ಲಿ ಉಳಿಯುತ್ತಾರೆ. ಇದರಿಂದ ಪ್ರವಾಸೋದ್ಯಮಕ್ಕೆ ಬಹಳ ಅನುಕೂಲವಾಗಲಿದೆ. ಈ ಬಗ್ಗೆ ಸರ್ಕಾರ ನೀತಿ ರೂಪಿಸಬೇಕಿದೆ ಎಂದು ಶಾಸಕ ರಾಮದಾಸ್‌ ತಿಳಿಸಿದರು.

ಕೇರಳ ನೋಡಿ ಕರ್ನಾಟಕ ಕಲಿಯಲಿ: ಕೇರಳ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಪ್ರಚಾರ ನೀಡುತ್ತಿದೆ. ಸಣ್ಣ ಪುಟ್ಟ ಕಾರ್ಯಕ್ರಮಗಳಿಗೂ ಸಾಮಾಜಿಕ ಜಾಲತಾಣ ಸೇರಿದಂತೆ ಅನೇಕ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರವನ್ನು ವಿಶ್ವಮಟ್ಟದಲ್ಲಿ ನೀಡಿ ಪ್ರವಾಸಿಗರನ್ನು ಆಕರ್ಷಿಸುತ್ತಿದ್ದಾರೆ. ಕರ್ನಾಟಕದ ಪ್ರವಾಸೋದ್ಯಮ ಇಲಾಖೆ ಅಥವಾ ದಸರಾ ಆಚರಣಾ ಸಮಿತಿಯಿಂದ ಇಂತಹ ಪ್ರಯತ್ನ ಆಗುತ್ತಿಲ್ಲ ಎಂದು ಮೈಸೂರು ಟೂರ್ ಆ್ಯಂಡ್‌ ಟ್ರಾವಲ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಬಿ.ಎಸ್‌. ಪ್ರಶಾಂತ್‌ ಅವರು ಸಚಿವರ ಗಮನಕ್ಕೆ ತಂದರು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

ಅರಮನೆಯಿಂದ ಹೊರಗೆ ನಾನೂ ಸಾಮಾನ್ಯನೇ: ಯದುವೀರ್‌

1-asasa

Hunsur:ಆಡಳಿತ ಸೌಧದ ಸೀಲಿಂಗ್ ಕಳಚಿಬಿದ್ದು ಮಹಿಳೆ ಕಾಲ್ಬೆರಳು ತುಂಡು!

1-adasdsa

Hunsur: ಸಾಲಬಾಧೆಯಿಂದ ರೈತ ಅತ್ಮಹತ್ಯೆಗೆ ಶರಣು

1-sasd

BJP; ಟಿಕೆಟ್ ಕೊಡುವಾಗ ಕಾರಣ ಹೇಳಬೇಕಾದ ಅಗತ್ಯ ಪಕ್ಷಕ್ಕಿಲ್ಲ: ಪ್ರತಾಪ್ ಸಿಂಹ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ಗೌಡ

Lok Sabha Polls: ಮೈತ್ರಿ ಅಭ್ಯರ್ಥಿ ಯದುವೀರ್ ಗೆಲುವಿಗೆ ಶ್ರಮ: ಶಾಸಕ ಹರೀಶ್‌ ಗೌಡ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.