ಗೌರಿಹಬ್ಬದ ಸೀರೆಗೆ ನಾರಿಯರ ಪೈಪೋಟಿ! 


Team Udayavani, Sep 12, 2018, 6:00 AM IST

26.jpg

ಮೈಸೂರು/ಬೆಂಗಳೂರು: ಸೀರೆ ಅಂದ್ರೆ ನೀರೆಯರಿಗೆ ಅದೆಂಥಧ್ದೋ ಖುಷಿ…. ಅದರಲ್ಲೂ ಗೌರಿ- ಗಣೇಶ ಹಬ್ಬದ ಸಂಭ್ರಮದ ವೇಳೆ ಯಲ್ಲೇ 15 ಸಾವಿರದ ರೇಷ್ಮೆ ಸೀರೆಯನ್ನು ನಾಲ್ಕೂವರೆ ಸಾವಿರಕ್ಕೆ ಕೊಡುತ್ತಾರೆಂದರೆ ಕೇಳಬೇಕೇ? ಹೌದು, ಬೆಂಗಳೂರು, ಮೈಸೂರಿನಲ್ಲಿ ಸರ್ಕಾರದ ರಿಯಾಯಿತಿ ದರದ ರೇಷ್ಮೆ ಸೀರೆಗಾಗಿ ಮಹಿಳೆಯರು ಮುಗಿಬಿದ್ದಿದ್ದಾರೆ. ಒಬ್ಬರಿಗೆ ಒಂದೇ ಸೀರೆ, ಅದರಲ್ಲೂ ಆಧಾರ್‌ ಕಾರ್ಡ್‌ ಇದ್ದವರಿಗೆ ಮಾತ್ರ ಎಂಬ ನಿಯಮಗಳು ಕೆಲ ಮಹಿಳೆಯರನ್ನು ಕೆರಳಿಸಿದ್ದು ಸರ್ಕಾರದ ಅಧಿಕಾರಿಗಳ ಜತೆಗೆ ಜಗಳಕ್ಕೂ ಇಳಿದಿದ್ದಾರೆ.

ಮುಗಿಬಿದ್ದ ಜನ: ಮಧ್ಯಮ ವರ್ಗದವರೂ ರೇಷ್ಮೆ ಸೀರೆ ಸಿಗಲಿ ಎಂಬ ಕಾರಣ ದಿಂದ ರಿಯಾಯಿತಿ ದರದಲ್ಲಿ ಮಾರಾಟ ಮಾಡಲು ರೇಷ್ಮೆ ಸಚಿವ ಸಾ.ರಾ. ಮಹೇಶ್‌ ಉದ್ದೇಶಿಸಿದ್ದರು. ಮೈಸೂರಿನ ಮೃಗಾಲಯದ ಎದುರಿನ ಕೆಎಸ್‌ಐಸಿ ಸಿಲ್ಕ್ ಮಳಿಗೆಯಲ್ಲಿ ಮತ್ತು ಬೆಂಗಳೂರಿನ ಕೆಂಪೇಗೌಡ ರಸ್ತೆಯ ಬಳಿಯ ಮಳಿಗೆಯಲ್ಲಿ ಮಾರಾಟದ ವ್ಯವಸ್ಥೆ ಮಾಡಲಾಗಿತ್ತು. ಹೀಗಾಗಿ ಮಹಿಳೆಯರು ತಮ್ಮ ಹೆಸರು ನೊಂದಾಯಿಸಲು ಬೆಳಗ್ಗಿನಿಂದಲೇ ಸಾಲುಗಟ್ಟಿ ನಿಂತರು.

ಮಹಿಳೆಯರ ಪ್ರತಿಭಟನೆ: ಮೈಸೂರಿನಲ್ಲಿ ಹೆಸರು ನೊಂದಣಿಗೆ ಆಧಾರ್‌ ಕಾರ್ಡ್‌ ಕಡ್ಡಾಯಗೊಳಿಸಲಾಗಿತ್ತು. ಇದನ್ನು ವಿರೋಧಿಸಿ ಕೆಎಸ್‌ಐಸಿ ಅಂಗಡಿ ಮುಂಭಾಗ ಪ್ರತಿಭಟನೆ ನಡೆಸಿದರು.  ಆಧಾರ್‌ ಕಾರ್ಡ್‌ ಕಡ್ಡಾಯ ಬದಲು ಸರದಿಯಲ್ಲಿ ನಿಂತ ಎಲ್ಲರಿಗೂ ಸೀರೆ ವಿತರಣೆ ಮಾಡ ಬೇಕೆಂದು ಪಟ್ಟು ಹಿಡಿದರು. ಜತೆಗೆ ಆಧಾರ್‌ ಕಾರ್ಡ್‌ ಇಲ್ಲ ದವರಿಗೂ ಸೀರೆ ನೀಡುವಂತೆ ಒತ್ತಾಯಿಸಿದರು. ಈ ನಡುವೆ ಸ್ಥಳದಲ್ಲಿದ್ದ ಪೊಲೀಸರು ಮಹಿಳೆಯರನ್ನು ಸಮಾಧಾನಪಡಿಸಲು ಹರಸಾಹಸ ಪಡಬೇಕಾಯಿತು.

1500 ಸೀರೆ ವಿತರಣೆ: ಸರ್ಕಾರದ ಆದೇಶದ ಮೇರೆಗೆ ಕಡಿಮೆ ದರದಲ್ಲಿ ರೇಷ್ಮೆ ಸೀರೆ ನೀಡಲಾಗುತ್ತಿದ್ದು, 1500 ಪಕ್ಕಾ ಜರಿ ರೇಷ್ಮೆ ಸೀರೆಯನ್ನು ಮಾರಾಟ ಮಾಡಲಾಗುತ್ತಿದೆ. ಈ ಹಿಂದೆ ಲಾಟರಿ ಮೂಲಕ ಸೀರೆ ನೀಡಲು ಉದ್ದೇಶಿಸಲಾಗಿತ್ತು. ಆದರೆ ಇದೀಗ ರೇಷ್ಮೆ ಸೀರೆ ಖರೀದಿಸಲು ಆಧಾರ್‌  ಕಾರ್ಡ್‌ ಕಡ್ಡಾಯ ಮಾಡಲಾಗಿದ್ದು, ಆಧಾರ್‌ ಕಾರ್ಡ್‌ ಹೊಂದಿದ ಮಳೆಯರಿಗೆ ಮಾತ್ರ ಸೀರೆ ನೀಡಲಾಗುತ್ತಿದೆ.

ಐದು ಕಡೆ ವಿತರಣೆ
ಗೌರಿ-ಗಣೇಶ ಹಬ್ಬದ ಕೊಡುಗೆಯಾಗಿ 4,500 ರೂ.ಗೆ ರೇಷ್ಮೆ ಸೀರೆ ಖರೀದಿಸಲು ಮೈಸೂರು ಸೇರಿದಂತೆ ರಾಮನಗರ, ಬೆಳಗಾವಿ, ದಾವಣಗೆರೆ ಹಾಗೂ ಬೆಂಗಳೂರಿನಲ್ಲಿರುವ ಕೆಎಸ್‌ಐಸಿ ಮಳಿಗೆಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮಧ್ಯೆ ಬೆಂಗಳೂರಿನಲ್ಲಿ ರಾತ್ರಿ 8 ಗಂಟೆಯಾದರೂ ಸೀರೆ ಖರೀದಿಗೆಂದು ಬಂದಿದ್ದ ಮಹಿಳೆಯರು ಮನೆಗೆ ಹೋಗಲು ಒಪ್ಪಲಿಲ್ಲ. ಕಡೆಗೆ ಪೊಲೀಸರ ಮನವಿ ಮೇರೆಗೆ ಬುಧವಾರ ವಾಪಸ್‌ ಬರುವುದಾಗಿ ಹೇಳಿ ಹೋದರು.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.