ಸೋತವರನ್ನು ಸಂತೈಸುವುದು ದೊಡ್ಡ ಕೆಲಸ


Team Udayavani, May 26, 2019, 3:00 AM IST

sotavara

ಮೈಸೂರು: ಗೆದ್ದವರನ್ನು ಹೊತ್ತು ಮೆರೆಯುವ ಈ ದಿನಗಳಲ್ಲಿ , ಸೋತವರನ್ನು ಸಂತೈಸಿ ಗೆಲುವಿನ ಹಾದಿ ತೋರಿಸಲು ಮುಂದಾಗಿರುವುದು ಶ್ಲಾಘನೀಯ ಕ್ರಮ ಎಂದು ವಿಮರ್ಶಕ ಪ್ರೊ.ಸಿ.ನಾಗಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು.

ಅಖೀಲ ಕರ್ನಾಟಕ ಪಿಯು ಕಾಲೇಜು ಉಪನ್ಯಾಸಕರ ಹಿತರಕ್ಷಣಾ ಸಂಘ ಹಾಗೂ ಮೈಸೂರು ಜಿಲ್ಲಾ ಪಿಯು ಒಕ್ಕೂಟದಿಂದ ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿರುವ ದ್ವಿತೀಯ ಪಿಯು ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತ ಬೋಧನಾ ತರಗತಿಗಳ ಶುಭ ಹಾರೈಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಪ್ರಪಂಚ ಯಾವತ್ತೂ ಕೂಡ ಗೆದ್ದವರ ಪರವಾಗಿಯೇ ಇರುತ್ತೆ. ಗೆದ್ದವರನ್ನು ಹೊಗಳುವ, ಹೆಗಲ ಮೇಲೆ ಹೊತ್ತು ಮೆರೆಯುವುದನ್ನು ರಾಜಕೀಯದಲ್ಲಿ ಹೆಚ್ಚಾಗಿ ಕಾಣಬಹುದು. ಅಂತೆಯೇ ರಾಜಕೀಯದಲ್ಲಿ ಸೋಲನ್ನೇ ಕಾಣದ ಘಟಾನುಘಟಿ ನಾಯಕರುಗಳೂ ಸೋತು ಸುಣ್ಣವಾದಾಗ ಏಕಾಂಗಿಯಾಗುವುದನ್ನೂ ಕಾಣಬಹುದು.

ಸೋತವರನ್ನು ಸಂತೈಸುವ, ಸಾಂತ್ವನ ಹೇಳಿ ಅವರು ಮತ್ತೆ ಎದ್ದು ನಿಲ್ಲುವಂತೆ ಪ್ರೋತ್ಸಾಹಿಸುವವರ ಸಂಖ್ಯೆ ಬಹಳ ವಿರಳ. ಇಂತಹ ದಿನಗಳಲ್ಲಿ ಈ ಸಂಸ್ಥೆ ಸೋತ ವಿದ್ಯಾರ್ಥಿಗಳನ್ನು ಸಂತೈಸಿ, ಗೆಲುವಿಗೆ ಹುರಿದುಂಬಿಸುವ ಕೆಲಸ ಮಾಡುತ್ತಿರುವುದು ಒಳ್ಳೆಯ ಪ್ರಯತ್ನ ಎಂದರು.

ಮನೆಯಲ್ಲಿ ಓದಿಗೆ ಅನುಕೂಲಕರ ವಾತಾವರಣ ಇಲ್ಲದಿರುವುದು, ಪೋಷಕರ ಪ್ರೋತ್ಸಾಹ ಸಿಗದಿರುವುದೂ ಕೂಡ ವಿದ್ಯಾರ್ಥಿಗಳು ಓದಿನಲ್ಲಿ ಹಿಂದೆ ಬೀಳಲು ಕಾರಣವಾಗಿದೆ. ಜೊತೆಗೆ ವಿದ್ಯಾರ್ಥಿಗಳ ಸಹವಾಸ ದೋಷದಿಂದ ಏಕಾಗ್ರತೆ ಕೊರತೆ ಸೇರಿದಂತೆ ಹಲವು ಕಾರಣಗಳಿವೆ. ವಿದ್ಯಾರ್ಥಿಗಳು ಇವುಗಳನ್ನೆಲ್ಲ ಮೆಟ್ಟಿನಿಂತು ಓದಿನಲ್ಲಿ ಗೆಲುವು ಸಾಧಿಸಿದಾಗ, ಜೀವನವನ್ನು ಗೆಲ್ಲಲು ಸಾಧ್ಯ ಎಂದು ಹೇಳಿದರು.

ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ಚಂಚಲ. ಮನೆಯಲ್ಲಿ ಹಿರಿಯರು ಮಾದರಿ ಬದುಕು ನಡೆಸುತ್ತಿದ್ದಲ್ಲಿ ಮಕ್ಕಳು ಕೂಡ ಅವರನ್ನು ಅನುಸರಿಸುತ್ತಾರೆ. ಮನೆಯಲ್ಲಿ ಮಕ್ಕಳ ಓದಿಗೆ ಪ್ರತ್ಯೇಕ ಕೊಠಡಿಯಿಲ್ಲದೆ ಟಿವಿ ಇರುವ ಹಾಲ್‌ನಲ್ಲೇ ಓದುವುದು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ತರದು. ಹೆಣ್ಣು ಮಕ್ಕಳು ಧಾರಾವಾಹಿ, ಬಿಗ್‌ಬಾಸ್‌ ನೋಡದೆ ಪುಸ್ತಕಗಳಿಗೆ ಮೊರೆ ಹೋದರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಸೋಲಿನ ಅನುಭವದಿಂದ ಬಿಡುಗಡೆಯಾದಂತೆ ಎಂದು ಹೇಳಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ.ದಯಾನಂದ, ಕಾಲೇಜಿನ ಪ್ರಾಂಶುಪಾಲ ಎಚ್‌.ಎನ್‌.ಸತೀಶ್‌ ಕುಮಾರ್‌, ಸಂಘದ ರಾಜ್ಯಾಧ್ಯಕ್ಷ ಕಾಟ್ನೂರು ಶಿವೇಗೌಡ, ಮೈಸೂರು ಜಿಲ್ಲಾ ಪಿಯು ಒಕ್ಕೂಟದ ಗೌರವಾಧ್ಯಕ್ಷ ಬಾಲಸುಬ್ರಹ್ಮಣ್ಯಂ, ಹುಣಸೂರು ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಪ್ರಾಂಶುಪಾಲ ಚಲುವಯ್ಯ,ರತ್ನ, ಎಚ್‌.ಎಂ.ನಂಜುಂಡಸ್ವಾಮಿ, ಪರಿಮಳ, ಜನಾರ್ದನ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.