ಹಾಸ್ಟೆಲ್‌ನಲ್ಲಿ ಓದಲು ಕರೆಂಟಿಲ್ಲ, ಸ್ನಾನ, ಶೌಚಾಲಯಕ್ಕೂ ನೀರಿಲ್ಲ!


Team Udayavani, Nov 30, 2021, 3:33 PM IST

girls hostel

ಎಚ್‌.ಡಿ.ಕೋಟೆ: ಸರ್ಕಾರಿ ಮೆಟ್ರಿಕ್‌ ನಂತರದ ಗಿರಿಜನ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕರೆಂಟ್‌ ಕಟ್‌ ಮಾಡಿದ ಪರಿಣಾಮ ವಿದ್ಯಾರ್ಥಿನಿ ಯರು ಕಗ್ಗತ್ತಲಲ್ಲಿ ರಾತ್ರಿ ಕಳೆಯುವುದೇ ಅಲ್ಲದೆ ಶೌಚಾಲಯ, ಸ್ನಾನಕ್ಕೂ ನೀರಿಲ್ಲದೆ ಪರಿತಪಿಸುವಂತಾಗಿದೆ.

ಕೋಟೆ ಪಟ್ಟಣದ ಸರ್ಕಾರಿ ಮೆಟ್ರಿಕ್‌ ನಂತರದ ಗಿರಿಜನ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ 60 ಬಾಲಕಿಯರಿದ್ದಾರೆ. ಸ್ವಂತ ಕಟ್ಟಡ ಇಲ್ಲದ ಕಾರಣ ಬಾಡಿಗೆ ಆಧಾರದ ಮೇಲೆ ಕೊಠಡಿಯೊಂದರಲ್ಲಿ ವಿದ್ಯಾರ್ಥಿ ನಿಲಯ ಕಾರ್ಯನಿರ್ವಹಿಸುತ್ತಿದೆ. ಪ್ರತಿ ತಿಂಗಳೂ ಬಳಕೆ ಮಾಡಿದ ವಿದ್ಯುತ್‌ ಶುಲ್ಕ ಕೂಡ ತಪ್ಪದೇ ಪಾವತಿಸಿದೆ.

ಬಾಡಿಗೆ ಕಟ್ಟಡದಲ್ಲಿ ಇನ್ನಿತರ ಕೊಠಡಿ, ಮಳಿಗೆಗಳು ಇದ್ದು, ಅವರು ಬಳಕೆ ಮಾಡಿದ ವಿದ್ಯುತ್‌ ಶುಲ್ಕ ಪಾವತಿಸಿಲ್ಲ ಎಂಬ ಕಾರಣದಿಂದ ವಿದ್ಯಾರ್ಥಿನಿಲಯದ ಕರೆಂಟ್‌ ಕಟ್‌ ಮಾಡಲಾಗಿದೆ. ಒಂದೇ ಕಟ್ಟಡದ ಎಲ್ಲಾ ಪ್ರತ್ಯೇಕ ಮಳಿಗೆಗಳಿಗೂ ಪ್ರತ್ಯೇಕವಾಗಿಯೇ ಮೀಟರ್‌ ಅಳವಡಿಸಲಾಗಿದೆ ಯಾದರೂ ಒಂದೇ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ.

ಭಾನುವಾರ ಮಧ್ಯಾಹ್ನದ ವೇಳೆ ವಿದ್ಯುತ್‌ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ತನಕ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ. ಹಾಸ್ಟೆಲ್‌ ನ ವಿದ್ಯಾರ್ಥಿನಿಯರು ಭಾನುವಾರದಿಂದ ರಾತ್ರಿ ಮೊಂಬತ್ತಿಗಳನ್ನು ಹೊತ್ತಿಸಿಕೊಂಡು ರಾತ್ರಿ ಕಳೆದಿದ್ದಾರೆ. ವಿದ್ಯುತ್‌ ಸಂಪರ್ಕ ಕಡಿತಗೊಂಡಿರುವುದರಿಂದ ಶೌಚಾಲಯದ ಬಳಕೆ, ನಿತ್ಯ ಸ್ನಾನ ಸೇರಿದಂತೆ ಇನ್ನಿ ತರ ದೈನಂದಿನ ಬಳಕೆಗೆ ನೀರಿಲ್ಲದೆ ವಿದ್ಯಾರ್ಥಿ ನಿಯರು ಪರದಾಡುವಂತಾಗಿದೆ. ನೀರೇ ಇಲ್ಲದೇ ಇರುವುದರಿಂದ ವಿದ್ಯಾರ್ಥಿನಿಲಯದ ಶೌಚಾ ಲಯ ಗಬ್ಬೆದ್ದು ನಾರುತ್ತಿದೆ.

ಇದನ್ನೂ ಓದಿ;- ಸಂವಿಧಾನ ನಮಗೆಲ್ಲ ದಾರಿದೀಪ

ಮಾಸಿಕ 35 ಸಾವಿರ ರೂ. ವಿದ್ಯುತ್‌ ಶುಲ್ಕವನ್ನು ತಪ್ಪದೇ ಪಡೆದುಕೊ ಳ್ಳುವ ಮಾಲಿಕರು ವಿದ್ಯುತ್‌ ಕಡಿತಗೊಂಡು 2 ದಿನಗಳಾದರೂ ಹಾಸ್ಟೆಲ್‌ಗೆ ಮರು ಸಂಪರ್ಕಕ್ಕೆ ತಲೆ ಕೆಡಿಸಿಕೊಂಡಿಲ್ಲ. ಯಾರೋ ಪಾವತಿಸದೇ ಉಳಿಸಿಕೊಂಡಿರುವ ವಿದ್ಯುತ್‌ ಬಾಕಿ ಹಣಕ್ಕೆ ಪ್ರತಿ ತಿಂಗಳೂ ತಪ್ಪದೇ ಹಣ ಪಾವತಿಸಿರುವುದೇ ಅಲ್ಲದೆ ಪ್ರತ್ಯೇಕ ಮೀಟರ್‌ ಅಳವಡಿಕೆಯಾಗಿದ್ದರೂ ಈ ರೀತಿ ವಿದ್ಯುತ್‌ ಕಡಿತಗೊಳಿಸುವುದು ತರವಲ್ಲ.

ಸಂಬಂಧ ಪಟ್ಟವರು ಇನ್ನಾದರೂ ಇತ್ತ ಗಮನ ಹರಿಸಿ ಯಾರದೋ ಬಾಕಿ ಹಣಕ್ಕೆ ಸಂಪೂರ್ಣ ಹಣ ಪಾವತಿಸಿರುವ ಹೆಣ್ಣು ಮಕ್ಕಳ ವಿದ್ಯಾರ್ಥಿನಿಲಯದ ವಿದ್ಯುತ್‌ ಕಡಿತಗೊಳಿಸುವುದು ಎಷ್ಟರಮಟ್ಟಿಗೆ ಸರಿ, ಗ್ರಾಮ ತೊರೆದು ಪೋಷಕರನ್ನು ಬಿಟ್ಟು ವಿದ್ಯಾರ್ಥಿನಿಲಯದಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿನಿಯರ ಪಾಡೇನು ಯೋಚಿಸಿ ಎಂದು ಬಾಲಕಿಯರು ಅಳಲು ತೋಡಿಕೊಂಡಿದ್ದಾರೆ.

ಮೊಂಬತ್ತಿ ಹಚ್ಚಿ ರಾತ್ರಿ ಕಳೆದಿದ್ದೇವೆ:

ಹಾಸ್ಟೆಲ್‌ನ ಬಾಲಕಿಯರ ಅಳಲು ವಿದ್ಯಾರ್ಥಿನಿಲಯಕ್ಕೆ ಭಾನುವಾರದಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದಾರೆ. ಸೋಮವಾರ ಸಂಜೆಯಾದರೂ ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ, ರಾತ್ರಿಯೇನೂ ಮೊಂಬತ್ತಿ ಬೆಳಕಿನಲ್ಲಿ ದಿನ ಕಳೆದಿದ್ದಾಯಿತು. ಶೌಚಾಲಯ, ಸ್ನಾನ ಸೇರಿದಂತೆ ನಿತ್ಯ ಕರ್ಮದ ಬಳಕೆಗೆ ನೀರಿಲ್ಲದೆ ಪರದಾಡುವ ಸ್ಥಿತಿ ಇದೆ ಎಂದು ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.

“ಬಾಲಕಿಯರ ವಿದ್ಯಾರ್ಥಿನಿಲಯದ ವಿದ್ಯುತ್‌ ಸಂಪರ್ಕ ಕಡಿತಗೊಳಿಸಿರುವ ವಿಚಾರ ನನಗೆ ತಿಳಿದಿಲ್ಲ. ವಿದ್ಯಾರ್ಥಿನಿಲಯದ ವಿದ್ಯುತ್‌ ಶುಲ್ಕ ಸಂಪೂರ್ಣವಾಗಿ ನಾವು ಪಾವತಿಸಿದ್ದೇವೆ. ಹಾಸ್ಟೆಲ್‌ ಮೇಲ್ವಿಚಾರಕರಿಂದ ಮಾಹಿತಿ ಪಡೆದುಕೊಂಡು ಕ್ರಮವಹಿಸುತ್ತೇನೆ.” ನಾರಾಯಣಸ್ವಾಮಿ, ತಾಲೂಕು ಗಿರಿಜನ ಅಭಿವೃದ್ಧಿ ಅಧಿಕಾರಿ.

– ಎಚ್‌.ಬಿ.ಬಸವರಾಜು

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.