ಶಾಲೆ ಮಕ್ಕಳು ಬಳಸುವ ನೀರಿನ ಟ್ಯಾಂಕ್‌ಗೆ ವಿಷ!


Team Udayavani, Jun 18, 2019, 3:00 AM IST

shalemakk

ಹುಣಸೂರು: ವಸತಿ ಶಾಲೆಯ ಓವರ್‌ಹೆಡ್‌ ಟ್ಯಾಂಕ್‌ನ ನೀರಿಗೆ ದುಷ್ಕರ್ಮಿಗಳು ವಿಷ ಬೆರೆಸಿರುವ ಆಘಾತಕಾರಿ ಘಟನೆ ಸಂಭವಿಸಿದ್ದು, ವಿಷ ಮಿಶ್ರಿತ ನೀರಿನ ವಾಸನೆಯಿಂದ ಎಚ್ಚೆತ್ತ ಸಿಬ್ಬಂದಿಗಳಿಂದಾಗಿ ಭಾರೀ ಅನಾಹುತ ತಪ್ಪಿದೆ. ತಾಲೂಕಿನ ಗಾವಡಗೆರೆಯ ಗುರುಲಿಂಗ ಜಂಗಮ ಮಠಕ್ಕೆ ಸೇರಿದ ವಸತಿ ಶಾಲೆಯಲ್ಲಿ ಘಟನೆ ಜರುಗಿದ್ದು, ಗ್ರಾಮಾಂತರ ಪೊಲೀಸರಿಗೆ ರಕ್ಷಣೆ ಒದಗಿಸುವಂತೆ ಶಾಲೆಯ ಆಡಳಿತಾಧಿಕಾರಿ ದೂರು ನೀಡಿದ್ದಾರೆ.

ಘಟನೆ ವಿವರ: ಶ್ರೀ ಮಠದ ವಸತಿ ಉಚಿತ ಶಾಲೆಯಲ್ಲಿ 60 ಹೆಣ್ಣು ಮಕ್ಕಳು ಸೇರಿದಂತೆ ರಾಜ್ಯದ ವಿವಿಧೆಡೆಯ 360 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಸತಿ ಶಾಲೆಯಲ್ಲಿ ಭಾನುವಾರ ಸಂಜೆ ಎಂದಿನಂತೆ ರಾತ್ರಿ ಊಟಕ್ಕೆ ಅಡುಗೆ ಮಾಡಲು ಅಡುಗೆ ಸಿಬ್ಬಂದಿ ಅನ್ನ ತಯಾರಿಸುವ ಬಾಯ್ಲರ್‌ಗೆ ನೀರು ತುಂಬಿಸುವ ವೇಳೆ ನೀರಿನ ವಾಸನೆ ಬಂದಿದೆ. ಅನುಮಾನಗೊಂಡು ಮಠದಲ್ಲೇ ಇದ್ದ ನಟರಾಜಸ್ವಾಮೀಜಿ ಅವರಿಗೆ ಈ ವಿಷ ತಿಳಿಸಿದ್ದಾರೆ.

ಅವರೂ ಕೂಡ ಪರಿಶೀಲಿಸಿದಾಗಲೂ ವಾಸನೆ ಬಂದಿದೆ. ನಂತರ ಮಠದ ಮತ್ತೂಂದು ಬದಿಯಲ್ಲಿರುವ ಟ್ಯಾಂಕ್‌ ನೀರನ್ನು ಸಹ ಪರಿಶೀಲಿಸಿದಾಗ ಆ ನೀರು ಕೂಡ ವಾಸನೆ ಮಿಶ್ರಿತವಾಗಿದ್ದರಿಂದ ತಕ್ಷಣವೇ ಅಡುಗೆ ತಯಾರಿ ನಿಲ್ಲಿಸಿ, ಸಂಬಂಧಿಸಿದವರಿಗೆ ಮಾಹಿತಿ ನೀಡಿದ್ದಾರೆ.

ಎಸ್‌ಐ ಪರಿಶೀಲನೆ: ಸ್ಥಳಕ್ಕೆ ಗ್ರಾಮಾಂತರ ಠಾಣೆ ಎಸ್‌ಐ ಶಿವಪ್ರಕಾಶ್‌ ಹಾಗೂ ಆಹಾರ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ, ನೀರಿನ ಸ್ಯಾಂಪಲ್‌ ಸಂಗ್ರಹಿಸಿ, ಯಾವುದೇ ಕಾರಣಕ್ಕೂ ನೀರನ್ನು ಬಳಸದಂತೆ ಸೂಚಿಸಿ ನೀರನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಈ ಸಂಬಂಧ ಮಠದ ವತಿಯಿಂದ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಪ್ರತ್ಯೇಕ ಅಡುಗೆ: ಘಟನೆ ನಂತರ ಅಡುಗೆಗೆ ಬಳಸಿದ್ದ ತರಕಾರಿ ಮತ್ತಿತರ ಪದಾರ್ಥಗಳನ್ನು ಬಿಸಾಡಿದ್ದು, ಮಠದ ಆವರಣದಲ್ಲಿದ್ದ ಮತ್ತೂಂದು ಬೋರ್‌ವೆಲ್‌ನಿಂದ ನೀರನ್ನು ಪಡೆದು ಪ್ರತ್ಯೇಕ ಅಡುಗೆ ಮಾಡಿಸಿ, ಮಕ್ಕಳಿಗೆ ಬಡಿಸಲಾಗಿದೆ. ಅಲ್ಲದೇ ಶೌಚಾಲಯ ಮತ್ತಿತರ ಬಳಕೆಗೆ ಟ್ಯಾಂಕರ್‌ ನೀರನ್ನು ಬಳಸಲಾಗುತ್ತಿದೆ ಎಂದು ವಸತಿ ಶಾಲೆಯ ಆಡಳಿತಾಧಿಕಾರಿ ಮಾಹಿತಿ ನೀಡಿದ್ದಾರೆ.

ಯಾರು ಯಾವ ಕಾರಣಕ್ಕಾಗಿ ಓವರ್‌ ಹೆಡ್‌ ಟ್ಯಾಂಕಿಗೆ ವಿಷ ಬೆರೆಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುವುದೆಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಇಲ್ಲ.
-ನಟರಾಜಸ್ವಾಮೀಜಿ, ಗುರುಲಿಂಗ ಜಂಗಮ ದೇವರ ಮಠ

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

Congress ಅಧಿಕಾರಕ್ಕೆ ಬಂದಾಗಲೆಲ್ಲಾ ಬರಗಾಲ ಬರುತ್ತೆ: ಎಚ್.ಡಿ.ಕುಮಾರಸ್ವಾಮಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.