ಮೈಸೂರು ಶಿಲ್ಪಿಯಿಂದ ಕೇದಾರನಾಥದಲ್ಲಿ ಶಂಕರಾಚಾರ್ಯ ಪ್ರತಿಮೆ


Team Udayavani, Nov 5, 2021, 7:00 AM IST

ಮೈಸೂರು ಶಿಲ್ಪಿಯಿಂದ ಕೇದಾರನಾಥದಲ್ಲಿ ಶಂಕರಾಚಾರ್ಯ ಪ್ರತಿಮೆ

ಮೈಸೂರು: “ಈ ಪವಿತ್ರ ಕಾರ್ಯದಲ್ಲಿ ನಾನು ನಿಮಿತ್ತ ಮಾತ್ರ. ಆದಿಗುರು ಶಂಕರಾಚಾರ್ಯರು ನನ್ನ ಕೈಯಲ್ಲಿ ಈ ಕಾರ್ಯವನ್ನು ಮಾಡಿಸಿಕೊಂಡಿದ್ದಾರೆ’ -ಹೀಗೆ ಅತ್ಯಂತ ವಿನಯದಿಂದ ಹೇಳಿಕೊಂಡಿದ್ದಾರೆ ಮೈಸೂರಿನ ಹೆಸರಾಂತ ಶಿಲ್ಪಿ ಅರುಣ್‌ ಯೋಗಿರಾಜ್‌.

ಅದ್ವೈತ ಸಿದ್ದಾಂತದ ಪ್ರತಿಪಾದಕರಾದ ಶಂಕರಾಚಾರ್ಯರ 12 ಅಡಿ ಎತ್ತರದ ಕುಳಿತಿರುವ ಭಂಗಿಯ ಸುಂದರ, ಬೃಹತ್‌ ಮೂರ್ತಿ ಉತ್ತರಾಖಂಡದ ಕೇದಾರನಾಥದಲ್ಲಿ ಶುಕ್ರವಾರ (ನ.5) ನೆಲೆಗೊಳ್ಳಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಶಂಕರಾಚಾರ್ಯರ ಪುನರ್‌ ನಿರ್ಮಾಣ ಸಮಾಧಿಯನ್ನು ಕೇದಾರನಾಥದಲ್ಲಿ ಶುಕ್ರವಾರ ಉದ್ಘಾಟಿಸಿ,  ಮೂರ್ತಿಯನ್ನು  ಅನಾವರಣಗೊಳಿಸುವರು. ಈ ಮೂರ್ತಿಯನ್ನು ಕೆತ್ತಿರುವುದು ಯುವ ಶಿಲ್ಪಿ ಮೈಸೂರಿನ ಅರುಣ್‌ ಯೋಗಿರಾಜ್‌.

ಮೂರ್ತಿಯನ್ನು ಕೆತ್ತುವ ದೊಡ್ಡ ಜವಾಬ್ದಾರಿ ನನ್ನ ಮೇಲಿತ್ತು. ಕೇದಾರನಾಥವು ಪ್ರಧಾನಿ ನರೇಂದ್ರ ಮೋದಿ  ಮನಸ್ಸಿಗೆ ತುಂಬಾ ಹತ್ತಿರವಾದ ಪವಿತ್ರ ಸ್ಥಳ. ಆದಿಶಂಕರರ ಮೂರ್ತಿ ಕೆತ್ತುವಾಗ ಕಲ್ಲಿಗೆ ಬಿದ್ದ ಒಂದೊಂದು ಏಟು ಇತಿಹಾಸ ಸೃಷ್ಟಿಸುತ್ತದೆ ಎಂಬ ಅರಿವು ನನಗಿತ್ತು. ಶಂಕರರೇ ನನ್ನ ಕೈಯಲ್ಲಿ ಈ ಕಾರ್ಯ ಮಾಡಿಸುತ್ತಿದ್ದಾರೆ ಎಂಬ  ಭಾವನೆಯಿತ್ತು. “ನೀವು ಶಿಲೆಯಲ್ಲಿ ಹೇಗೆ ಬರುತ್ತೀರೋ ಬನ್ನಿ’ ಎಂದು  ಶಂಕರರನ್ನು ಮನದಲ್ಲೇ ಭಕ್ತಿಯಿಂದ ನೆನೆದು ತಾಧ್ಯಾತ್ಮ ಭಾವದಿಂದ ಪ್ರತಿದಿನ ಕೆತ್ತನೆ ಕೆಲಸ ಮಾಡುತ್ತಿದ್ದೆ. ಶಿಲೆ ಜತೆ ದಿನವೂ ನನ್ನ ಮಾತುಕತೆ ನಡೆಯುತ್ತಿತ್ತು  ಎಂದು ಅರುಣ್‌ ಯೋಗಿರಾಜ್‌  “ಉದಯವಾಣಿ’ಗೆ ತಿಳಿಸಿದರು.

ನಾನು  11ನೇ ವಯಸ್ಸಿನಿಂದಲೇ ಶಿಲೆಯ ಕೆತ್ತನೆ ಕೆಲಸ ಆರಂಭಿಸಿದ್ದು, ತಂದೆಯ ಒಂದು ಮಾತನ್ನು  ಸದಾ  ಮನಸ್ಸಿನಲ್ಲಿಟ್ಟುಕೊಂಡಿದ್ದೇನೆ.  “ನೋಡು ಮಗ.. ಕಲ್ಲು ನಾವು ಹೇಳುವ ರೀತಿ ಕೇಳಬೇಕು’  ಎನ್ನುತ್ತಿದ್ದರು ಅಪ್ಪ. ಶಂಕರಾಚಾರ್ಯರ ಕೃಪೆಯಿಂದ ಬಹಳ ಸುಲಭವಾಗಿ ಕೆತ್ತನೆ ಕಾರ್ಯ ನಡೆಯಿತು’ ಎನ್ನುತ್ತಾರೆ 37 ವರ್ಷದ ಅರುಣ್‌ ಯೋಗಿರಾಜ್‌.

ಕೃಷ್ಣ ಶಿಲೆ ಬಳಕೆ:

ಅರುಣ್‌ ಯೋಗಿರಾಜ್‌  ಸಾರಥ್ಯದಲ್ಲಿ ಅವರ ತಂಡದ  ಏಳು ಮಂದಿ  ಮೂರ್ತಿ ಕೆತ್ತನೆಯಲ್ಲಿ ತೊಡಗಿಸಿಕೊಂಡಿದ್ದು, 9 ತಿಂಗಳಲ್ಲಿ ಮೂರ್ತಿ ಸಿದ್ಧಗೊಂಡಿದೆ. ಇದಕ್ಕೆ  80 ಟನ್‌ ಕೃಷ್ಣ ಶಿಲೆ ಬಳಕೆಯಾಗಿದೆ. ಪೀಠ ಮತ್ತು ಮೂರ್ತಿಯನ್ನು  ಪ್ರತ್ಯೇಕವಾಗಿ ಕೆತ್ತಿ ಜೋಡಿಸಲಾಗಿದೆ. ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಮೂರ್ತಿ ಕೆತ್ತನೆ ಕಾರ್ಯ ಆರಂಭವಾಗಿ ಈ ವರ್ಷದ ಜೂನ್‌ನಲ್ಲಿ ಪೂರ್ಣಗೊಂಡಿತ್ತು.

ಮೈಸೂರಿನಲ್ಲಿ ಮೂರ್ತಿ ಕೆತ್ತನೆ ಕಾರ್ಯ ಪೂರ್ಣಗೊಂಡ ಬಳಿಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಉತ್ತರಾಖಂಡದ ಚಮೌಲಿಗೆ  ವಿಮಾನದಲ್ಲಿ ಮೂರ್ತಿಯನ್ನು ಕಳುಹಿಸಲಾಯಿತು. ಚಮೌಲಿಯಿಂದ ಚಿನೂಕ್‌ ಹೆಲಿಕಾಪ್ಟರ್‌ ಮೂಲಕ ಕೇದಾರನಾಥ ತಲುಪಿತ್ತು.

28 ಟನ್‌ ತೂಕ :

ಮೂರ್ತಿಯು 28 ಟನ್‌ ತೂಕವಿದೆ.  ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಲಭ್ಯವಿರುವ ಕೃಷ್ಣ ಶಿಲೆಯಿಂದ ಇದನ್ನು ಕೆತ್ತಲಾಗಿದೆ. ಕೃಷ್ಣ ಶಿಲೆಯ ವೈಶಿಷ್ಟ್ಯವೆಂದರೆ ಇದು ಅಗ್ನಿ, ಆ್ಯಸಿಡ್‌, ವಾಯು, ನೀರು ಮುಂತಾದವುಗಳಿಂದ ರಕ್ಷಣೆ ನೀಡುತ್ತದೆ.

ಸಿದ್ಧಗಂಗಾ ಕ್ಷೇತ್ರ ಸಮೀಪದ ಹರಳೂರು ಗ್ರಾಮದಲ್ಲಿರುವ ಲಿಂಗೈಕ್ಯ ಸಿದ್ಧಗಂಗಾ ಶ್ರೀಗಳ ಪ್ರತಿಮೆ, ಮೈಸೂರಿನ ಶ್ರೀ ಜಯಚಾಮರಾಜ ಒಡೆಯರ್‌ ಪ್ರತಿಮೆ, ಮೈಸೂರಿನ ಪುರಭವನ ಮುಂಭಾಗದ ಡಾ| ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆ, ರೈಲ್ವೆ ಮ್ಯೂಸಿಯಂನಲ್ಲಿರುವ ಕಾಮನ್‌ಮನ್‌ ಪ್ರತಿಮೆ  ಮುಂತಾದವು   ಅರುಣ್‌ ಯೋಗಿರಾಜ್‌ ಅವರ ಕೈಯಿಂದ ಅರಳಿದವು.

ಕೇಂದ್ರ ಸರಕಾರದ  ಈ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ  ಶಂಕರಾಚಾರ್ಯರ ಮೂರ್ತಿ ಕೆತ್ತನೆಗೆ ಪ್ರತಿ ರಾಜ್ಯಗಳಿಂದಲೂ ಕಲಾವಿದರ ಆಯ್ಕೆಯಾಗಿತ್ತು.  ಅರುಣ್‌ ಯೋಗಿರಾಜ್‌ ಅವರು ಎರಡು ಅಡಿಯಲ್ಲಿ ಮಾದರಿ ಮೂರ್ತಿ ತಯಾರಿಸಿ ಕಳುಹಿಸಿದ್ದರು. ಅದನ್ನು ಪರಿಶೀಲಿಸಿದ ಬಳಿಕ ಅರುಣ್‌ ಯೋಗಿರಾಜ್‌ ಈ ಕಾರ್ಯಕ್ಕೆ ಆಯ್ಕೆಯಾಗಿದ್ದರು.   ಇವರ ತಂದೆ ದಿ| ಯೋಗಿರಾಜ್‌ ಹೆಸರಾಂತ ಶಿಲ್ಪ ಕಲಾವಿದರಾಗಿದ್ದು, ರಾಜ್ಯ ಸರಕಾರದ ಅಮರಶಿಲ್ಪಿ ಜಕಣಾಚಾರಿ ಪ್ರಶಸ್ತಿ ಪುರಸ್ಕೃತರು. ತಂದೆಯೇ  ಅರುಣ್‌ಗೆ ಮೊದಲ ಗುರು.

-ಕೂಡ್ಲಿ ಗುರುರಾಜ

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.