ಗಿಡಮರ ಉಳಿಸಿ ಬೆಳೆಸಲು ಸೀಡ್‌ಬಾಲ್‌ ಸಹಕಾರಿ


Team Udayavani, May 29, 2017, 1:12 PM IST

mys4.jpg

ಹುಣಸೂರು: ರಾಜ್ಯ ಸರ್ಕಾರದ ಮಹತ್ವಾಂಕಾಂಕ್ಷೆಯ ಯೋಜನೆಗಳಲ್ಲೊಂದಾದ ಸೀಡ್‌ಬಾಲ್‌ ನಿಂದ ಸಸಿ ತಯಾರಿಕೆಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಎರಡನೇ ಬಾರಿಗೆ ಅರಣ್ಯ ಇಲಾಖೆಯ ಕೇಂದ್ರೀಯ ಸಸ್ಯ ಕ್ಷೇತ್ರದಲ್ಲಿ ಹಸಿರು ಕ್ರಾಂತಿಯ ಸೀಡ್‌ ಬಾಲ್‌(ಮಣ್ಣುನುಂಡೆ) ತಯಾರಿಸುವ ಕಾರ್ಯಾಗಾರ ನಡೆಯಿತು.

ನಗರದ ಪ್ರಾದೇಶಿಕ ಅರಣ್ಯ ವಿಭಾಗದ ಉಪಅರಣ್ಯ ಸಂರಕ್ಷಣಾಕಾರಿಗಳ ಕಚೇರಿ ಆವರಣದಲ್ಲಿ ಬನ್ನಿಕುಪ್ಪೆ ಜಿಪಂ ವ್ಯಾಪ್ತಿಯ ಗ್ರಾಪಂಗಳು, ಸ್ನೇಹ ಜೀವಿಸಂಸ್ಥೆ, ಗೋಗ್ರೀನ್‌ಕ್ಲಬ್‌, ಅರಣ್ಯಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೀಡ್‌ಬಾಲ್‌ ಹಸಿರು ಕ್ರಾಂತಿಯಲ್ಲಿ ನೆರೆದಿದ್ದ ಮಹಿಳೆಯರು ಸೇರಿದಂತೆ ನೂರಕ್ಕೂ ಹೆಚ್ಚು ಮಂದಿ ಸುಮಾರು 7 ಸಾವಿರಕ್ಕೂ ಹೆಚ್ಚು ಸೀಡ್‌ಬಾಲ್‌ ತಯಾರಿಸಿದರು.

ಜಿಪಂ ಸದಸ್ಯೆ ಡಾ.ಪುಷ್ಪ ಅಮರ್‌ನಾಥ್‌ ಮಾತನಾಡಿ, ಕಳೆದ ಭೂಮಿ ದಿನಾಚರಣೆಯ ಅಂಗವಾಗಿ ಲಕ್ಷಕ್ಕೂ ಹೆಚ್ಚು ಮಣ್ಣಿನುಂಡೆಗಳನ್ನು ತಯಾರಿಸಿ ತಾಲೂಕಿನ ವಿವಿಧ ಕೆರೆ ಅಂಗಳದಲ್ಲಿ ಹಾಕಲಾಗಿದೆ. ಈ ವರ್ಷ ಉತ್ತಮ ಮಳೆಯಾಗಿದ್ದು, ಕೆಲವು ಮೊಳಕೆಯೊಡೆದಿರುವುದನ್ನು ಮನಗಂಡು ಇದೀಗ ಮತ್ತೆ ಸೀಡ್‌ಬಾಲ್‌ ತಯಾರಿಸಿ ಅವಶ್ಯವಿರುವೆಡೆ ಹಾಕಲಾಗುವುದು.

ಇದರಿಂದ ಕಡಿಮೆ ಖರ್ಚಿನಲ್ಲಿ ಗಿಡಮರ ಉಳಿಸಿ ಪರಿಸರಕ್ಕೆ ಕೊಡಬಹುದಾದ ದೊಡ್ಡ ಕಾಣಿಕೆ ಎಂದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಕೃಷ್ಣಕುಮಾರ್‌ ಮಾತನಾಡಿ, ಕಡಿಮೆ ಖರ್ಚಿನಲ್ಲಿ ನಮ್ಮ ಪ್ರಾಚೀನರು ಬಳಸುತ್ತಿದ್ದ ಮಣ್ಣಿನುಂಡೆ ಮೂಲಕ ಸಸಿ ಬೆಳೆಸುವ ಪ್ರವೃತ್ತಿ ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯಕ್ರಮ ಇದಾಗಿದ್ದು, ಪಿಡಿಒಗಳು ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ಎನ್‌ಆರ್‌ಇಜಿ ಯೋಜನೆಯಡಿಯಲ್ಲಿ  ಈ ಯೋಜನೆ ಸಾಕಾರಗೊಳಿಸಿ,

ರೈತರು, ವಿದ್ಯಾರ್ಥಿಗಳು, ಮಹಿಳಾ ಸ್ವಸಹಾಯ ಸಂಘಗಳು ಹಾಗೂ ನಾಗರಿಕರು ಇಂತಹ ಪರಿಸರ ಪೂರಕ ಕಾ  ರ್ಯಕ್ರಮಗಳಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು. ಇಂದಿನ ಸೀಡ್‌ಬಾಲ್‌ನಲ್ಲಿ ಜೆವಿಕ ಇಂಧನಕ್ಕೆ ಪೂರಕವಾದ ಹೊಂಗೆ ಸೇರಿದಂತೆ ಹುಣಸೇ, ನೆಲ್ಲಿ, ಬಸರಿ, ನೇರಳೆ ಹೀಗೆ ಅನೇಕ ಬೀಜಗಳನ್ನು ಮಣ್ಣಿನುಂಡೆಯಲ್ಲಿ ಹಾಕಿದರು.

ಮಣ್ಣಿನುಂಡೆ: ರೈತರು ಮಳೆಗಾಲಕ್ಕೂ ಮುನ್ನ ಸಸಿ ತಯಾರಿಸುವ ಸಲುವಾಗಿ ಕೆಮ್ಮಣ್ಣನ್ನು ಸಗಣಿ, ಗೋ ಮೂತ್ರದೊಂದಿಗೆ ಮಿಶ್ರಮಾಡಿ  ಮೂರ್‍ನಾಲ್ಕು ದಿನಗಳ ಕಾಲ ಒಂದೆಡೆ ರಾಶಿಹಾಕಿದ ನಂತರ ಉಂಡೆ ಮಾಡಿಕೊಂಡು ಮಧ್ಯದಲ್ಲಿ ತಮ್ಮ ಜಮೀನಿಗೆ ಬೇಕಾದ ಸಸಿಗಳ ಬೀಜವನ್ನು ಉಂಡೆಯೊಳಗೆ ಹಾಕಿ ನಂತರ ಉಂಡೆಗಳನ್ನು ಒಂದೆಡೆ ಶೇಖರಿಸಿ, ಸಸಿ ಮೊಳಕೆಯೊಡೆದ ನಂತರ ಅಗತ್ಯವಿರುವ ಕಡೆಗಳಲ್ಲಿ ಹಾಕಿ ಪೋಷಿಸುವುದೇ ಸೀಡ್‌ಬಾಲ್‌.

ಅಧಿಕಾರಿಗಳು, ಸ್ವಯಂ ಸೇವಕರೂ ಭಾಗಿ: ಈ ಕಾರ್ಯಕ್ರಮದಲ್ಲಿ ಗೋಗ್ರೀನ್‌ ಸಂಸ್ಥೆ, ಸ್ನೇಹಜೀವಿ ಸಂಸ್ಥೆ, ಅರಣ್ಯ ಸಿಬ್ಬಂದಿ, ಮಹಿಳಾ ಸಂಘಗಳವರ ಜೊತೆಗೆ ಪಿಡಿಒಗಳಾದ ನರಹರಿ, ಶ್ರೀಶೈಲ, ಸೋಮಣ್ಣ, ಭವ್ಯ ಹಾಗೂ ಗ್ರಾಪಂ ಸಿಬ್ಬಂದಿ ಹಾಗೂ ಕೆಲ ಸ್ವಯಂಸೇವಕರು ಸಹ ಮಣ್ಣಿನುಂಡೆ ಮಾಡಿ ಬೀಜ ನೆಟ್ಟು, ಪರಿಸರ ಪ್ರೀತಿ ಮೆರೆದರು.

ಮೊಳಕೆ ಕಂಡು ಹರ್ಷ: ವಿಶ್ವ ಭೂಮಿ ದಿನಾಚರಣೆಯಂದು ವಿವಿಧ ತಳಿಗಳ ಬೀಜಹಾಕಿ, ತಯಾರಿಸಿದ್ದ ಮಣ್ಣಿನುಂಡೆಯನ್ನು ಪ್ರಾಯೋಗಿಕವಾಗಿ ಅರಣ್ಯ ಇಲಾಖೆ ಆವರಣದಲ್ಲಿ ಹಾಕಲಾಗಿತ್ತು. ಮಳೆ ಬೀಳುತ್ತಿದ್ದಂತೆ ಅಲ್ಲಲ್ಲಿ ನೂರಾರು ಸೀಡ್‌ ಬಾಲ್‌ ಗಳಿಂದ ಸಸಿಯ ಮೊಳಕೆಯಾಗಿದ್ದನ್ನು ಅರಣ್ಯ ಇಲಾಖೆಯ ಸಸಿ ಮಡಿ ನಿರ್ವಹಣೆಯ ನೌಕರ ರಮೇಶ ತೋರಿಸಿದ್ದನ್ನು ಕಣ್ತುಂಬಿಕೊಂಡ ಜಿಪಂ ಸದಸ್ಯೆ ಡಾ.ಪುಷ್ಪ, ಇಒ ಕಷ್ಣಕುಮಾರ್‌ ಸೇರಿದಂತೆ ಅನೇಕರು ಪುಳಕಿತಗೊಂಡು ಸೀಡ್‌ಬಾಲ್‌ ತಯಾರಿಕೆಯ ಸಾರ್ಥಕತೆಯಲ್ಲಿ ಮಿಂದೆದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.