ಬೇಡಿಕೆಗಳ ಈಡೇರಿಕೆಗಾಗಿ ಸರಣಿ ಪ್ರತಿಭಟನೆ


Team Udayavani, Jun 21, 2018, 12:36 PM IST

mysooru.jpg

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ಕಮ್ಯುನಿಷ್ಟ್ ಪಕ್ಷ, ಪಡುವಾರಹಳ್ಳಿ
ಶ್ರೀಗಂಧ ಯುವಕರ ಸಂಘ ಹಾಗೂ ರಾಜ್ಯ ಡಾ.ಬಿ.ಆರ್‌.ಅಂಬೇಡ್ಕರ್‌ ಆದಿ ದ್ರಾವಿಡ ಯುವಕರ ಅಭಿವೃದ್ಧಿ ಮಹಾಸಂಘದ ಸದಸ್ಯರು ನಗರದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆಗೆ ಖಂಡನೆ: ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ದಿನಬಳಕೆ ವಸ್ತುಗಳು ಹಾಗೂ ತೈಲಬೆಲೆ ಏರಿಕೆ ಖಂಡಿಸಿ ಭಾರತ ಕಮ್ಯುನಿಷ್ಟ್ ಪಕ್ಷದ ಸದಸ್ಯರು ನಗರದ ನ್ಯಾಯಾಲಯದ ಎದುರಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. 

ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿ ನಿಂದ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡುವ ಭರವಸೆ ನೀಡಿ, ಇದೀಗ ಭರವಸೆ ಈಡೇರಿಸುವಲ್ಲಿ ವಿಫ‌ಲವಾಗಿದೆ. ಇದೀಗ ತೈಲಬೆಲೆಯೂ ಗಗನಕ್ಕೇರಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ಬೆಲೆ ಇಳಿಕೆ ಮಾಡಲು ಯಾವ ಕ್ರಮಗಳನ್ನೂ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ಕೂಡಲೇ ದಿನಬಳಕೆ ವಸ್ತುಗಳು ಹಾಗೂ ತೈಲಬೆಲೆ ಇಳಿಸಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಪಿಐ ಕಾರ್ಯದರ್ಶಿ ಎಚ್‌.ಆರ್‌. ಶೇಷಾದ್ರಿ, ಸಹ ಕಾರ್ಯದರ್ಶಿ ರಾಜು, ಎಚ್‌.ಬಿ.
ರಾಮಕೃಷ್ಣ, ಕೆ.ಎಸ್‌.ರೇವಣ್ಣ, ಸೋಮರಾಜೇ ಅರಸ್‌, ಜಗನ್ನಾಥ್‌, ಎಂ.ಶಿವಣ್ಣ ಮತ್ತಿತರರಿದ್ದರು.

ಸ್ವಾಧೀನ ಪತ್ರ ವಿತರಿಸಿ: ನರ್ಮ್ ಯೋಜನೆಯಲ್ಲಿ ನಿರ್ಮಿಸಿರುವ ಮನೆಗಳ ಸ್ಥಿತಿ ದಯನೀಯವಾಗಿದ್ದು,
ಇಲ್ಲಿನ ನಿವಾಸಿಗಳಿಗೆ ಮನೆ ವಿತರಿಸಿ ಸ್ವಾಧೀನ ಪತ್ರ, ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ರಾಜ್ಯಡಾ.ಬಿ.ಆರ್‌. ಅಂಬೇಡ್ಕರ್‌ ಆದಿದ್ರಾವಿಡ ಯುವಕರ ಅಭಿವೃದ್ಧಿ ಮಹಾ ಸಂಘದ ಸದಸ್ಯರು ನಗರದ ಹೈವೇ ವೃತ್ತದ ಬಳಿಯ ಸ್ಲಂ ಬೋರ್ಡ್‌ ಎದುರು ಪ್ರತಿಭಟನೆ ನಡೆಸಿದರು.

ನಗರದಲ್ಲಿ ಸ್ಲಂಬೋರ್ಡ್‌ ವತಿಯಿಂದ ನರ್ಮ್ ಯೋಜನೆಯಲ್ಲಿ ನಿರ್ಮಿಸಿರುವ ಮನೆಗಳು ಹಾಳಾಗಿದ್ದು, ಮೂಲ ಸೌಕರ್ಯಗಳ ಕೊರತೆ ಇದೆ. ನರ್ಮ್ ಯೋಜನೆಯಲ್ಲಿ ಕಟ್ಟಿರುವ ಮನೆಗಳ ಪೈಪ್‌ಲೈನ್‌, ನೀರಿನ ಟ್ಯಾಂಕ್‌ಗಳು ಒಡೆದಿದ್ದು, ಇದರಿಂದಾಗಿ ಇಲ್ಲಿನ ನಿವಾಸಿಗಳು ಹೊರಗಿನಿಂದ ನೀರು ತಂದು ಉಪಯೋಗಿಸುವ ಸ್ಥಿತಿ ನಿರ್ಮಾಣವಾಗಿದೆ. ಬಡಾವಣೆ ಸುತ್ತಲೂ ಅಶುಚಿತ್ವ ತಾಂಡವವಾಡುತ್ತಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ.

ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಇತ್ತ ಗಮನವಹಿಸಿ, ಪೌರಕಾರ್ಮಿಕರು, ಬಡವರಿಗೆ ಮನೆ
ವಿತರಿಸಿ ಸ್ವಾಧೀನ ಪತ್ರ, ಹಕ್ಕುಪತ್ರ ವಿತರಿಸಬೇಕೆಂದು ಒತ್ತಾಯಿಸಿದರು.ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯ
ಎಸ್‌ಬಿಎಂ ಮಂಜು, ನಿಂಗಯ್ಯ, ಶ್ರೀನಿವಾಸಗೌಡ, ಮನೋಹರ್‌, ಫಾಲ್ಕನ್‌ ಬೋರೇಗೌಡ, ಕೃಷ್ಣ, ರಾಧಮ್ಮ,
ಜ್ಯೋತಿ, ಶ್ರೀರಂಗ ಮತ್ತಿತರರಿದ್ದರು.

ಅವ್ಯವಹಾರ ಆರೋಪ: ನಗರದ ಜಲದರ್ಶಿನಿ ಅತಿಥಿಗೃಹದ ಮುಂಭಾ ಗದ ನೇರ ರಸ್ತೆ ಕಾಮಗಾರಿಯಲ್ಲಿ
ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪಡುವಾರಹಳ್ಳಿ ಶ್ರೀಗಂಧ ಯುವಕರ ಸಂಘದ ಸದಸ್ಯರು ಮೈಸೂರು-ಹುಣಸೂರು ಮುಖ್ಯ ರಸ್ತೆಯ ಜಲದರ್ಶಿನಿ ಅತಿಥಿ ಗೃಹದ ಎದುರು ಪ್ರತಿಭಟನೆ ನಡೆಸಿದರು. 

ಕೇಂದ್ರ ಸರ್ಕಾರದ 12.50 ಕೋಟಿ ರೂ. ಅನುದಾನದಡಿಯಲ್ಲಿ ಪಿಡಬ್ಲೂಡಿ ಇಲಾಖೆ ಜಲದರ್ಶಿನಿ ಅತಿಥಿಗೃಹದ ಮುಂಭಾಗದಿಂದ ಪಡುವಾರಹಳ್ಳಿ ಸಿಗ್ನಲ್‌ವರೆಗಿನ ರಸ್ತೆಯನ್ನು ನೇರಗೊಳಿಸುವ ಕಾಮಗಾರಿ ಕೈಗೊಂಡಿದೆ. ಆದರೆ ಮೈಸೂರು ವಿವಿ ಹಾಗೂ ಮುಡಾ ಸಹಯೋಗದಲ್ಲಿ ಕೈಗೊಂಡಿರುವ ಕಾಮಗಾರಿಯಲ್ಲಿ ಎರಡು ಬದಿಯಲ್ಲಿ ರಸ್ತೆಯನ್ನು ವಿಸ್ತರಿಸಿ ನೇರಗೊಳಿಸಬೇಕಿದೆ.

ಆದರೆ ಹಾಲಿ ಇರುವ ರಸ್ತೆಯೊಂದಿಗೆ ಪಾದಚಾರಿ ಮಾರ್ಗವನ್ನು ಅಗೆದು ಹೊಸದಾಗಿ ಡಾಂಬರೀಕರಣ ಮಾಡಲಾಗುತ್ತಿದೆ. ಆ ಮೂಲಕ ಅವೈಜ್ಞಾನಿಕ ಕಾಮಗಾರಿ ನಡೆಸಲಾಗಿದೆ. ಹೀಗಾಗಿ ಸಂಬಂಧಪಟ್ಟ ಇಲಾಖೆ ಎಂಜಿನಿಯರ್‌ಗಳು ಕೋಟ್ಯಂತರ ರೂ. ದುರ್ಬಳಕೆ ಮಾಡಿಕೊಂಡಿದ್ದು, ಈ ಕುರಿತು ಪ್ರಧಾನಮಂತ್ರಿ ಕಚೇರಿಗೆ ಮತ್ತು ಮುಖ್ಯಮಂತ್ರಿಗಳಿಗೆ ಲಿಖೀತ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ, ಜವರೇ ಗೌಡ, ಕೆ.ಗೋಪಿ, ಎ.ಪಿ. ರಾಜೇಶ್‌ಗೌಡ
ಮತ್ತಿತರರು ಭಾಗವಹಿಸಿದ್ದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.