ಶಿಖಂಡಿ ರಾಜಕಾರಣ ನನ್ನದಲ್ಲ, ದುಷ್ಕೃತ್ಯಕ್ಕೆ ಅವಕಾಶ ನೀಡಲ್ಲ


Team Udayavani, Nov 17, 2019, 3:00 AM IST

shikhandi-rajaka

ಹುಣಸೂರು: ತಾಲೂಕಿನಲ್ಲಿ ಕಳೆದ 10 ವರ್ಷಗಳ ಕಾಲ ಅಮಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲು, ಅಟ್ರಾಸಿಟಿ, ಎತ್ತಿಕಟ್ಟಿ ಹೊಡೆದಾಡಿಸುವ ಆಡಳಿತವಿತ್ತು. ತಾವು ಶಾಸಕರಾಗಿದ್ದ ವೇಳೆ ಇಂತಹ ಯಾವುದೇ ದುಷ್ಕೃತ್ಯಗಳು ನಡೆಯಲು ಬಿಡಲಿಲ್ಲ. ಅಂತಹ ಶಿಖಂಡಿ ರಾಜಕಾರಣ ಕೂಡ ನನ್ನದಲ್ಲ ಎಂದು ಬಿಜೆಪಿ ಅಭ್ಯರ್ಥಿ ಎಚ್‌.ವಿಶ್ವನಾಥ್‌ ಹೇಳಿದರು.

ನಗರದ ರುಕ್ಮಿಣಿ ವಿಠಲಕಲ್ಯಾಣ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಬಿಜೆಪಿ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ದೇವರಾಜ ಅರಸು ಹಾದಿಯಲ್ಲೇ ಸಾಗುತ್ತಿದ್ದು, ಅವರ ಎಲ್ಲಾ ಕಾರ್ಯಕ್ರಮಗಳು ಸಮೀಕರಣಗೊಂಡು ದೇಶದ ಎಲ್ಲಾ ಧರ್ಮ, ಭಾಷಿಕರ ಅಭಿವೃದ್ಧಿಗೆ ಪೂರಕವಾಗಿವೆ.

ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಸೇರಿದಂತೆ ಎಲ್ಲಾ ನಾಯಕರ ಪ್ರೀತಿ ವಿಶ್ವಾಸದೊಂದಿಗೆ ಪಕ್ಷ ಸೇರಿದ್ದೇನೆ. ನನ್ನ 40 ವರ್ಷಗಳ ಅನುಭವದಲ್ಲಿ ಮಂತ್ರಿಯಾಗಿ ಅನೇಕ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಈ ಅನುಭವವನ್ನು ಪಕ್ಷ ಬಳಸಿಕೊಳ್ಳುವ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.

ನನ್ನೊಂದಿಗೆ ಕೈಜೋಡಿಸಿ: ಮೋದಿ ಆಡಳಿತದ ಅವಧಿಯಲ್ಲಿ ದೇಶದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆ ಆಗಿಲ್ಲ. ವಿಪಕ್ಷಗಳು ದಲಿತರ ಕಾಲೋನಿಗೆ ಹೋಗಿ ಬಿಜೆಪಿ ಸಂವಿಧಾನಕ್ಕೆ ದ್ರೋಹ ಬಗೆಯುತ್ತದೆ ಎಂದು ಅಪಪ್ರಚಾರ ಮಾಡುತ್ತಿವೆ. ತಾಲೂಕಿನ ಅಲ್ಪಸಂಖ್ಯಾತರ ರಕ್ಷಣೆ ನಮ್ಮೆಲ್ಲರ ಹೊಣೆ. ಅಂಜಬೇಡಿ, ನನ್ನೊಂದಿಗೆ ಕೈಜೋಡಿಸಿ, ನಾನು ನಿಮ್ಮೊಂದಿಗಿರುತ್ತೇನೆ ಎಂದು ಭರವಸೆ ನೀಡಿದರು.

ಸಚಿವ ಸ್ಥಾನ: ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ತಾಲೂಕಿನ ಸಮಗ್ರ ಅಭಿವೃದ್ಧಿಗೆ ವಿಶ್ವನಾಥ್‌ ಆಯ್ಕೆಯಾಗಬೇಕಿದೆ. ತಾಲೂಕಿನ ಮತದಾರರು ವಿಶ್ವನಾಥ್‌ ಅವರನ್ನು ಗೆಲ್ಲಿಸಿಕೊಟ್ಟರೆ, ಮುಖ್ಯಮಂತ್ರಿ ಯಡಿಯೂರಪ್ಪ ಇವರನ್ನು ಸಚಿವರನ್ನಾಗಿಸುತ್ತಾರೆ. ಕ್ಷೇತ್ರದಲ್ಲಿ ದ್ವೇಷದ ಮತ್ತು ದುಡ್ಡಿನ ರಾಜಕಾರಣ ನಿಲ್ಲಬೇಕಿದೆ. ವಿಶ್ವನಾಥ್‌ ಸೇರ್ಪಡೆಯಿಂದ ಪಕ್ಷಕ್ಕೆ ಬಲ ಬಂದಿದೆ ಎಂದರು. ಜಿಲ್ಲಾಧ್ಯಕ್ಷ ಎಂ.ಶಿವಣ್ಣ ಕಾರ್ಯಕರ್ತರ ಸಮ್ಮುಖದಲ್ಲಿ ವಿಶ್ವನಾಥ್‌ಗೆ ಬಿ.ಫಾರಂ ಹಸ್ತಾಂತರಿಸಿದರು.

ಕೊನೆ ಚುನಾವಣೆ: ಮಾಜಿ ಶಾಸಕ ಸಿ.ಎಚ್‌.ವಿಜಯಶಂಕರ್‌ ಮಾತನಾಡಿ, ಈ ಚುನಾವಣೆ ಬಹುಶಃ ವಿಶ್ವನಾಥ್‌ ಅವರ ಕೊನೆಯ ಚುನಾವಣೆಯಾಗಿರಬಹುದು. ಈ ಕಾರಣಕ್ಕಾಗಿ ಕ್ಷೇತ್ರದ ಜನತೆ ಅವರಿಗೆ ಮತ ನೀಡುವ ಮೂಲಕ ಮಂತ್ರಿಯನ್ನಾಗಿಸಬೇಕಿದೆ. ಹಿರಿಯರಾಗಿರುವ ವಿಶ್ವನಾಥ್‌ ಅನುಮತಿ ಇಲ್ಲದೆ ಘೋಷಣೆ ಮಾಡುತ್ತಿದ್ದೇನೆಂದರು. ವಿಧಾನಪರಿಷತ್‌ ಮಾಜಿ ಸದಸ್ಯ ಸಿದ್ದರಾಜು, ಮುಖಂಡ ನಾಗರಾಜ ಮಲ್ಲಾಡಿ, ನಗರಾಧ್ಯಕ್ಷ ರಾಜೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ವೆಂಕಟಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುರೇಶ್‌ಬಾಬು, ಕೆ.ಟಿ.ಗೋಪಾಲ್‌, ಹನಗೋಡು ಮಂಜುನಾಥ್‌, ಜಿಲ್ಲಾ ರೈತಮೋರ್ಚಾ ಉಪಾಧ್ಯಕ್ಷ ಬಿ.ಎನ್‌.ನಾಗರಾಜಪ್ಪ, ಚಂದ್ರು ಇತರರಿದ್ದರು.

ತಾಲೂಕು ಅಧ್ಯಕ್ಷ ಗೈರು: ಕಾರ್ಯಕ್ರಮಕ್ಕೆ ಬಿಜೆಪಿ ತಾಲೂಕು ಅಧ್ಯಕ್ಷ ಯೋಗಾನಂದಕುಮಾರ್‌ ಗೈರಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಸಂಸದ ಪ್ರತಾಪಸಿಂಹ ಹಾಗೂ ಯೋಗಾನಂದರ ನಡುವೆ ಮುಸುಕಿನ ಗುದ್ದಾಟದಿಂದಾಗಿ ಗೈರಾಗಿದ್ದಾರೆ ಎನ್ನಲಾಗುತ್ತಿದೆ. ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯರಾದ ಮಂಜು, ಪರಮೇಶ್‌, ಅಬ್ಟಾಸ್‌, ಅಣ್ಣಯ್ಯನಾಯ್ಕ, ಎಂ.ಶಿವಕುಮಾರ್‌, ಎ.ಪಿ.ಸ್ವಾಮಿ, ಗಣೇಶ್‌ ಕುಮಾರಸ್ವಾಮಿ, ಕುನ್ನೇಗೌಡ, ನವೀನ್‌ ರೈ ಸೇರಿದಂತೆ ಅನೇಕ ಮುಖಂಡರು ಪಕ್ಷ ಸೇರಿದರು.

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.