ವಿಜೃಂಭಣೆಯ ಶ್ರೀ ಅರ್ಕೇಶ್ವರಸ್ವಾಮಿ ಬ್ರಹ್ಮ ರಥೋತ್ಸವ


Team Udayavani, Feb 2, 2020, 3:00 AM IST

vijrunmbane

ಕೆ.ಆರ್‌.ನಗರ: ಪಟ್ಟಣದ ಹೊರ ವಲಯದಲ್ಲಿರುವ ಹಳೆ ಎಡತೊರೆಯ ಮೀನಾಕ್ಷಿ ಸಮೇತ ಶ್ರೀ ಅರ್ಕೇಶ್ವರಸ್ವಾಮಿ ಬ್ರಹ್ಮ ರಥೋತ್ಸವ ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ಶನಿವಾರ ಅತ್ಯಂತ ವಿಜೃಂಭಣೆಯಿಂದ ನಡೆಯಿತು.

ಬೆಳಗ್ಗೆ 11.30 ರಿಂದ 12.30ರವರೆಗೆ ಸಲ್ಲುವ ಮೇಷ ಲಗ್ನದಲ್ಲಿ ರಥಸಪ್ತಮಿಯ ಅಂಗವಾಗಿ ನಡೆದ ರಥೋತ್ಸವದಲ್ಲಿ ಕೆ.ಆರ್‌.ನಗರ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಆಗಮಿಸಿ ರಥೋತ್ಸವ ಕಣ್ತುಂಬಿಕೊಂಡರು.

ಉತ್ಸವ ಮೂರ್ತಿಗೆ ವಿಶೇಷ ಪೂಜೆ: ರಥೋತ್ಸವದ ಅಂಗವಾಗಿ ಬೆಳಗ್ಗೆ 5 ಗಂಟೆಯಿಂದಲೇ ತಹಶೀಲ್ದಾರ್‌ ಎಂ.ಮಂಜುಳಾ ಅವರ ನೇತೃತ್ವದಲ್ಲಿ ದೇವರಿಗೆ ಹೋಮ, ಹವನ ಮತ್ತಿತರ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು.

ರಥೋತ್ಸವ ಆರಂಭಕ್ಕೂ ಮುನ್ನ ದೇವರ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ ಮಂಗಳ ವಾದ್ಯಗಳೊಂದಿಗೆ ದೇವಾಲಯದಿಂದ ಮೆರವಣಿಗೆಯಲ್ಲಿ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ನೆರೆದಿದ್ದ ಭಕ್ತ ಸಮೂಹ ದೇವರಿಗೆ ಜೈ ಕಾರ ಹಾಕಿ ದೇವಾಲಯದ ಸುತ್ತ ಒಂದು ಸುತ್ತು ರಥ ಎಳೆದಾಗ ಹರ್ಷೋ ದ್ಗಾರಗೊಂಡ ಜನರು ಹಣ್ಣು-ದವನ ಎಸೆದು ಹರಕೆ ತೀರಿಸಿದರು.

ಅನ್ನ ಸಂತರ್ಪಣೆ: ಜಾತ್ರೆಗೆ ಬಂದಿದ್ದ ಭಕ್ತರು ಬೆಳಗ್ಗೆಯಿಂದ ರಾತ್ರಿಯವರೆಗೆ ಕಾವೇರಿ ನದಿಯಲ್ಲಿ ಪುಣ್ಯಸ್ನಾನ ಮಾಡಿ ನಂತರ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಹರಕೆ ಹೊತ್ತಿದ್ದ ಕೆಲವರು ದೇವಾಲಯದ ಆವರಣದಲ್ಲಿ ಮಜ್ಜಿಗೆ, ಪಾನಕ ಮತ್ತು ಆಹಾರ ಪದಾರ್ಥಗಳನ್ನು ತಯಾರಿಸಿ ಭಕ್ತರಿಗೆ ಬಡಿಸಿ ತಮ್ಮ ಹರಕೆಗಳನ್ನು ತೀರಿಸಿದರು.

ಜಿಪಂ ಸದಸ್ಯ ಡಿ.ರವಿಶಂಕರ್‌, ಪುರಸಭಾ ಸದಸ್ಯ ಕೆ.ಎಲ್‌.ಜಗದೀಶ್‌ ಸೇರಿದಂತೆ ಇತರೆ ಚುನಾಯಿತ ಜನಪ್ರತಿನಿಧಿಗಳು ರಥೋತ್ಸವಕ್ಕೆ ಚಾಲನೆ ನೀಡಿದರು. ನಂತರ ಶಾಸಕ ಸಾ.ರಾ.ಮಹೇಶ್‌ ಪಾಲ್ಗೊಂಡರು.

ಉಪಭಾಗಾಧಿಕಾರಿ ಬಿ.ಎನ್‌.ವೀಣಾ, ತಹಶೀಲ್ದಾರ್‌ ಎಂ.ಮಂಜುಳಾ, ಮುಖ್ಯಾಧಿಕಾರಿ ಕೆ.ಶಿವಣ್ಣ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವೈ.ಎಸ್‌.ಕುಮಾರ್‌, ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ನಿರ್ದೇಶಕ ಡಾ.ಎಂ.ಕೆ.ದೇವೇಂದ್ರ ಕುಮಾರ್‌, ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಜಿ.ಡಿಂಡಿಮಶಂಕರ್‌ ಸೇರಿದಂತೆ ಇತರೆ ಚುನಾಯಿತ ಜನಪ್ರತಿನಿಧಿಗಳು ಮತ್ತು ಮುಖಂಡರು ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.