ಮರಳಿನಲ್ಲಿ ಅರಳಿದ ಸಿದ್ಧಗಂಗಾ ಶ್ರೀ


Team Udayavani, Feb 18, 2019, 7:27 AM IST

m5-marali.jpg

ತಿ.ನರಸಿಪುರ: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಹಾಗೂ ಕಾಶ್ಮೀರದ ಪುಲ್ವಾಮಾದಲ್ಲಿ ಹುತಾತ್ಮರಾದ ಸೈನಿಕರಿಗೆ ಕುಂಭಮೇಳದಲ್ಲಿ ಮರಳು ಕಲಾಕೃತಿಯ ಮೂಲಕ ಕಲಾವಿದರು ಅಂತಿಮ ನಮನ ಸಲ್ಲಿಸಿದ್ದಾರೆ.

ತಿರುಮಕುಡಲು ಶ್ರೀ ಅಗಸ್ತೇಶ್ವರ ಸ್ವಾಮಿ ದೇವಸ್ಥಾನ ಸಮೀಪದ ಎದುರಿನಲ್ಲಿ  ಪ್ರತ್ಯೇಕವಾದ ಚಪ್ಪರ ನಿರ್ಮಿಸಿ ಅದರೊಳಗೆ ಸುಮಾರು 1.50 ಟನ್‌ ಮರಳು ಬಳಸಿ ಕಲಾವಿದ ಎನ್‌.ರಘುನಂದನ್‌ ಮತ್ತು ತಂಡದವರು ಈ ಕಲಾಕೃತಿಗಳನ್ನು ರಚಿಸಿದ್ದಾರೆ. 

ಸಿದ್ಧಗಂಗಾ ಮಠಾಧೀಶರಾಗಿದ್ದ  ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿಯರ ನಗುಮುಖವನ್ನು ಮರಳಿನಲ್ಲಿ ಕೆತ್ತಲಾಗಿದೆ. ಅದೇ ಮರಳಿನ ಗುಡ್ಡೆಯ ಹಿಂಭಾಗದಲ್ಲಿ ಸೈನ್ಯದ ಟೋಪಿ ಧರಿಸಿ, ಬಂದೂಕು ಹಿಡಿದರುವ ಇಬ್ಬರು ಸೈನಿಕರ ಮರಳು ಶಿಲ್ಪ ಸಿದ್ಧಪಡಿಸಲಾಗಿದೆ.

ಸುಮಾರು 12 ಗಂಟೆ ನಿರಂತರ ಶ್ರಮವಹಿಸಿರುವ ಕಲಾವಿದರು, ಸಿದ್ಧಗಂಗಾ ಸ್ವಾಮೀಜಿ ಮತ್ತು ಇತ್ತೀಚೆಗೆ ಹುತಾತ್ಮರಾದ ಸೈನಿಕರಿಗೆ ಕಲಾಕೃತಿಯ ಮೂಲಕ ನಮನ ಸಲ್ಲಿಸಿದ್ದಾರೆ. ಸೈನಿಕರ ತಲೆಯ ಮೇಲ್ಭಾಗದಲ್ಲಿ ಗೋಳಾಕಾರದ ಭೂಮಿ ಮತ್ತು ಅದರ ಮಧ್ಯದಲ್ಲಿ ಭಾರತದ ಭೂಪಟ ಮೂಡಿ ಬಂದಿದೆ.

ಅತ್ಯಂತ ನಾಜೂಕು ಹಾಗು ಅಚ್ಚುಕಟ್ಟಾಗಿ ಮರಳಿನಲ್ಲಿ ಕಲಾಕೃತಿಯನ್ನು ಬಿಡಿಸಲಾಗಿದೆ. ಇದು ಈಗ ಕುಂಭ ಮೇಳಾದ ಆಕರ್ಷಣೆಗಳಲ್ಲಿ ಒಂದಾಗಿದ್ದು ಭಕ್ತರು ಇದರ ಎದರು ನಿಂತು ಸೆಲ್ಫಿ ತೆಗೆಯುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಈ ಕುರಿತು ಮಾತನಾಡಿದ ಮರಳು ಶಿಲ್ಪಿ ಎನ್‌.ರಘುನಂದನ್‌, ಶಿಕ್ಷಣ, ಊಟ ಮತ್ತು ವಸತಿ ಕಲ್ಪಿಸಿ ಲಕ್ಷಾಂತರ ವಿದ್ಯಾರ್ಥಿಗ ಬಾಳ ಜ್ಯೋತಿಯಾಗಿ ಬೆಳಗುತ್ತಿರುವ- 

ಸಿದ್ಧಗಂಗೆಯ ಡಾ.ಶಿವಕುಮಾರ ಸ್ವಾಮೀಜಿಯ ಸ್ಮರಣೆಯನ್ನು ಮಣ್ಣಿನ ಕಲಾಕೃತಿ ಮೂಲಕ ಮಾಡಿದ್ದೇನೆ. ಹಾಗೆಯೇ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಸೈನಿಕರಿಗೆ ಸಲಾಂ ಸಲ್ಲಿಸಲು ಹಾಗೂ ಪುಲ್ವಾಮಾದಲ್ಲಿ ಉಗ್ರರು ನಡೆಸಿದ ಹೀನ ಕೃತ್ಯ ಖಂಡಿಸಿ, ಹುತಾತ್ಮರಾದ  ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪ್ರಯತ್ನ ಕಲೆಯ ಮೂಲಕ ಮಾಡಿದ್ದೇನೆ ಎಂದು ವಿವರಿಸಿದರು.

1.50 ಟನ್‌ ಮರಳು: ಯುವಬ್ರಿಗೇಡ್‌ ಸಂಘಟನೆಯವರು ಮರಳು ಮತ್ತು ಸ್ಥಳದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಸುಮಾರು 1.50 ಟನ್‌ ಮರಳು ಬಳಸಲಾಗಿದೆ. ನಿರಂತರ 12 ಗಂಟೆಗಳ ಶ್ರಮದಿಂದ ಇದು ಸಾಧ್ಯವಾಗಿದೆ. ಫೆ.19ರ ತನಕವೂ ಇರಲಿದೆ.

ಮರಳು ಒಣಗಿದರೆ ಕಲಾಕೃತಿಗೆ ಹಾನಿಯಾಗುವ ಸಾಧ್ಯತೆ ಇರುವುರಿಂದ ಸದಾ ಎಚ್ಚರ ವಹಿಸುತ್ತಿರಬೇಕು. ಮರಳಿನಲ್ಲಿ ನೀರಿನ ಅಂಶ ಇರುವಂತೆ ನೋಡಿಕೊಳ್ಳಬೇಕಾಗುತ್ತದೆ.  ಹೀಗಾಗಿ ಮೂರು ದಿನವೂ ಕಲಾಕೃತಿಯ ಬಳಿ ಇರಲಿದ್ದೇನೆ ಎಂದು ಹೇಳಿದರು.

ಸಿದ್ಧಗಂಗಾ ಸ್ವಾಮೀಜಿ ಹಾಗೂ ಹುತಾತ್ಮರಾದ ಸೈನಿಕರಿಗೆ ಈ ಮೂಲಕ ಶ್ರದ್ಧಾಂಜಲಿ ಸಲ್ಲಿಸುವ ಸಣ್ಣ ಪ್ರಯತ್ನ ಮಾಡಿದ್ದೇನೆ. ಸಿದ್ಧಗಂಗಾ ಶ್ರೀಗಳ ಕುತ್ತಿಗೆಯಿಂದ ಕೆಳ ಭಾಗಕ್ಕೆ ಕೇಸರಿ ಬಣ್ಣ ಹಚ್ಚಿದ್ದೆವೆ. ಸ್ವಾಮೀಜಿ ಸದಾ ಖಾವಿ ಧಿರುತ್ತಿದ್ದರಿಂದ ಈ ಬಣ್ಣ ಹಾಕಿದ್ದೇವೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.