ಅಧಿಪತ್ಯ ಸಾಧಿಸಲು ಸಿದ್ದು ಮತ್ತೆ ಅಖಾಡಕ್ಕೆ


Team Udayavani, Nov 28, 2021, 4:50 PM IST

ಅಧಿಪತ್ಯ ಸಾಧಿಸಲು ಸಿದ್ದು ಮತ್ತೆ ಅಖಾಡಕ್ಕೆ

ಮೈಸೂರು: ಮೈಸೂರು-ಚಾಮರಾಜನಗರ ಜಿಲ್ಲೆಗಳ ರಾಜಕಾರಣದಲ್ಲಿ ತಪ್ಪಿರುವ ತಮ್ಮ ಹಿಡಿತವನ್ನು ಮತ್ತೆ ಸಾಧಿಸಲು ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಈಗ ಅಖಾಡಕ್ಕೆ ಇಳಿದಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪರಾಭವ: ಜನತಾ ಪರಿವಾರದಲ್ಲಿದ್ದಾಗ ಹಾಗೂ ನಂತರ ಕಾಂಗ್ರೆಸ್‌ ಸೇರಿದಾಗ ಈ ಎರಡೂ ಜಿಲ್ಲೆಗಳ ರಾಜ ಕಾರಣದಲ್ಲಿ ಸಿದ್ದರಾಮಯ್ಯ ಅಧಿಪತ್ಯ ಸ್ಥಾಪಿಸಿ ದ್ದರು. ಅಸೆಂಬ್ಲಿಗೆ 2013ರಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತ ಸಾಧಿಸಿ ಸಿದ್ದರಾಮಯ್ಯ ಮುಖ್ಯಮಂತ್ರಿ ಗಾದಿಗೂ ಏರಿದರು. ಆದರೆ, 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನೆಲಕಚ್ಚಿತು. ಸ್ವತಃ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸುಮಾರು 35 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಂಡರು. ನಂತರ ನಡೆದ ಮೈಸೂರು, ಚಾಮರಾಜನಗರ ಎರಡೂ ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಸೋತಿತು. ಇದರಿಂದ ಸಿದ್ದರಾಮಯ್ಯ ಕೆಲವು ದಿನ ಮೈಸೂರಿಗೆ ಭೇಟಿ ಕೊಟ್ಟಿರಲಿಲ್ಲ. ಈಗ, ಚುನಾವಣೆಯನ್ನು ಸಿದ್ದರಾಮಯ್ಯ ಸವಾಲಾಗಿ ಸ್ವೀಕರಿಸಿದ್ದು ಜಿಲ್ಲೆಯಲ್ಲಿ ತಮ್ಮ ನಾಯಕತ್ವ ಗಟ್ಟಿಗೊಳಿಸಿಕೊಳ್ಳಲು ಮುಂದಾಗಿದ್ದಾರೆ.

ಟಿಕೆಟ್‌ ಕೊಡಿಸುವಲ್ಲಿ ಯಶಸ್ವಿ: ಸಿದ್ದರಾಮಯ್ಯ ಅವರು ಶುಕ್ರವಾರ ಮೈಸೂರಿನಲ್ಲಿ ತಮ್ಮ ಪಕ್ಷದ ಶಾಸಕರು, ಮಾಜಿ ಶಾಸಕರು, ಮುಖಂಡರ ಸಭೆ ಕರೆದಿ ದ್ದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಸೂಚಿಸಿದರು.

ಈ ಸಭೆ ನಂತರ ಶನಿವಾರದಿಂದಲೇ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್‌ ಪ್ರಚಾರ ಸಭೆ ಆರಂಭವಾಗಿದೆ. ಈ ಕ್ಷೇತ್ರದಲ್ಲಿ ಹಾಲಿ ವಿಧಾನಪರಿಷತ್‌ ಸದಸ್ಯ ಆರ್‌.ಧರ್ಮಸೇನಾ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನಿರಾಕರಿಸಿ ನಿವೃತ್ತ ಅಧಿಕಾರಿ ಡಾ.ಡಿ.ತಿಮ್ಮಯ್ಯ ಅವರಿಗೆ ಟಿಕೆಟ್‌ ಕೊಡಿಸುವಲ್ಲಿಯೂ ಸಿದ್ದರಾಮಯ್ಯ ಅವರ ಪಾತ್ರವೇ ಮುಖ್ಯವಾಗಿದೆ.

ವಾಟಾಳ್‌ ವಿರೋಧ: ಮತದಾರರಿಗೆ 2 ಮತ ನೀಡಲು ಅವಕಾಶವಿದ್ದರೂ ಸಿಂಗಲ್‌ ವೋಟು ನೀಡುವಂತೆ ರಾಜಕೀಯ ಪಕ್ಷಗಳು ಹೇಳಿಕೆ ನೀಡಿದ್ದು ಈ ನಿಲುವನ್ನು ಈ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಕನ್ನಡ ಚಳವಳಿ ನಾಯಕ, ಮಾಜಿ ಶಾಸಕ ವಾಟಾಳ್‌ ನಾಗರಾಜ್‌ ವಿರೋ ಧಿಸಿದ್ದಾರೆ. ಇದು ಪ್ರಾಶಸ್ತ್ಯ ಮತಗಳ ಚುನಾವಣೆ. ಮತದಾರರ ಹಕ್ಕನ್ನು ಕಸಿಯಲು ಯಾರಿಗೂ ಅಧಿಕಾರವಿಲ್ಲ. ಕಣದಲ್ಲಿ 7 ಮಂದಿ ಇದ್ದೇವೆ. ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ನಾಯಕರು ಅವರ ಬೆಂಬಲಿತ ಮತದಾರರು ಎರಡು, ಮೂರು ಹೀಗೆ ಪ್ರಾಶಸ್ತ್ಯ ಮತ ನೀಡಲು ಪ್ರೋತ್ಸಾಹಿಸಬೇಕು. ರಾಜಕೀಯ ನಾಯಕರು ತಮ್ಮ ಪ್ರಬುದ್ಧತೆ ಮೆರೆಯಬೇಕು ಎಂದು ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.

ಸಿಂಗಲ್‌ ವೋಟು ನೀಡಲು ಸೂಚನೆ : ಕಾಂಗ್ರೆಸ್‌ ದ್ವಿಸದಸ್ಯ ಕ್ಷೇತ್ರದ ಈ ಚುನಾವಣೆಯಲ್ಲಿ ತಮಗಿರುವ ಬೆಂಬಲದ ಆಧಾರದ ಮೇಲೆ ಒಬ್ಬರೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಪ್ರತಿ ಮತದಾರರಿಗೆ 2 ಮತ ನೀಡಲು ಅವಕಾಶವಿದ್ದರೂ ಸಿಂಗಲ್‌ ವೋಟು ನೀಡುವಂತೆ ತಮ್ಮ ಬೆಂಬಲಿತ ಮತದಾರರಿಗೆ ಕಾಂಗ್ರೆಸ್‌ ಸೂಚನೆ ನೀಡಿದೆ. ಪ್ರಾಶಸ್ತ್ಯದ ಮತಗಳ ಚುನಾವಣೆ ಇದಾಗಿದ್ದರೂ ರಿಸ್ಕ್ ತೆಗೆದುಕೊಳ್ಳಲು ಕಾಂಗ್ರೆಸ್‌ ತಯಾರಿಲ್ಲ. ಇನ್ನು ಬಿಜೆಪಿ ಹಾಗೂ ಜೆಡಿಎಸ್‌ ಕೂಡ ತಮ್ಮ ಅಭ್ಯರ್ಥಿಗಳಿಗೆ ಸಿಂಗಲ್‌ ವೋಟು ನೀಡುವಂತೆ ಪ್ರಚಾರ ನಡೆಸಿದೆ. ಈ ಎರಡೂ ಪಕ್ಷಗಳ ನಾಯಕರೂ ತಮ್ಮ ಬೆಂಬಲಿತ ಮತದಾರರ 2ನೇ ಪ್ರಾಶಸ್ತ್ಯದ ಮತಗಳ ಚಲಾವಣೆ ವಿಚಾರದಲ್ಲಿ ರಿಸ್ಕ್ ತೆಗೆದುಕೊಳ್ಳಲು ಸಿದ್ಧವಿಲ್ಲ.

ಇದು ಪ್ರಾಶಸ್ತ್ಯದ ಮತಗಳ ಚುನಾವಣೆ. ಜೆಡಿಎಸ್‌ನಿಂದ ದೂರ ಸರಿದಿರುವ ನಾನು ಈ ಚುನಾವಣೆಯಲ್ಲಿ ಕಾಂಗ್ರೆಸ್‌, ಬಿಜೆಪಿ ಎರಡನ್ನೂ ಬೆಂಬಲಿಸುತ್ತೇನೆ. ಒಂದು ಮತ ಬಿಜೆಪಿಗೆ ಮತ್ತೂಂದು ಮತ ಕಾಂಗ್ರೆಸ್‌ಗೆ ನೀಡುವಂತೆ ಬೆಂಬಲಿಗರಲ್ಲಿ ಮನವಿ ಮಾಡುವೆ. ● ಸಂದೇಶ್‌ ನಾಗರಾಜ್‌, ವಿಧಾನಪರಿಷತ್‌ ಸದಸ್ಯ ಕಾಂಗ್ರೆಸ್‌,

ಬಿಜೆಪಿ, ಜೆಡಿಎಸ್‌ ನಾಯಕರು ಅವರ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯದ ಮತ ನೀಡುವಂತೆ ಕೇಳಲಿ. ಆದರೆ, 2ನೇ ಪ್ರಾಶಸ್ತ್ಯದ ಮತಗಳನ್ನು ಯಾರಿಗೂ ನೀಡಬಾರದೆಂದು ಹೇಳುವುದು ಸರಿಯಲ್ಲ. ಇದು ಮತದಾರರ ಹಕ್ಕಿಗೆ ಚ್ಯುತಿ ತಂದಂತೆ. – ವಾಟಾಳ್‌ ನಾಗರಾಜ್‌, ಅಭ್ಯರ್ಥಿ

-ಕೂಡ್ಲಿ ಗುರುರಾಜ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.