ಸಿದ್ದರಾಮಯ್ಯನವರೇ ಮಡಿಕೇರಿ ಮುತ್ತಿಗೆ ಹಿಂತೆಗೆದುಕೊಳ್ಳಿ: ಹೆಚ್.ವಿಶ್ವನಾಥ್

ಚುನಾವಣೆ ಹತ್ತಿರ ಬರುತ್ತಿದೆ, ಎನಾದರು ಅನಾಹುತ ಆದರೆ ಯಾರು ಹೊಣೆ

Team Udayavani, Aug 22, 2022, 2:42 PM IST

vishwanath H

ಮೈಸೂರು: ನಾಡಿನ ಹಿತ, ರಾಜಕಾರಣದ ಗೌರವರದ ಪರವಾಗಿ ಮಡಿಕೇರಿ ಮುತ್ತಿಗೆ ಕಾರ್ಯಕ್ರಮ ಹಿಂದೆ ತಗೆದುಕೊಳ್ಳಿ.ಚುನಾವಣೆ ಹತ್ತಿರ ಬರುತ್ತಿದೆ, ಎನಾದರು ಅನಾಹುತ ಆದರೆ ಯಾರು ಹೊಣೆ ಎಂದು ಸಿದ್ದರಾಮಯ್ಯ ಅವರಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮನವಿ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದೆ ವಿಚಾರ ಬಹಳ ದೊಡ್ಡದಾಗಿದೆ.ಕಾಂಗ್ರೆಸ್ ಕಾರ್ಯಕರ್ತರ ಜತೆಗೆ ಕೊಡಗಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಸಂಘಟನೆ ಜೋರಾಗುತ್ತಿದೆ. ಸಿದ್ದರಾಮಯ್ಯ ರಾಜಕೀಯ ಮುತ್ಸದ್ದಿ,ರಾಜಕೀಯ ಏಳು ಬೀಳು ಕಂಡವರು ಎಂದರು.

ಮೊಟ್ಟೆ ಎಸೆಯೋದು ಸರಿ ಅಂತಾ ನಾವ್ಯಾರೂ ಹೇಳುತ್ತಿಲ್ಲ.ಮುಖ್ಯಮಂತ್ರಿ ಬೊಮ್ಮಾಯಿ,ಯಡಿಯೂರಪ್ಪ ಕೂಡ ಘಟನೆಯನ್ನು ಖಂಡಿಸಿದ್ದಾರೆ.ಇಷ್ಟಾದರೂ ಸಿದ್ದರಾಮಯ್ಯ ಕೊಡಗು ಚಲೋ ಮಾಡುತ್ತೇವೆ ಅಂತಾರೆ. ದಯಮಾಡಿ ಸಿದ್ದರಾಮಯ್ಯ ಅವರೇ ಮತ್ತೆ ಪರಿಶೀಲನೆ ಮಾಡಲಿ. ಇಂದಿರಾಗಾಂಧಿ ಮೇಲೆ ಸಾಕಷ್ಟು ಅಟ್ಯಾಕ್ ಆಗಿತ್ತು.ಮೂಗು ಒಡೆದಿತ್ತು, ಹಾಸನದಲ್ಲಿ ಸಭೆಯಲ್ಲಿದ್ದ ವೇಳೆ ಹಾವುಗಳನ್ನ ಬಿಟ್ಟಿದ್ದರು. ಚಿದಂಬರಂಗೆ ಪ್ರೆಸ್ ಕಾನ್ಫರೆನ್ಸ್ ಮಾಡುವಾಗ ಒಬ್ಬ ಶೂ ತೋರಿಸಿದ್ದ.ಇವೆಲ್ಲವೂ ಜನತಂತ್ರವ್ಯವಸ್ಥೆಯ ಜನಾಕ್ರೋಶದ ಉದಾಹರಣೆ.ರಾಜೀವ್ ಗಾಂಧಿ, ಇಂದಿರಾಗಾಂಧಿಯನ್ನೇ ಕೊಂದರು.ಮೊಟ್ಟೆ ಒಡೆದದ್ದು ಖಂಡನೀಯ ಎಂದರು.

ಮೊಟ್ಟೆ ವಿಚಾರ ನ್ಯಾಶನಲ್ ವಿಚಾರ ಆಗಿದೆ. ಪ್ರವಾಹದಲ್ಲಿ ಜನ ಸಮಸ್ಯೆ ಸಿಲುಕಿದ್ದಾರೆ.ಮೊಟ್ಟೆ ಎಸೆದದ್ದನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡು ಮಡಿಕೇರಿ ಚಲೋ ಹೋಗೋದು ನಿಮ್ಮಂತ  ನಾಯಕರಿಗೆ ಶೋಭಾಯಮಾನವಲ್ಲ.ರಾಜ್ಯದ ಸಮಸ್ಯೆಗಳನ್ನ ಪ್ರತಿಷ್ಠೆಯಾಗಿ ತಗೆದುಕೊಳ್ಳಿ.ಈ ಬಗ್ಗೆ ಸದನದಲ್ಲಿ  ಮಾತನಾಡಿ. ಪುಂಡ ಪೋಕರಿ ಮೊಟ್ಟೆ ಎಸೆದದನ್ನ ಪ್ರತಿಷ್ಠೆಯಾಗಿ ತೆಗೆದುಕೊಳ್ಳುವುದು ಸರಿಯಲ್ಲ.ಕೂಡಲೇ ಮಡಿಕೇರಿ ಚಲೋ ಕೈಬಿಡಿ ಎಂದರು.

ಮುಖ್ಯಮಂತ್ರಿಗಳು ಯಡಿಯೂರಪ್ಪ, ಎಸ್. ಎಂ. ಕೃಷ್ಣ ಮಧ್ಯಸ್ಥಿಕೆ ವಹಿಸಿ ಎರಡು ಕಡೆಯವರನ್ನೂ ಕೂರಿಸಿ ಮಾತನಾಡಿ.ನಾಡಿನಲ್ಲಿ ಶಾಂತಿ ನೆಲೆಸಲು ನಾಡಿನ ಪರವಾಗಿ ವಿನಮ್ರವಾಗಿ ಮನವಿ ಮಾಡುತ್ತಿದ್ದೇನೆ ಎಂದರು.

ದಂಡೆತ್ತಿ ಹೋಗಿ ಮಡಿಕೇರಿ ಚಲೋ ಮಾಡುವ ಬದಲು.ಕೊಡಗು ಅಭಿವೃದ್ಧಿ, ರಾಜಕೀಯ ಸ್ಥಾನಮಾನ ,ಇನ್ನೂ ಹಲವು ಸಮಸ್ಯೆ ಗಳ ಬಗ್ಗೆ ಚರ್ಚೆ ಮಾಡಲಿ‌.ಎಡರೂ ಪಕ್ಷದ ನಾಯಕರು, ಜೆಡಿಎಸ್ ನಾಯಕರು, ನಾಡಿನ ಪ್ರಮುಖ ಪಕ್ಷಗಳ ನಾಯಕರು ಒಂದು ಕಡೆ ಕುಳಿತು ಸಮಸ್ಯೆ ಬಗೆಹರಿಸಬೇಕು ಎಂದರು.

ಯಾರು ಯಾರಿಗೂ ದೊಡ್ಡವರಲ್ಲ. ಸಿದ್ದರಾಮಯ್ಯ ಹಿರಿಯರ ಮಾತನ್ನು ಕೇಳಬೇಕು. ನಾವು ಯಾರು ದೊಡ್ಡವರಲ್ಲ, ಸಿದ್ದರಾಮಯ್ಯ ಸಹ ಒಪ್ಪಿಕೊಳ್ಳಬೇಕು. ಅಂದೇ ಬಿಜೆಪಿ ಜನೋತ್ಸವ ಮಾಡುತ್ತಿದ್ದು, ಸವಾಲಿಗೆ ಸವಾಲು ಸರಿಯಲ್ಲ. ಇದನ್ನು ಅನುಭವಿಸುವವರು ಯಾರು? ಕೊಡಗಿನ ಪ್ರವಾಸೋದ್ಯಮಕ್ಕೆ ಹೊಡೆತ ಬಿದ್ದಿದೆ. ಕೊಡವರಿಗೆ ರಾಜಕೀಯ ಪ್ರಾಧಾನ್ಯತೆ ಸಿಕ್ಕಿಲ್ಲ. ಕಾಂಗ್ರೆಸ್ ನವರು ಅದನ್ನು ಮಾಡಿಲ್ಲ.ಕೊಡಗಿನಲ್ಲಿ ಹಲವು ಸಮಸ್ಯೆಗಳಿವೆ. ಶಾಂತಿಯನ್ನು ಯಾರೂ ಕದಡಬಾರದು. ಕೊಡಗಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಪ್ರತ್ಯೇಕ ಪಾರ್ಲಿಮೆಂಟ್ ವ್ಯವಸ್ಥೆ ಮಾಡಬೇಕು. ಮೊಟ್ಟೆ, ಕೋಳಿ ಮಾಂಸ, ದೇವರು ಆಮೇಲೆ ಮಾತನಾಡೋಣ ಎಂದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.