”ಎಲ್ಲಿ ಬೇಕಾದರೂ ನಿಲ್ಲುವವನು ನಾಯಕ”: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತಿರುಗೇಟು
Team Udayavani, Nov 14, 2022, 3:43 PM IST
ಮೈಸೂರು: “ಎಲ್ಲಿ ಬೇಕಾದರೂ ನಿಲ್ಲುವವನು ನಾಯಕ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಈ ಮೂಲಕ ಚುನಾವಣೆಗೆ ಕ್ಷೇತ್ರ ಹುಡುಕುತ್ತಿದ್ದಾರೆಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧಿಸುವ ಅವಕಾಶವಿದೆ. ಜನ ಬಯಸಿದ ಕಡೆ ಸ್ಪರ್ಧೆ ಮಾಡುತ್ತೇನೆ. ಕೋಲಾರದವರು ಬಯಸಿದರೆ ಕೋಲಾರ, ವರುಣದವರು ಬಯಸಿದರೆ ವರುಣ ಎಂದರು.
ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ಜನ್ಮ ಕೊಟ್ಟೆ ಎಂಬ ಎಚ್ಡಿಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು, ನಾನು ಎಂಟು ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರು. ಕುಮಾರಸ್ವಾಮಿ ರಾಜಕೀಯಕ್ಕೆ ಬಂದಿದ್ದು ಯಾವಾಗ? 1996 ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದರು. ನಾನು ಅಷ್ಟೊತ್ತಿಗೆ ಚುನಾವಣೆ ಗೆದ್ದಿರಲಿಲ್ಲವೇ? ನಾನು ಹೋಗದ ಕಾರಣ ಸಿದ್ದರಾಮಯ್ಯ ಗೆದ್ದರು ಎಂಬ ಮಾತುಗಳು ಬಾಲಿಶ. ಮತ ಹಾಕಿದ ಮತದಾರರಿಗೆ ಮಾಡಿದ ಅವಮಾನವಿದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ
ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ
ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ
ಡೈಲಿಡೋಸ್:ಫ್ಲೆಕ್ಸ್ ಸಾಹೇಬ್ರ ಫಿಕ್ಸ್ಡ್ ರಾಜಕೀಯ-ಇವ್ರಿಗೆ ಗೆಲ್ಲೋಕ್ಕಿಂತ ನಿಲ್ಲೋದೇ ಮುಖ್ಯ