ಜನರು ರಾಮಮಂದಿರಕ್ಕೆ ದೇಣಿಗೆ ನೀಡುತ್ತಿದ್ದಾರೆ, ಅದು ಬಿಜೆಪಿಗಾಗಿ ಅಲ್ಲ: ಸಿದ್ದರಾಮಯ್ಯ
Team Udayavani, Feb 20, 2021, 12:57 PM IST
ಮೈಸೂರು: ಜನರು ರಾಮ ಮಂದಿರಕ್ಕೆ ದೇಣಿಗೆ ನೀಡುತ್ತಿದ್ದಾರೆ. ಅದು ಬಿಜೆಪಿಗಾಗಿ ಅಲ್ಲ. ಲೆಕ್ಕ ಕೇಳುವ ಅಧಿಕಾರ ನನಗೆ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ದೇಶದ ಪ್ರಜೆ, ನಾನು ದುಡ್ಡು ಕೊಡಲಿ ಬಿಡಲಿ. ಲೆಕ್ಕ ಕೊಡಬೇಕಾಗಿರುವುದು ಅವರ ಕೆಲಸ, ಕೇಳುವುದು ನಮ್ಮ ಹಕ್ಕು. ಲೆಕ್ಕೆ ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂದರೆ ಹಣ ದುರುಪಯೋಗವಾಗುತ್ತಿದೆ ಅದರ ಅರ್ಥ ಎಂದು ಆರೋಪಿಸಿದರು.
ಇದನ್ನೂ ಓದಿ:ರಾಮಮಂದಿರ ವಿವಾದಾತ್ಮಕ ಹೇಳಿಕೆಯಿಂದ ಕಾಂಗ್ರೆಸ್ ಧೂಳಿಪಟವಾಗಲಿದೆ: ಬಿ.ವೈ.ವಿಜಯೇಂದ್ರ
ಈ ಹಿಂದೆಯೂ ಇವರು ದೇಣಿಗೆ ಸಂಗ್ರಹಿಸಿ ಲೆಕ್ಕ ಕೊಟ್ಟಿಲ್ಲ. ಇದರ ಅರ್ಥ ಏನು ಎಂದು ಅವರೇ ಹೇಳಬೇಕು ಎಂದು ಸಿದ್ದರಾಮಯ್ಯ ಹೇಳಿದರು.